HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...