Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...