Homeಮುಖಪುಟಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

ಈಗಾಗಲೇ ಕೇಂದ್ರ ಸರ್ಕಾರದಿಂದ ಟೀಕೆಗೆ ಗುರಿಯಾಗಿರುವ ಅವರು, ಸುಪ್ರೀಂ ಕೋರ್ಟ್ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆಯ ಪ್ರಕರಣ ದಾಖಲಿಸಲು ಅನುಮತಿ ನೀಡಿದೆ.

- Advertisement -
- Advertisement -

ಸಮಕಾಲೀನ ಭಾರತೀಯ ಸನ್ನಿವೇಶಗಳ ಕುರಿತು ವ್ಯಂಗ್ಯವಾಗಿ ಹಾಗೂ ಅಷ್ಟೇ ಪ್ರಭಾವಶಾಲಿಯಾಗಿ ನಿರೂಪಿಸಬಲ್ಲ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ಟ್ವೀಟ್ ವೈರಲ್ ಆಗಿದೆ. ಈ ಬಾರಿ ಕುನಾಲ್ ಅವರ ಟ್ವೀಟ್ ಚಿತ್ರದ ರೂಪದಲ್ಲಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಅವರ ಚಿತ್ರವನ್ನು ”ಮಾಲಿಕ ತನ್ನ ನೌಕರನೊಂದಿಗೆ’’ ಎಂಬ ಶೀರ್ಷಿಕೆಯಡಿಯಲ್ಲಿ ಚಿತ್ರಿಸಲಾಗಿದೆ.

ಅರೇಬಿಯನ್ ನೈಟ್ ಕತೆಯಲ್ಲಿ ಬರುವ ’ಅಲಾವುದ್ದೀನ್ ಮತ್ತು ಅದ್ಬುತ ದೀಪ’ದ ಕತೆಯ ಪಾತ್ರಗಳಾದ ಅಲಾವುದ್ದೀನ್ ಪಾತ್ರದಲ್ಲಿ ರಿಲಾಯನ್ಸ್ ಮಾಲಿಕ ಮುಖೇಶ್ ಅಂಬಾನಿ ಮತ್ತು ಅಲ್ಲಾವುದ್ದೀನನ ’’ಗುಮಾಮ ಭೂತ”ದ ಪಾತ್ರದಲ್ಲಿ ಪ್ರಧಾನಿ ಮೋದಿಯನ್ನು ಚಿತ್ರಿಸಲಾಗಿದೆ.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಅವರು ಕೇಂದ್ರ ಸರ್ಕಾರದ ಕಾರ್ಪೊರೇಟ್ ನಿಷ್ಠೆಯನ್ನು ಪ್ರಶ್ನಿಸಿ ಈ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಚರ್ಚೆಯಲ್ಲಿರುವ ಕೃಷಿ ಮಸೂದೆಗಳು ಸೇರಿದಂತೆ ಪ್ರಸ್ತುತ ದೇಶದ ಎಲ್ಲಾ ಆರ್ಥಿಕ ನೀತಿಗಳು ದೇಶವನ್ನು ಏಕಸ್ವಾಮ್ಯದ ಕಡೆ ಚಲಿಸುವಂತೆ ಮಾಡುತ್ತಿದೆ ಎಂದು ಹಲವಾರು ಜನರು ಈಗಾಗಲೆ ಆರೋಪಿಸಿದ್ದಾರೆ.

ಕುನಾಲ್ ಕಮ್ರಾ ಪ್ರಸಿದ್ದ ಹಾಸ್ಯನಟರಾಗಿದ್ದು, ಅವರು ಈಗಾಗಲೇ ಕೇಂದ್ರ ಸರ್ಕಾರದಿಂದ ಟೀಕೆಗೆ ಗುರಿಯಾಗಿದ್ದಾರೆ. ಸುಪ್ರೀಂ ಕೋರ್ಟ್ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಅವರ ಮೇಲೆ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿದೆ. ಆದರೆ ಕುನಾಲ್ ತನ್ನ ಹೇಳಿಕೆಗಳಿಗೆ ಯಾವುದೆ ಕ್ಷಮೆ ಹಾಗೂ ದಂಡ ಕಟ್ಟುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ದಂಡ ಕಟ್ಟುವುದಿಲ್ಲ: ಕಾಮಿಡಿಯನ್ ಕುನಾಲ್ ಕಮ್ರ

ಅಲ್ಲಾದೀನ್ ಮತ್ತು ಅದ್ಬುತ ದೀಪ ಸಿನಿಮಾದ ಟ್ರೈಲರ್‌ ಇಲ್ಲಿದೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...