Homeಮುಖಪುಟಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ 'ಬಾಂಬ್' ನಿಷ್ಕ್ರಿಯ!

ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ರಜಪೂತ್ ಕರ್ಣಿ ಸೇನಾದ ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ.

- Advertisement -
- Advertisement -

ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಲಕ್ಷ್ಮೀ ಬಾಂಬ್ ಟ್ರೈಲರ್ ಮತ್ತು ಬುರ್ಜ್ ಖಲೀಫಾ ಹಾಡುಗಳು ಸಾಕಷ್ಟು  ಹವಾ ಕ್ರಿಯೇಟ್ ಮಾಡಿವೆ. ಇದು ಚಿತ್ರತಂಡಕ್ಕೆ ಖುಷಿಯ ವಿಚಾವಾದರೆ, ಇತ್ತ ಕೆಲ ಸಂಘಟನೆಗಳು ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ.

ಲಕ್ಷ್ಮೀ ಬಾಂಬ್‌ನ ಟ್ರೈಲರ್‌ ತಮಾಷೆಯ ಮತ್ತು ಭಯಾನಕ ದೃಶ್ಯಗಳಿಂದ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಯಿತು. ಲೈಂಗಿಕ ಅಲ್ಪಸಂಖ್ಯಾತರಾಗಿ ನಟ ಅಕ್ಷಯ್ ಕುಮಾರ್ ಪಾತ್ರವು ಈಗಾಗಲೇ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

ಆದರೆ ಇಂದು(ಅ.29) ರಾಘವ ಲಾರೆನ್ಸ್ ನಿರ್ದೇಶಿಸಿದ ಚಿತ್ರವು ತನ್ನ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಹೋಗಿ ಸ್ಕ್ರೀನಿಂಗ್ ಅನ್ನು ಪೋಸ್ಟ್ ಮಾಡಿದೆ. ಜೊತೆಗೆ ಚಿತ್ರ ತಯಾರಕರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಯೊಂದಿಗೆ ಚರ್ಚಿಸಿ, ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.

ಚಿತ್ರದ ಶೀರ್ಷಿಕೆಗೆ ವಿರೋಧಗಳು ಬಂದ ಹಿನ್ನೆಲೆ, ಚಿತ್ರ ವೀಕ್ಷಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಚಿತ್ರದ ನಿರ್ಮಾಪಕರಾದ ಶಬಿನಾ ಖಾನ್, ತುಷಾರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ಈಗ ತಮ್ಮ ಚಿತ್ರದ ಹೆಸರನ್ನು ಲಕ್ಷ್ಮೀ ಬಾಂಬ್ ಬದಲು ಲಕ್ಷ್ಮೀ ಎಂದು ಬದಲಾಯಿಸಲಿದ್ದಾರೆ.

ಇದನ್ನೂ ಓದಿ: ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಇನ್ನು ಈ ಚಿತ್ರವನ್ನು ಬಹಿಷ್ಕರಿಸುವಂತೆ ಅನೇಕ ಜನರು ಒತ್ತಾಯಿಸಿದ್ದಾರೆ. ಚಿತ್ರದ ಹೆಸರು ಹಿಂದು ದೇವತೆಗೆ ಅವಮಾನ ಮಾಡುತ್ತದೆ. ಇದರಿಂದ ಹಿಂದೂಗಳ ಭಾವನೆಗೆ ಪೆಟ್ಟು ಬೀಳುತ್ತದೆ ಎಂದು ಹೇಳಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ #bycottlaxmibomb ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

 

ಹೀಗಾಗಿ ಚಿತ್ರದ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿ ರಜಪೂತ್ ಕರ್ಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆಹ್ರೋತ್ರಾ ಚಿತ್ರದ ನಿರ್ಮಾಪಕರಿಗೆ ನಿನ್ನೆ(ಅ.28) ಲೀಗಲ್ ನೋಟಿಸ್ ಕಳುಹಿಸಿದ್ದರು. ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ. ಲಕ್ಷ್ಮಿ ದೇವಿಯನ್ನು ಅವಮಾನಿಸಲು ತಯಾರಕರು ಉದ್ದೇಶಪೂರ್ವಕವಾಗಿ ಚಿತ್ರದ ಶೀರ್ಷಿಕೆಯನ್ನು ಇಟ್ಟುಕೊಂಡಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

ಅಕ್ಷಯ್ ಕುಮಾರ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಥ್ರಿಲ್ಲರ್ ಮತ್ತು ಹಾಸ್ಯ ತುಂಬಿರುವ ಚಿತ್ರ ಈಗ ಲಕ್ಷ್ಮಿ ಎಂದು ಹೆಸರು ಬದಲಾಗಿದೆ. ಈ ಚಿತ್ರವು ಲಾರೆನ್ಸ್ ನಿರ್ದೇಶನದ 2011 ರ ತಮಿಳು ಚಿತ್ರ ಕಾಂಚನ ರೀಮೇಕ್ ಆಗಿದೆ. ಇದು ಕನ್ನಡದಲ್ಲಿ ಕಲ್ಪನ ಹೆಸರಿನಲ್ಲಿಯಲ್ಲಿಯೂ ಸಹ ರೀಮೇಕ್ ಆಗಿತ್ತು. ‘ಲಕ್ಷ್ಮಿ’ ಲಾರೆನ್ಸ್  ಅವರ ನಿರ್ದೇಶನದ ಚೊಚ್ಚಲ ಹಿಂದಿ ಚಿತ್ರವಾಗಿದೆ.

ಚಿತ್ರದಲ್ಲಿ ಬರುವ ಕೆಲ ಪಾತ್ರಗಳ ಹೆಸರುಗಳನ್ನು ಇಟ್ಟುಕೊಂಡು ಚಿತ್ರ ಬಹಿಷ್ಕರಣೆಗೆ ಕರೆ ನೀಡುವುದು, ಚಿತ್ರದ ಹೆಸರು ಬದಲಾವಣೆಗೆ ಒತ್ತಾಯಿಸುವುದು ಇತ್ತಿಚೆಗೆ ಹೆಚ್ಚಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿಂದೆ 2016 ರಲ್ಲಿ ತೆಲುಗಿನಲ್ಲಿ ಲಕ್ಷ್ಮಿ ಬಾಂಬ್ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿತ್ತು.


ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...