Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...