Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...