Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...