HomeUncategorizedಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

ಹೊನ್ನಿನೊಳಗೊಂದೊರೆಯನ್ನೂ ಬಯಸದ ಬಸವಣ್ಣನವರು ಹಾಗೂ ಅಕ್ಷಯ ತೃತೀಯ ಎಂಬ ಮೋಸ !

- Advertisement -
| ವಿಶ್ವಾರಾಧ್ಯ ಸತ್ಯಂಪೇಟೆ |
ಪ್ರತಿ ವರ್ಷ ಅಕ್ಷಯ ತೃತೀಯ ದಿನ ಬಂತೆಂದರೆ ಬಂಗಾರ ಮಾರಾಟ ಮಾಡುವವರಿಗೂ ಹಾಗೂ ತೆಗೆದುಕೊಳ್ಳುವವರಿಗೂ ಖುಷಿಯೋ ಖುಷಿ. ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯ ದಿನದಂದು ಯಾರು ಬಂಗಾರ ಖರೀದಿ ಮಾಡುತ್ತಾರೊ ಅವರ ಮನೆಯಲ್ಲಿ ಬಂಗಾರದ ಹೊಳೆಯೇ ಹರಿಯುತ್ತದೆ ಎಂಬುದೊಂದು ನಂಬಿಕೆ. ಈ ನಂಬಿಕೆಗೆ ಯಾವುದೆ ರೀತಿಯ ವೈಜ್ಞಾನಿಕ ಆಧಾರವಿಲ್ಲವೆಂಬುದು ಅಷ್ಟೇ ಸತ್ಯ. ಆದರೆ ಜನ ನಂಬುಗೆಯ ಜಾತ್ರೆಯಲ್ಲಿ ತಮ್ಮ ಅಸಲಿತನವನ್ನು ಕಳಕೊಂಡಿದ್ದಾರೆ. ಜೋತಿಷ್ಯಗಾರರಿಗೆ ತಮ್ಮ ತಲೆಯನ್ನು ಒತ್ತೆ ಇಟ್ಟ ಮೇಲೆ ಅವರ ಮಿದುಳು ಕ್ರಿಯಾಶೀಲವಾಗಿದೆ ಎಂದು ಊಹಿಸಲು ಸಾಧ್ಯವಿಲ್ಲದ ವಾತಾವರಣ ಇಂದು ಸೃಷ್ಟಿಯಾಗಿದೆ. ಇದು ನಮ್ಮ ಭಾರತಿಯರೆಲ್ಲರ ದುರಂತವಾಗಿದೆ.
ಮತ್ತೊಂದು ಆಶ್ಚರ್ಯ ಹಾಗೂ ವ್ಯಂಗ್ಯದ ಸಮಾಚಾರವೆಂದರೆ ಇದೆ ಅಕ್ಷಯ ತೃತೀಯ ನಕ್ಷತ್ರದ ದಿನ ಯುಗ ಯುಗಳ ಪುರುಷ, ವೈಚಾರಿಕ ಚಿಂತಕ, ಚಳುವಳಿಗಳ ಜನಕ ವಿಶ್ವಗುರು ಬಸವಣ್ಣನವರು ಹುಟ್ಟಿದ ದಿನ. ಅಕ್ಷಯ ತೃತೀಯ ದಿನದ ನಂಬುಗೆ ಒಂದು ಬಗೆಯಾದರೆ ಬಸವಣ್ಣನವರ ವಿಚಾರ ಧಾರೆ ಮತ್ತೊಂದು ಮಗ್ಗುಲು. ಇವು ಒಂದಕ್ಕೊಂದು ಸೇರಲು ಸಾಧ್ಯವೇ ಇಲ್ಲ. ಒಂದು ಉತ್ತರವಾದರೆ ಮತ್ತೊಂದು ದಕ್ಷಿಣ. ಆದರೆ ನಾವು ಇವೆರಡರಲ್ಲಿ ಯಾವುದನ್ನು ಆಯ್ದುಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ ಎಂಬ ಸತ್ಯವನ್ನು ಮನಗಾಣಲೆಬೇಕಾಗಿದೆ. ಇಲ್ಲದೆ ಹೋದರೆ ನಾವು ಬದುಕಿರುವವರೆಗೂ ಭ್ರಮೆಗಳ ನಡುವೆಯೆ ಬದುಕು ವಾಸ್ತವವನ್ನು ಅರ್ಥಮಾಡಿಕೊಳ್ಳದೆ ಸತ್ತು ಹೋಗುವ ಅಪಾಯ ಇದೆ.
ಹೊನ್ನಿನೊಳಗೊಂದೊರೆಯ , ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ ನಿಮ್ಮ ಪ್ರಮಥರಾಣಿ
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ ಕೂಡಲಸಂಗಮದೇವಾ
ಎಂಬುದು ಬಸವಣ್ಣನವರ ಉಸಿರು. ನಾಳೆ ಬೇಕೆಂದು ತೆಗೆದು ಇರಿಸುವುದೆ ಬಹು ದೊಡ್ಡ ಅಪರಾಧ. ಅಲ್ಲದೆ ಹೊನ್ನು ಮಾಯೆ ಎಂಬರು. ಹೊನ್ನು ಮಾಯೆ ಅಲ್ಲವೆ ಅಲ್ಲ, ಮನದ ಮುಂದಣ ಆಸೆಯೆ ಮಾಯೆ ಎಂಬುದು ಶರಣರ ಇಂಗಿತವಾಗಿದೆ. ನಾಳೆ ಬೇಕೆಂದು ತೆಗೆದು ಇಡುವುದು ಅಪರಾಧ. ಒಂದು ಸಲ ಬಸವಣ್ಣನವರ ಮಹಾಮನೆಗೆ ಕಳ್ಳನೊಬ್ಬ ಬರುತ್ತಾನೆ. ಆ ಕಳ್ಳ ಸಹಜವಾಗಿ ನೀಲಾಂಬಿಕೆಯ ಕಿವಿಯಲ್ಲಿರುವ ಓಲೆಗೆ ಕೈಹಾಕಿ ಕಳ್ಳತನ ಮಾಡಬೇಕೆಂದು ಪ್ರಯತ್ನ ಮಾಡುತ್ತಿರುತ್ತಾನೆ. ಆಗ ನೀಲಾಂಬಿಕೆ ಚಟಾರನೆ ಕಿರುಚಿಕೊಂಡು ಕಳ್ಳ ಕಳ್ಳ ಎಂದು ಧಾವಂತಗೊಳ್ಳುತ್ತಾರೆ. ಆಶ್ಚರ್ಯವೆಂದರೆ ಕಲ್ಯಾಣ ನಾಡಿನ ಅಂದಿನ ಪ್ರಧಾನಿಯಾಗಿದ್ದ ಬಸವಣ್ಣನವರು ತನ್ನ ಮಡದಿ ನೀಲಾಂಬಿಕೆಯನ್ನು ಗದರಿಸುವ ಧ್ವನಿಯಲ್ಲಿ  :
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ
ಅಯ್ಯ ನಮ್ಮಯ್ಯನ ಕೈನೊಂದಿತು,
ತೆಗೆದುಕೊಡಾ ಎಲೆ ಬೆಂಡೊಲೆ ಕಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
ಕೂಡಲಸಂಗಮನಲ್ಲದೆ ಆರೂ ಇಲ್ಲ
ಎಂಬ ವಚನದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ ನಮಗೆ ಬೇಕಾಗಿರುವುದಕ್ಕಿಂತಲೂ ಹೆಚ್ಚು ಹೆಚ್ಚು ಸಂಗ್ರಹ ಮಾಡಿಕೊಂಡಿರುವುದೆ ದೊಡ್ಡ ಅಪರಾಧ. ಕಳ್ಳನಾದರೂ ತನ್ನ ಹಸಿವನ್ನು ಹಿಂಗಿಸಿಕೊಳ್ಳಲು ಕಳ್ಳತನಕ್ಕೆ ಇಳಿದಿರಬಹುದು. ಆದರೆ ನಮ್ಮ ಹೊಟ್ಟೆ ತುಂಬಿಸಿಕೊಂಡೂ ಹೆಚ್ಚು ಹೆಚ್ಚು ಬೇಕೆಂಬ ಬಯಕೆ ಇಟ್ಟುಕೊಂಡವರೆ ಬಲುಗಳ್ಳರು. ಹೀಗಾಗಿ ಆತ ಹಸಿವೆಗಾಗಿ ನಮ್ಮ ಮನೆಗೆ ಬಂದಾತ. ನಾವು ಬಲುಗಳ್ಳರು ಎಂಬುದು ಬಸವಣ್ಣನವರ ಆಶಯ.
ಹೊನ್ನಿಂಗೆ ಬಂದಿಲ್ಲದ, ಹೆಣ್ಣಿಂಗೆ ಬಂದಿಲ್ಲದ , ಆಶನಕ್ಕೆ- ವಸನಕ್ಕೆ ಬಂದಿಲ್ಲದ ಭಕ್ತಿಯ ಪಥವ ತೋರಲು ಬಂದ ಬಸವಣ್ಣನವರ ಹುಟ್ಟು ಹಬ್ಬದ ದಿನವೆ ಅಕ್ಷಯ ತೃತಿ ಎಂಬ ದಿನ ಬಂದಿರುವುದು ಕಾಕತಾಳೀಯ. ಕನಿಷ್ಠ ಪಕ್ಷ ಬಸವಾದಿ ಶರಣರ ಆಶಯಗಳನ್ನು ಹೇಳುವ , ಅನುಸರಿಸುವ ಜನಗಳಾದರೂ ಅಕ್ಷಯ ತೃತೀಯ ಎಂಬ ವಿಶೇಷ ದಿನದಂದು  ಪುರೋಹಿತರು ನಂಬಿಸಿದ ಮೌಢ್ಯದ ಎದುರು ಈಜಬೇಕಿದೆ. ನಮ್ಮ ರಾಜ್ಯದಲ್ಲಿಯೆ ನಿನ್ನೆಯ ದಿನ 3900 ಕೋಟಿ ಮೌಲ್ಯದ ಚಿನ್ಹ ಮಾರಾಟವಾಗಿರುವುದು ನೋಡಿದರೆ ನಾವು ಎತ್ತ ಹೊರಟಿದ್ದೇವೆ ? ಎಂಬುದು ಮನದಟ್ಟಾಗುತ್ತದೆ. ಹೊನ್ನಿನೊಳಗೆ ಒಂದೊರೆಯ ಎಂಬ ಬಸವಣ್ಣನವರ ಮಾತು ಒತ್ತಟ್ಟಿಗಿರಲಿ, ಈ ದಿನ ಖರೀದಿಸಿದ ಬಂಗಾರ ಮುಂದಿನ ವರ್ಷದಷ್ಟೊತ್ತಿಗೆ ದುಪ್ಪಟ್ಟು ಆಗುತ್ತದೆ ಎಂಬುದೆ ಮೂರ್ಖತನವಲ್ಲವೆ ? ವ್ಯಾಪಾರಿಗಳು ಹಾಗೂ ಜೋತಿಷ್ಯಿಗಳು ಕೂಡಿ ಮಾಡಿದ ಆಟಕ್ಕೆ ಭಾರತೀಯ ಮನಸ್ಸುಗಳು ಪಿಗ್ಗಿ ಬಿದ್ದಿರುವುದು ಕಾಣುತ್ತೇವೆ. ಪಂಚಾಂಗವೆಂಬ ಗಣಿತವಲ್ಲದ, ವಿಜ್ಞಾನವಲ್ಲದ ಅರೆ ಬರೆ ಅಜ್ಞಾನದ ಹಿಂದೆ ಹೋಗುತ್ತಿದ್ದೇವೆ. ಪ್ರಜ್ಞಾವಂತ ಬಸವಣ್ಣನವರ ನಾಡಿನ ನಾವೆಲ್ಲ ವ್ಯಾಪಾರಿಗಳ ಹಾಗೂ ಜೋತಿಷ್ಯಿಗಳ ಕೌಲು ಕೂಟಕ್ಕೆ ಬಲಿಯಾಗಿರುವುದು ಎಷ್ಟು ಸರಿ ? ಎಂದು ನಮ್ಮನ್ನೆ ನಾವು ಕೇಳಿಕೊಳ್ಳಬೇಕಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...