HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...