Homeಮುಖಪುಟಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ 'ಬಾಂಬ್' ನಿಷ್ಕ್ರಿಯ!

ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ರಜಪೂತ್ ಕರ್ಣಿ ಸೇನಾದ ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ.

- Advertisement -
- Advertisement -

ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಲಕ್ಷ್ಮೀ ಬಾಂಬ್ ಟ್ರೈಲರ್ ಮತ್ತು ಬುರ್ಜ್ ಖಲೀಫಾ ಹಾಡುಗಳು ಸಾಕಷ್ಟು  ಹವಾ ಕ್ರಿಯೇಟ್ ಮಾಡಿವೆ. ಇದು ಚಿತ್ರತಂಡಕ್ಕೆ ಖುಷಿಯ ವಿಚಾವಾದರೆ, ಇತ್ತ ಕೆಲ ಸಂಘಟನೆಗಳು ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ.

ಲಕ್ಷ್ಮೀ ಬಾಂಬ್‌ನ ಟ್ರೈಲರ್‌ ತಮಾಷೆಯ ಮತ್ತು ಭಯಾನಕ ದೃಶ್ಯಗಳಿಂದ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಯಿತು. ಲೈಂಗಿಕ ಅಲ್ಪಸಂಖ್ಯಾತರಾಗಿ ನಟ ಅಕ್ಷಯ್ ಕುಮಾರ್ ಪಾತ್ರವು ಈಗಾಗಲೇ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

ಆದರೆ ಇಂದು(ಅ.29) ರಾಘವ ಲಾರೆನ್ಸ್ ನಿರ್ದೇಶಿಸಿದ ಚಿತ್ರವು ತನ್ನ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಹೋಗಿ ಸ್ಕ್ರೀನಿಂಗ್ ಅನ್ನು ಪೋಸ್ಟ್ ಮಾಡಿದೆ. ಜೊತೆಗೆ ಚಿತ್ರ ತಯಾರಕರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಯೊಂದಿಗೆ ಚರ್ಚಿಸಿ, ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.

ಚಿತ್ರದ ಶೀರ್ಷಿಕೆಗೆ ವಿರೋಧಗಳು ಬಂದ ಹಿನ್ನೆಲೆ, ಚಿತ್ರ ವೀಕ್ಷಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಚಿತ್ರದ ನಿರ್ಮಾಪಕರಾದ ಶಬಿನಾ ಖಾನ್, ತುಷಾರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ಈಗ ತಮ್ಮ ಚಿತ್ರದ ಹೆಸರನ್ನು ಲಕ್ಷ್ಮೀ ಬಾಂಬ್ ಬದಲು ಲಕ್ಷ್ಮೀ ಎಂದು ಬದಲಾಯಿಸಲಿದ್ದಾರೆ.

ಇದನ್ನೂ ಓದಿ: ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಇನ್ನು ಈ ಚಿತ್ರವನ್ನು ಬಹಿಷ್ಕರಿಸುವಂತೆ ಅನೇಕ ಜನರು ಒತ್ತಾಯಿಸಿದ್ದಾರೆ. ಚಿತ್ರದ ಹೆಸರು ಹಿಂದು ದೇವತೆಗೆ ಅವಮಾನ ಮಾಡುತ್ತದೆ. ಇದರಿಂದ ಹಿಂದೂಗಳ ಭಾವನೆಗೆ ಪೆಟ್ಟು ಬೀಳುತ್ತದೆ ಎಂದು ಹೇಳಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ #bycottlaxmibomb ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

 

ಹೀಗಾಗಿ ಚಿತ್ರದ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿ ರಜಪೂತ್ ಕರ್ಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆಹ್ರೋತ್ರಾ ಚಿತ್ರದ ನಿರ್ಮಾಪಕರಿಗೆ ನಿನ್ನೆ(ಅ.28) ಲೀಗಲ್ ನೋಟಿಸ್ ಕಳುಹಿಸಿದ್ದರು. ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ. ಲಕ್ಷ್ಮಿ ದೇವಿಯನ್ನು ಅವಮಾನಿಸಲು ತಯಾರಕರು ಉದ್ದೇಶಪೂರ್ವಕವಾಗಿ ಚಿತ್ರದ ಶೀರ್ಷಿಕೆಯನ್ನು ಇಟ್ಟುಕೊಂಡಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

ಅಕ್ಷಯ್ ಕುಮಾರ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಥ್ರಿಲ್ಲರ್ ಮತ್ತು ಹಾಸ್ಯ ತುಂಬಿರುವ ಚಿತ್ರ ಈಗ ಲಕ್ಷ್ಮಿ ಎಂದು ಹೆಸರು ಬದಲಾಗಿದೆ. ಈ ಚಿತ್ರವು ಲಾರೆನ್ಸ್ ನಿರ್ದೇಶನದ 2011 ರ ತಮಿಳು ಚಿತ್ರ ಕಾಂಚನ ರೀಮೇಕ್ ಆಗಿದೆ. ಇದು ಕನ್ನಡದಲ್ಲಿ ಕಲ್ಪನ ಹೆಸರಿನಲ್ಲಿಯಲ್ಲಿಯೂ ಸಹ ರೀಮೇಕ್ ಆಗಿತ್ತು. ‘ಲಕ್ಷ್ಮಿ’ ಲಾರೆನ್ಸ್  ಅವರ ನಿರ್ದೇಶನದ ಚೊಚ್ಚಲ ಹಿಂದಿ ಚಿತ್ರವಾಗಿದೆ.

ಚಿತ್ರದಲ್ಲಿ ಬರುವ ಕೆಲ ಪಾತ್ರಗಳ ಹೆಸರುಗಳನ್ನು ಇಟ್ಟುಕೊಂಡು ಚಿತ್ರ ಬಹಿಷ್ಕರಣೆಗೆ ಕರೆ ನೀಡುವುದು, ಚಿತ್ರದ ಹೆಸರು ಬದಲಾವಣೆಗೆ ಒತ್ತಾಯಿಸುವುದು ಇತ್ತಿಚೆಗೆ ಹೆಚ್ಚಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿಂದೆ 2016 ರಲ್ಲಿ ತೆಲುಗಿನಲ್ಲಿ ಲಕ್ಷ್ಮಿ ಬಾಂಬ್ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿತ್ತು.


ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...