Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...