HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...