Homeಮುಖಪುಟಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ 'ಬಾಂಬ್' ನಿಷ್ಕ್ರಿಯ!

ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ರಜಪೂತ್ ಕರ್ಣಿ ಸೇನಾದ ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ.

- Advertisement -
- Advertisement -

ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಲಕ್ಷ್ಮೀ ಬಾಂಬ್ ಟ್ರೈಲರ್ ಮತ್ತು ಬುರ್ಜ್ ಖಲೀಫಾ ಹಾಡುಗಳು ಸಾಕಷ್ಟು  ಹವಾ ಕ್ರಿಯೇಟ್ ಮಾಡಿವೆ. ಇದು ಚಿತ್ರತಂಡಕ್ಕೆ ಖುಷಿಯ ವಿಚಾವಾದರೆ, ಇತ್ತ ಕೆಲ ಸಂಘಟನೆಗಳು ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ.

ಲಕ್ಷ್ಮೀ ಬಾಂಬ್‌ನ ಟ್ರೈಲರ್‌ ತಮಾಷೆಯ ಮತ್ತು ಭಯಾನಕ ದೃಶ್ಯಗಳಿಂದ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಯಿತು. ಲೈಂಗಿಕ ಅಲ್ಪಸಂಖ್ಯಾತರಾಗಿ ನಟ ಅಕ್ಷಯ್ ಕುಮಾರ್ ಪಾತ್ರವು ಈಗಾಗಲೇ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

ಆದರೆ ಇಂದು(ಅ.29) ರಾಘವ ಲಾರೆನ್ಸ್ ನಿರ್ದೇಶಿಸಿದ ಚಿತ್ರವು ತನ್ನ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಹೋಗಿ ಸ್ಕ್ರೀನಿಂಗ್ ಅನ್ನು ಪೋಸ್ಟ್ ಮಾಡಿದೆ. ಜೊತೆಗೆ ಚಿತ್ರ ತಯಾರಕರು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಯೊಂದಿಗೆ ಚರ್ಚಿಸಿ, ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.

ಚಿತ್ರದ ಶೀರ್ಷಿಕೆಗೆ ವಿರೋಧಗಳು ಬಂದ ಹಿನ್ನೆಲೆ, ಚಿತ್ರ ವೀಕ್ಷಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಚಿತ್ರದ ನಿರ್ಮಾಪಕರಾದ ಶಬಿನಾ ಖಾನ್, ತುಷಾರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ಈಗ ತಮ್ಮ ಚಿತ್ರದ ಹೆಸರನ್ನು ಲಕ್ಷ್ಮೀ ಬಾಂಬ್ ಬದಲು ಲಕ್ಷ್ಮೀ ಎಂದು ಬದಲಾಯಿಸಲಿದ್ದಾರೆ.

ಇದನ್ನೂ ಓದಿ: ದ್ವೇಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನಿಷೇಧ; ಬಜಾಜ್ & ಪಾರ್ಲೆಯನ್ನು ಶ್ಲಾಘಿಸಿದ ಬಾಲಿವುಡ್

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಇನ್ನು ಈ ಚಿತ್ರವನ್ನು ಬಹಿಷ್ಕರಿಸುವಂತೆ ಅನೇಕ ಜನರು ಒತ್ತಾಯಿಸಿದ್ದಾರೆ. ಚಿತ್ರದ ಹೆಸರು ಹಿಂದು ದೇವತೆಗೆ ಅವಮಾನ ಮಾಡುತ್ತದೆ. ಇದರಿಂದ ಹಿಂದೂಗಳ ಭಾವನೆಗೆ ಪೆಟ್ಟು ಬೀಳುತ್ತದೆ ಎಂದು ಹೇಳಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ #bycottlaxmibomb ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

 

ಹೀಗಾಗಿ ಚಿತ್ರದ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿ ರಜಪೂತ್ ಕರ್ಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆಹ್ರೋತ್ರಾ ಚಿತ್ರದ ನಿರ್ಮಾಪಕರಿಗೆ ನಿನ್ನೆ(ಅ.28) ಲೀಗಲ್ ನೋಟಿಸ್ ಕಳುಹಿಸಿದ್ದರು. ಲಕ್ಷ್ಮೀ ಬಾಂಬ್ ಚಿತ್ರದ ಹೆಸರು ಹಿಂದೂ ದೇವತೆ ಲಕ್ಷ್ಮಿಗೆ ಸಾಕಷ್ಟು ಅವಹೇಳನಕಾರಿ ಎಂದು ಲೀಗಲ್ ನೋಟಿಸ್‌ನಲ್ಲಿ ಹೇಳಲಾಗಿದೆ. ಲಕ್ಷ್ಮಿ ದೇವಿಯನ್ನು ಅವಮಾನಿಸಲು ತಯಾರಕರು ಉದ್ದೇಶಪೂರ್ವಕವಾಗಿ ಚಿತ್ರದ ಶೀರ್ಷಿಕೆಯನ್ನು ಇಟ್ಟುಕೊಂಡಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

ಅಕ್ಷಯ್ ಕುಮಾರ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಥ್ರಿಲ್ಲರ್ ಮತ್ತು ಹಾಸ್ಯ ತುಂಬಿರುವ ಚಿತ್ರ ಈಗ ಲಕ್ಷ್ಮಿ ಎಂದು ಹೆಸರು ಬದಲಾಗಿದೆ. ಈ ಚಿತ್ರವು ಲಾರೆನ್ಸ್ ನಿರ್ದೇಶನದ 2011 ರ ತಮಿಳು ಚಿತ್ರ ಕಾಂಚನ ರೀಮೇಕ್ ಆಗಿದೆ. ಇದು ಕನ್ನಡದಲ್ಲಿ ಕಲ್ಪನ ಹೆಸರಿನಲ್ಲಿಯಲ್ಲಿಯೂ ಸಹ ರೀಮೇಕ್ ಆಗಿತ್ತು. ‘ಲಕ್ಷ್ಮಿ’ ಲಾರೆನ್ಸ್  ಅವರ ನಿರ್ದೇಶನದ ಚೊಚ್ಚಲ ಹಿಂದಿ ಚಿತ್ರವಾಗಿದೆ.

ಚಿತ್ರದಲ್ಲಿ ಬರುವ ಕೆಲ ಪಾತ್ರಗಳ ಹೆಸರುಗಳನ್ನು ಇಟ್ಟುಕೊಂಡು ಚಿತ್ರ ಬಹಿಷ್ಕರಣೆಗೆ ಕರೆ ನೀಡುವುದು, ಚಿತ್ರದ ಹೆಸರು ಬದಲಾವಣೆಗೆ ಒತ್ತಾಯಿಸುವುದು ಇತ್ತಿಚೆಗೆ ಹೆಚ್ಚಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿಂದೆ 2016 ರಲ್ಲಿ ತೆಲುಗಿನಲ್ಲಿ ಲಕ್ಷ್ಮಿ ಬಾಂಬ್ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿತ್ತು.


ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...