Homeಮುಖಪುಟಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ...

ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

- Advertisement -
- Advertisement -

ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಲ್‌ ಜಝೀರಾ ಮಾದ್ಯಮ ಸಿಬ್ಬಂದಿಯ ಕುಟುಂಬದ 19 ಸದಸ್ಯರು ಸೇರಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಜಬಾಲಿಯಾ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಗಾಝಾದ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಬ್ರಾಡ್‌ ಕಾಸ್ಟಿಂಗ್ ಇಂಜಿನಿಯರ್‌ ಮೊಹಮದ್ ಅಬು ಅಲ್-ಕುಮ್ಸಾನ್ ಅವರ ಸಹೋದರ, ಇಬ್ಬರು ಸಹೋದರಿಯರು ಮತ್ತು 8 ಸೋದರಳಿಯರು ಮತ್ತು ಸೊಸೆಯಂದಿರನ್ನು ಕಳೆದುಕೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾ ವರದಿಗಾರ ದಹದೌಹ್ ಅವರು ಪತ್ನಿ ಮಗ, ಮಗಳು ಮತ್ತು ಮೊಮ್ಮಗನನ್ನು ಕಳೆದುಕೊಂಡಿದ್ದರು.

ಇಸ್ರೇಲ್ ಜಬಾಲಿಯಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ 47 ಜನರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಹೊರಬಿದ್ದಿದೆ. ದಾಳಿಯಲ್ಲಿ ಹಮಾಸ್‌ನ ಕಮಾಂಡರ್‌ಗೆ ಕೂಡ ಹತ್ಯೆ ಮಾಡಲಾಗಿದೆ.

ಇಸ್ರೇಲ್‌ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ಬಾಂಬ್ ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್ ತನ್ನ ಹೇಳಿಕೆಯಲ್ಲಿ ಕಮಾಂಡರ್ ಇಬ್ರಾಹಿಂ ಬಿಯಾರಿ ಸೇರಿದಂತೆ ಹಲವಾರು ಹಮಾಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದೆ ಎಂದು ಹೇಳಿದೆ. ಆದರೆ ಹಮಾಸ್ ಶಿಬಿರದಲ್ಲಿ ತಮ್ಮ ನಾಯಕರು ಇರಲಿಲ್ಲ ಎಂದು ಹೇಳಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,400 ಜನರು ಮೃತಪಟ್ಟಿದ್ದಾರೆ. ಹಮಾಸ್‌ 200 ಜನರನ್ನು ಒತ್ತೆಯಾಳಾಗಿಟ್ಟಿತ್ತು.ಆ ಬಳಿಕ ಇಸ್ರೇಲ್ ನಡೆಸಿದ ಸರಣಿ ಬಾಂಬ್‌ ದಾಳಿಯಲ್ಲಿ ಗಾಝಾದಲ್ಲಿ ಮಕ್ಕಳು ಮಹಿಳೆಯರು ಸೇರಿ 8000 ಮಂದಿ ಮೃತಪಟ್ಟಿದ್ದಾರೆ. ಇದಲ್ಲದೆ ಇಸ್ರೇಲ್‌ ಗಾಝಾಪಟ್ಟಿಗೆ ನೀರು, ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಮಾನವೀಯ ನೆರವಿಗೆ ತಡೆ ನೀಡಿತ್ತು.

ಪ್ಯಾಲೆಸ್ತೀನ್‌ನಲ್ಲಿ ನೀರು, ಆಹಾರ, ವೈದ್ಯಕೀಯ ಸಹಾಯವಿಲ್ಲದೆ ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ಯುಎನ್‌ ವಿಶ್ವಕ್ಕೆ ಎಚ್ಚರಿಸಿತ್ತು. ಇತ್ತೀಚೆಗೆ ಯುಎನ್ ಸಾಮಾನ್ಯ ಸಭೆಯಲ್ಲಿ ಗಾಝಾಗೆ ಮಾನವೀಯ ನೆರವು ನೀಡುವ ಕುರಿತು ನಿರ್ಣಯವನ್ನು ಅಂಗೀಕರಿಸಲಾಗಿತ್ತು.

ಇದನ್ನು ಓದಿ: ಜಾತಿ ತಾರತಮ್ಯದ ಬಗ್ಗೆ ಲೇಖನ: ಪ್ರಕಾಶ್ ಮಂಟೇದ ವಿರುದ್ಧ FIR ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...