HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...