HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....