Homeಮುಖಪುಟಸಾಮರಸ್ಯದ ಅಗತ್ಯವನ್ನು ಕಟ್ಟಿಕೊಡುವ ’ಅಲೈದೇವ್ರು’ ನಾಟಕ

ಸಾಮರಸ್ಯದ ಅಗತ್ಯವನ್ನು ಕಟ್ಟಿಕೊಡುವ ’ಅಲೈದೇವ್ರು’ ನಾಟಕ

- Advertisement -
- Advertisement -

ಪ್ರಸಕ್ತವಾಗಿ ಹಲವು ಪಕ್ಷಗಳು ನಡೆಸುತ್ತಿರುವ ಧರ್ಮ ರಾಜಕಾರಣಗಳು ನಿಜ ಭಾರತವನ್ನು ಅಕ್ಷರಶಃ ಕೊಂದುಹಾಕುತ್ತಿವೆ. ಕೋಮುವಾದಿಗಳು ಮತ್ತು ಮೂಲಭೂತವಾದಿಗಳು ಜನರಲ್ಲಿ ನೆಲೆಸಿದ್ದ ಒಗ್ಗಟ್ಟನ್ನು ಹಳ್ಳಿಹಳ್ಳಿಗಳಲ್ಲೂ ಒಡೆದು ಎಲ್ಲೆಲ್ಲೂ ಆತಂಕದ ಕರಿಛಾಯೆ ಏಳಲು ಕಾರಣೀಕರ್ತರಾಗಿದ್ದಾರೆ. ಇಡೀ ದೇಶಾದ್ಯಂತ ’ಸಾಮರಸ್ಯ’ ಎಂಬುದು ಬರೇ ಚಂದದ ನುಡಿಗಟ್ಟಾಗಿ ಮಾತ್ರ ಉಳಿದಿರುವ ಈ ದಿನಮಾನಗಳಲ್ಲಿ ಹನುಮಂತ ಹಾಲಿಗೇರಿಯವರ ರಚನೆಯ, ಸಿದ್ದರಾಮ ಕೊಪ್ಪರ ನಿರ್ದೇಶನದ ’ಅಲೈದೇವ್ರು’ ನಾಟಕವು ಸಾಮರಸ್ಯದ ಬದುಕು ಇಂದಿನ ತುರ್ತು ಅಗತ್ಯ ಎಂಬುದನ್ನು ಪ್ರೇಕ್ಷಕರಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಯಿತು.

ಶಿವಮೊಗ್ಗದ ಕುಪ್ಪಳಿಯಲ್ಲಿ ’ದೇಶಕ್ಕಾಗಿ ನಾವು’ ಸಂಘಟನೆ ಹಮ್ಮಿಕೊಂಡಿದ್ದ ಯುವಜನರ ಅಧ್ಯಯನ ಶಿಬಿರದಲ್ಲಿ ಬೆಂಗಳೂರಿನ ಜನರಂಗ ತಂಡವು ಈ ನಾಟಕವನ್ನು ಪ್ರಸ್ತುತಪಡಿಸಿತು. ಒಂದು ಮುಕ್ಕಾಲು ಗಂಟೆಯ ಈ ನಾಟಕದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವೆನಿಸಿಕೊಂಡಿರುವ ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರ ಸಂಕಟ, ನೋವು, ಅಭದ್ರತೆ, ಸಿಟ್ಟು, ಸೆಡವು, ವ್ಯಂಗ್ಯ, ಆಕ್ರೋಶಗಳನ್ನು ತಂಡದ ನಟರು ಪ್ರೇಕ್ಷಕರಿಗೆ ದಾಟಿಸಿ, ಅವರ ಕಣ್ಣುಗಳು ತೇವಗೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು. ವರ್ತಮಾನದ ರಾಜಕೀಯ ಹುನ್ನಾರಗಳಾದ ಪೌರತ್ವ ಕಾಯ್ದೆ, ಲವ್ ಜಿಹಾದ್, ಗೋಹತ್ಯೆ ನಿಷೇಧ ಮುಂತಾದವುಗಳು ಕುರಿತು ಎಲ್ಲೂ ಅಂತಿಮ ತೀರ್ಪನ್ನು ನೀಡದೇ, ಅಗ್ರೆಸಿವ್ ದಾರಿಯನ್ನು ಹಿಡಿಯದೇ, ಎರಡೂ ಮಗ್ಗಲುಗಳಿಂದ ಸಂವಾದ ನಡೆಸುವ ಶೈಲಿಯ ನಿರೂಪಣಾ ತಂತ್ರವನ್ನು ನಾಟಕ ಅನುಸರಿಸಿದ್ದು ವಿಶೇಷವಾಗಿತ್ತು.

ವರ್ಷವರ್ಷಗಳಿಂದ ಹಿಂದೂ ಮತ್ತು ಮುಸ್ಲಿಂ ಜನಾಂಗಗಳೆರಡೂ ಒಟ್ಟಾಗಿ ನಡೆಸುತ್ತಿದ್ದ ಊರಿನ ಜನಪದ ಮೊಹರಂ (ಅಲೈದೇವ್ರ ಹಬ್ಬ) ಹಬ್ಬವನ್ನು ಎರಡೂ ಕಡೆಯ ಮೂಲಭೂತವಾದಿಗಳಿಂದಾಗಿ ನಿಲ್ಲಿಸಲು ಶತಾಯಗತಾಯ ಪ್ರಯತ್ನಿಸಲಾಗುತ್ತದೆ. ಜನರು ಜಾಗೃತವಾಗಿದ್ದರೆ ಇಂತಹ ಒಡಕು ಎಬ್ಬಿಸುವ ಪ್ರಯತ್ನಗಳು ವಿಫಲವಾಗುತ್ತವೆ ಎಂಬ ಸಂದೇಶದೊಂದಿಗೆ ನಾಟಕ ಮುಕ್ತಾಯವಾಗುತ್ತದೆ. ಈ ನಾಟಕದಲ್ಲಿ ಎಲ್ಲಿಯೂ ಯಾವುದೇ ಒಂದು ಧರ್ಮವನ್ನು ಟಾರ್ಗೆಟ್ ಮಾಡಿಲ್ಲ. ನಮ್ಮ ಹಳ್ಳಿಹಳ್ಳಿಗಳು ಧಾರ್ಮಿಕ ಸೂಕ್ಷ್ಮ ಪ್ರದೇಶಗಳಾಗಿ ಮಾರ್ಪಡಲು ಕಾರಣಗಳು ಯಾವುವು, ಅದರ ಹಿಂದಿರುವ ಶಕ್ತಿಗಳಾವವು, ಅವುಗಳ ಮುಖವಾಡಗಳೇನು ಎಂಬುದನ್ನು ನಾಟಕ ಬಿಚ್ಚಿಡುತ್ತಾ ಹೋಗುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಹಿಂದೂ-ಮುಸ್ಲಿಂ ಜನರ ಬಾಹುಳ್ಯ ಪ್ರದೇಶಗಳಲ್ಲಿ ’ಯಾವಾಗ ಎಲ್ಲಿ ಗಲಾಟೆ-ಗಲಭೆಗಳಾಗಿಬಿಡುತ್ತವೋ’ ಎಂಬ ಆತಂಕ ಮಡುಗಟ್ಟಿದೆ. ಅವುಗಳು ಧಾರ್ಮಿಕ ಸೂಕ್ಷ್ಮ ಪ್ರದೇಶಗಳಾಗಿ ಮಾರ್ಪಟ್ಟಿವೆ. ಎರಡೂ ಕಡೆಯಲ್ಲಿರುವ ಅತಿರೇಕದ ಧಾರ್ಮಿಕ ವಾದಿಗಳ ತೆವಲುಗಳಲ್ಲಿ ನಿರುಪದ್ರವಿ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮನುಷ್ಯ ಸಹಜ ಪ್ರೀತಿಯೂ ಧರ್ಮದ ಬಣ್ಣ ಬಳಿದುಕೊಳ್ಳುತ್ತಿದೆ. ಇಂತಹ ವಿಷಮ ದಿನಗಳ ತಲ್ಲಣಗಳನ್ನು ’ಅಲೈದೇವ್ರು’ ಒಂದು ಕಥೆಯಾಗಿ-ನಾಟಕ ಪ್ರದರ್ಶನವಾಗಿ ಸಮರ್ಥವಾಗಿ ಪ್ರೇಕ್ಷಕರನ್ನು ಹಿಡಿದಿಡುತ್ತದೆ. ಆದರೆ ರಂಗ ಪ್ರಯೋಗದ ದೃಷ್ಟಿಯಲ್ಲಿ ಇದು ಸಾಕಷ್ಟು ಮಾಗಬೇಕಿದೆ. ನಾಟಕದ ಕಂಟೆಂಟ್ ಮತ್ತು ಅವಧಿಯನ್ನು ಗಮನವಿಟ್ಟುಕೊಂಡು ಸಣ್ಣಪುಟ್ಟ ಬದಲಾವಣೆ ಮಾಡಬೇಕಿದೆ. ಸಣ್ಣಪುಟ್ಟ ಮಿತಿಗಳನ್ನು ಸರಿಪಡಿಸಿಕೊಂಡರೆ ಈ ನಾಟಕ ಈ ಕಾಲದ ಒಂದೊಳ್ಳೆ ಪ್ರಯತ್ನವೆನಿಸಿಕೊಳ್ಳದೆ ಇರದು. ಜೊತೆಗೆ ಇಂದು ಕೋಮು ವೈಷಮ್ಯದ ರೋಗಗಳಿಗೆ ಮದ್ದಾಗುವುದಕ್ಕೂ ಸಾಧ್ಯವಿದೆ.

ಈ ನಾಟಕ ಬೆಂಗಳೂರಿನಲ್ಲಿ ಪ್ರದರ್ಶನಗೊಂಡಾಗ ಕೆಲವು ಮೂಲಭೂತವಾದಿಗಳಿಂದ ಅಪಸ್ವರ ಕೇಳಿಬಂದಿದ್ದರ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ಕಾರಣದಿಂದಾಗಿ ಬಹುಶಃ ಧಾರ್ಮಿಕ ಸೂಕ್ಷ್ಮ ಪ್ರದೇಶಗಳೆಂದು ಕರೆಸಿಕೊಳ್ಳುವ ಊರುಗಳಲ್ಲಿ ಇದರ ಪ್ರದರ್ಶನಕ್ಕೆ ಆಯೋಜಕರು ಹಿಂದೇಟು ಹಾಕುತ್ತಿದ್ದಾರೆ. ಆದಾಗ್ಯೂ ಅಂತಹ ಪ್ರದೇಶಗಳಲ್ಲಿಯೇ ಇದು ಹೆಚ್ಚಚ್ಚು ಪ್ರದರ್ಶನಗೊಳ್ಳಬೇಕಿರುವ ಅಗತ್ಯವಿದೆ. ಎಲ್ಲಿ ಗಾಯವಾಗಿದೆಯೋ ಅಲ್ಲಿಯೇ ಮುಲಾಮು ಹಚ್ಚಬೇಕಾದುದು ಅನಿವಾರ್ಯ.

ಸಮಾಜದ ಬಹುಪಾಲು ಸಹೃದಯರು ಧಾರ್ಮಿಕ ಸಾಮರಸ್ಯದ ವಿಚಾರದಲ್ಲಿ ಜಾಣಮೌನ ವಹಿಸುವಾಗ, ಪರಸ್ಪರ ಅರಿತು ಬಾಳಬೇಕಾದ ಅಗತ್ಯಗಳನ್ನು ಗಟ್ಟಿಯಾಗಿ ಮಾತನಾಡದಿರುವಾಗ ಈ ಹೊತ್ತಿನ ತಲ್ಲಣವೊಂದನ್ನು ಇಷ್ಟು ಚಂದವಾಗಿ ಮತ್ತು ನೇರಾನೇರ ಹೇಳುವ ಧೈರ್ಯ ತೋರಿರುವ ರಂಗತಂಡಕ್ಕೆ ಅಭಿನಂದನೆಗಳು.

ಈ ಮಾತೊಂದನ್ನು ಹೇಳಲೇಬೇಕಿದೆಯೆನಿಸುತ್ತಿದೆ. ನಮ್ಮ ನಮ್ಮ ಜಾತಿ-ಮತಗಳನ್ನು ಮನೆಗಷ್ಟೇ
ಸೀಮಿತಗೊಳಿಸಿಕೊಳ್ಳಬೇಕಾಗಿರುವುದು ಶಾಂತಿ ಮತ್ತು ಸಾಮರಸ್ಯದ ದೃಷ್ಟಿಯಿಂದ ಅತೀ ಅಗತ್ಯ. ಇದನ್ನು ಅರ್ಥಮಾಡಿಕೊಳ್ಳದೇ ಪರಸ್ಪರ ಬಡಿದಾಡುತ್ತಿದ್ದರೆ ಮುಂದೆ ಯಾರೂ ಉಳಿಯಲಾರರು. ’ಸಿರಿಯಾ’ದಂತಹ ದೇಶಗಳಲ್ಲಿ ಧಾರ್ಮಿಕ ಮೂಲಭೂತವಾದ ಅದೆಷ್ಟರಮಟ್ಟಿಗೆ ಮುಗ್ಧಜೀವಗಳ ನೆಮ್ಮದಿಯನ್ನು ಕಿತ್ತುಕೊಂಡಿದೆ, ಅಲ್ಲಿನ ಸಾಮಾನ್ಯ ಜನರ ಬದುಕು ಅದೆಷ್ಟು ದಾರುಣವಾಗಿದೆ ಎಂಬುದು ನಮ್ಮ ಕಣ್ಣಮುಂದಿದೆ. ಈ ಉದಾಹರಣೆಗಳಿಂದ ಎಚ್ಚೆತ್ತುಕೊಂಡು, ಭಾರತದ ಎಳೆಯ ಮತ್ತು ಯುವ ಮನಸ್ಸುಗಳಲ್ಲಿ ಅಗತ್ಯವಾಗಿ ಸಾಮರಸ್ಯದ ಅಗತ್ಯವನ್ನು ಒತ್ತಿಹೇಳಬೇಕಿದೆ. ಮತೀಯ ಶಕ್ತಿಗಳ ಕುಟಿಲತೆಗಳು ಹೊಸ ತಲೆಮಾರಿಗೆ ಅರ್ಥವಾಗಬೇಕಿರುವುದು ಇಂದಿನ ಜರೂರತ್ತಾಗಿದೆ. ಧಾರ್ಮಿಕ ಸಾಮರಸ್ಯವನ್ನು ಪುನರ್ ಕಟ್ಟುವ ದೃಷ್ಟಿಯಿಂದ ’ಅಲೈದೇವ್ರು’ ನಾಟಕ ಮಹತ್ವದ್ದಾಗಿ ಕಾಣುತ್ತದೆ.

ನಾಗರಾಜ ಕೂವೆ
ಕುವೆಂಪು ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ನಾಗಾರಾಜ ಅವರ ’ಕೈತುತ್ತು- ಭಾವನೆಗಳ ಹೊತ್ತು’, ’ನನ್ನಯ ಹಕ್ಕಿ ಬಿಟ್ಟೆ ಬಿಟ್ಟೆ…’ ಎಂಬ ಪುಸ್ತಕಗಳು ಪ್ರಕಟವಾಗಿವೆ. ಪಶ್ಚಿಮ ಘಟ್ಟ ಮತ್ತದರ ತಪ್ಪಲಿನ ಜನರ ಬದುಕು, ಜೀವವೈವಿಧ್ಯದ ಅಧ್ಯಯನ, ತಿರುಗಾಟ ಇವರ ಹವ್ಯಾಸಗಳು.


ಇದನ್ನೂ ಓದಿ: ಹಳ್ಳಿಗಳ ಹಿಂದೂ ಮುಸ್ಲಿಂ ಸಹಬಾಳ್ವೆ ಏನಾಗುತ್ತಿದೆ?: ಅಲೈದೇವ್ರು ನಾಟಕ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಟಕ ಪ್ರದರ್ಶನ ಹಲವು ಮಿತಿಯಿಂದ ಕೂಡಿದೆ. ನಟರು ಪಾತ್ರದಿಂದ ದೂರವೇ ಉಳಿದಿದ್ದಾರೆ. ವಸ್ತು ಸನ್ನಿವೇಶ ವಿನ್ಯಾಸದಲ್ಲಿ ನಿರ್ದೇಶಕರು ಗಮನಹರಿಸಿಲ್ಲ. ನಟರಿಗೆ ಸ್ಪಷ್ಟತೆಯ ಕೊರತೆ ಇದೆ. ಹಲವಾರು ಸಂಭಾಷಣೆ ಮಿಸ್ ಆಗುತ್ತದೆ. ರಂಗಪರಿಕರಗಳ ಬಳಕೆಯಲ್ಲಿ ಗೊಂದಲ ಉಂಟಾಗಿದೆ. ತಾಲೀಮಿನ ಅವಶ್ಯಕತೆ ಇದೆ. ಕೆಲವು ದೃಶ್ಯಗಳನ್ನು ಚೂಯಿಂಗ್ ಗಮ್ಮಿನಂತೆ ಎಳೆಯಲಾಗಿದೆ. ದೃಶ್ಯ ಸಂಯೋಜನೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....