Homeಮುಖಪುಟಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

ಗಾಜಾದಲ್ಲಿ ವೈದ್ಯಕೀಯ ನೆರವು ಅಗತ್ಯವಿದೆ: ಅಲ್-ಅಹ್ಲಿ ಅರಬ್ ಆಸ್ಪತ್ರೆ

- Advertisement -
- Advertisement -

ಹೆಚ್ಚುತ್ತಿರುವ ರೋಗಿಗಳ ಹೊರೆಯನ್ನು ನಿಭಾಯಿಸಲು ವೈದ್ಯಕೀಯ ನೆರವು, ಶಸ್ತ್ರಚಿಕಿತ್ಸಕರು, ದಾದಿಯರು, ಎಕ್ಸ್-ರೇ ತಂತ್ರಜ್ಞರು ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞರನ್ನು ತಕ್ಷಣದ ಪೂರೈಕೆ ಮಾಡಬೇಕು ಎಂದು ಗಾಜಾದ ಅಲ್-ಅಹ್ಲಿ ಅರಬ್ ಆಸ್ಪತ್ರೆಯ ವೈದ್ಯರು ಭಾನುವಾರ ಮನವಿ ಮಾಡಿದ್ದಾರೆ.

ಕಳೆದ ವಾರ ಇಸ್ರೇಲಿ ದಾಳಿಯಿಂದಾಗಿ ಎರಡು ದೊಡ್ಡ ಆಸ್ಪತ್ರೆಗಳಾದ ಅಲ್-ಶಿಫಾ ಮತ್ತು ಅಲ್-ಕುದ್ಸ್ – ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಅಲ್-ಅಹ್ಲಿಯಲ್ಲಿ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.

ಅಕ್ಟೋಬರ್ 17 ರಂದು, ಅಲ್-ಅಹ್ಲಿ ಆಸ್ಪತ್ರೆಯು ಸಹ ಬಾಂಬ್ ದಾಳಿಗೆ ತುತ್ತಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಸಂಭವಿಸಿದ್ದವು. ಆದರೆ ಅದು ತಿಂಗಳ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲು ಆರಂಭಿಸಿತು.

ಆಸ್ಪತ್ರೆಯ ಮೂಳೆಚಿಕಿತ್ಸಕ ವಿಭಾಗದ ಮುಖ್ಯಸ್ಥ ಡಾ.ಫಾಡೆಲ್ ನೈಮ್ ಅವರು, ಮಾಧ್ಯಮಗಳಿಗೆ ವಾಟ್ಸಾಪ್ ಮೂಲಕ ಧ್ವನಿ ಸಂದೇಶವನ್ನು ಕಳುಹಿಸಿದ್ದಾರೆ. ”ಇದೀಗ, ಕಾರ್ಯನಿರ್ವಹಿಸುತ್ತಿರುವ ಏಕೈಕ ಆಸ್ಪತ್ರೆ ಅಲ್-ಅಹ್ಲಿ ಆಸ್ಪತ್ರೆ, ಹಾಗಾಗಿ ನಾವು ಹೆಚ್ಚಿನ ಸಂಖ್ಯೆಯ ಜನರಿಗೆ ಚಿಕಿತ್ಸೆ ನೀಡಬೇಕಾಗಿದೆ” ಎಂದು ಹೇಳಿದ್ದಾರೆ. ಈ ಧ್ವನಿ ಸಂದೇಶದಲ್ಲೂ ಬಾಂಬ್ ಸ್ಫೋಟದ ಸದ್ದು ಕೇಳಿಸಿದೆ.

”ನಮ್ಮದು ಒಂದು ಸಣ್ಣ ಆಸ್ಪತ್ರೆಯಾಗಿದ್ದು ಹೆಚ್ಚಿನ ಸೌಲಭ್ಯಗಳು ಬೇಕಿದೆ. ನಾವು ಈಗ ಅಗತ್ಯಕ್ಕೆ ಸರಿಹೊಂದುವಂತೆ ನಮ್ಮನ್ನು ಮಾರ್ಪಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಅಲ್ ಅಹ್ಲಿ ಆಸ್ಪತ್ರೆಯನ್ನು ಸರ್ಕಾರೇತರ ಸಂಸ್ಥೆಯು ನಿರ್ವಹಿಸುತ್ತದೆ. ಮಕ್ಕಳ, ಮೂಳೆಚಿಕಿತ್ಸೆ, ಇಎನ್‌ಟಿ, ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಸೀಮಿತ ವಿಶೇಷತೆಗಳನ್ನು ಹೊಂದಿದೆ. ಆಸ್ಪತ್ರೆಯು ವಿಶೇಷ ಶಸ್ತ್ರಚಿಕಿತ್ಸಕರನ್ನು ಹೊಂದಿಲ್ಲ.

”ಅನೇಕ ಗಾಯಾಳುಗಳು ಬರುತ್ತಿದ್ದಾರೆ. ಆಸ್ಪತ್ರೆಗೆ ರಕ್ತದ ಪೂರೈಕೆಯ ಅವಶ್ಯಕತೆಯಿದೆ. ಸೆಂಟ್ರಲ್ ಬ್ಲಡ್ ಬ್ಯಾಂಕ್ ಅಲ್-ಶಿಫಾ ಆಸ್ಪತ್ರೆಯ ಗಾಜಾದ ಪಶ್ಚಿಮ ಭಾಗದಲ್ಲಿದೆ. ಅಲ್ಲಿಗೆ ತಲುಪಲು ಸಾಧ್ಯವಿಲ್ಲ. ನಾವು ಅಲ್ಲಿಗೆ ಹೋಗಲು ಹಲವು ಬಾರಿ ಪ್ರಯತ್ನಿಸಿದೆವು, ಆದರೆ ಇಸ್ರೇಲಿಗಳು ಗುಂಡು ಹಾರಿಸಿದರು” ಎಂದು ಹೇಳಿದರು.

”ಆಸ್ಪತ್ರೆಯಲ್ಲಿ ರೋಗಿಗಳು ರಕ್ತಸ್ರಾವದ ಪರಿಸ್ಥಿತಿಯಲ್ಲಿದ್ದಾರೆ. ರಕ್ತ ವರ್ಗಾವಣೆಯ ಅಗತ್ಯವಿದೆ. ರಕ್ತದ ಕೊರತೆಯಿಂದ ಕೆಲವು ರೋಗಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು.

”ಜೀವ ಉಳಿಸದ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ಆಸ್ಪತ್ರೆಯು ಮುಂದೂಡುತ್ತಿದೆ. ಹೆಚ್ಚಿನ ಗಾಯಾಳುಗಳಿಗೆ ಮೂಳೆಚಿಕಿತ್ಸೆಯ ಕಾರ್ಯವಿಧಾನಗಳ ಅಗತ್ಯವಿರುತ್ತದೆ ಮತ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಮಾಡುತ್ತಿಲ್ಲ” ಎಂದು ನೈಮ್ ಹೇಳಿದರು.

”ಹೆಚ್ಚಿನ ಆರೋಗ್ಯ ಸಿಬ್ಬಂದಿ ವಾರಗಟ್ಟಲೆ ತಮ್ಮ ಕುಟುಂಬವನ್ನು ಭೇಟಿ ಮಾಡಿಲ್ಲ. ನನ್ನ ಕುಟುಂಬವನ್ನು ನಾನು ಕೊನೆಯದಾಗಿ ಮೂರು ವಾರಗಳ ಹಿಂದೆ ನೋಡಿದೆ. ಅವರ ಕುಟುಂಬವು ಗಾಜಾದ ದಕ್ಷಿಣ ಭಾಗದಲ್ಲಿ ನಿರಾಶ್ರಿತರ ಶಿಬಿರದಲ್ಲಿದೆ” ಎಂದರು.

”ನಾವು ದಕ್ಷಿಣ ಭಾಗಕ್ಕೆ ಹೋದರೆ, ಉತ್ತರಕ್ಕೆ ಹಿಂತಿರುಗುವುದು ಅಪಾಯಕಾರಿ. ಆದ್ದರಿಂದ ನಮ್ಮಲ್ಲಿ ಹೆಚ್ಚಿನವರು ಹೋಗದಿರಲು ನಿರ್ಧರಿಸಿದ್ದೇವೆ ಮತ್ತು ನಾವು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿರುತ್ತೇವೆ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ 500 ಕ್ಕೂ ಹೆಚ್ಚು ಗಾಯಗೊಂಡಿರುವವರಿದ್ದಾರೆ. ಕೇವಲ ಮೂರು ಶಸ್ತ್ರಚಿಕಿತ್ಸಕರು ಮತ್ತು ಇಬ್ಬರು ಅರಿವಳಿಕೆ ತಜ್ಞರಿದ್ದಾರೆ ಎಂದು ಅಲ್ ಅಹ್ಲಿಯ ಪ್ಲಾಸ್ಟಿಕ್ ಸರ್ಜನ್ ಡಾ ಘಸನ್ ಅಬು ಸಿಟ್ಟಾ ಅಲ್ ಜಜೀರಾಗೆ ತಿಳಿಸಿದರು.

ಇದನ್ನೂ ಓದಿ: ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...