Homeಅಂತರಾಷ್ಟ್ರೀಯಅಲ್ಬೇನಿಯಾ ದಾಖಲೆ - ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

- Advertisement -
- Advertisement -

ಏಪ್ರಿಲ್ 25 ರಂದು ಯುರೋಪಿನ ದೇಶವಾದ ಅಲ್ಬೇನಿಯಾದಲ್ಲಿ ನಡೆದ ಚುನಾವಣೆಯ ನಂತರ, ಅಲ್ಲಿನ ಪ್ರಧಾನಿ ‘ಎಡಿ ರಾಮ’ ತನ್ನ ಹೊಸ ಸಚಿವ ಸಂಪುಟವನ್ನು ಘೋಷಿಸಿದ್ದಾರೆ. ತನ್ನ ಹೊಸ ತಂಡದ 16 ಹುದ್ದೆಗಳಲ್ಲಿ 12 ಸ್ಥಾನಗಳನ್ನು ಮಹಿಳೆಯರಿಗೆ ನೀಡುವ ಮೂಲಕ ದೇಶದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಹೀಗಾಗಿ ಅಲ್ಬೇನಿಯಾದ ಹೊಸ ಸರ್ಕಾರದ 12 ಸಚಿವಾಲಯಗಳಿಗೆ ಎಂಟು ಮಹಿಳಾ ಮತ್ತು ನಾಲ್ಕು ಪುರುಷರು ನೇತೃತ್ವ ವಹಿಸಲಿದ್ದಾರೆ. ಕ್ಯಾಬಿನೇಟ್‌‌ ದರ್ಜೆಯಿಲ್ಲದ ಇತರ ನಾಲ್ಕು ಮಂತ್ರಿ ಸ್ಥಾನಕ್ಕೆ ಮಹಿಳೆಯರೇ ಆಯ್ಕೆಯಾಗಿದ್ದಾರೆ. ಪ್ರಧಾನಿಯಿಂದ ಆಯ್ಕೆಯಾಗಿರುವ ಒಟ್ಟು 16 ಸಚಿವರಲ್ಲಿ ನಾಲ್ವರು ಮಂತ್ರಿಗಳು ರಾಜಕೀಯ ಅನನುಭವಿಗಳಾಗಿದ್ದು, ಉಳಿದ ಸಚಿವರು ರಾಜಕೀಯದಲ್ಲಿ ಸಕ್ರಿಯರಾಗಿರುವವರಾಗಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

ಮಾಜಿ ಹಣಕಾಸು ಸಚಿವರಾಗಿದ್ದ ಅರ್ಬೆನ್ ಅಹ್ಮೆತಾಜ್ ಅವರನ್ನು ದೇಶದ ಉಪ ಪ್ರಧಾನಿಯಾಗಿ ನೇಮಿಸಲಾಯಿತು. ವಿದೇಶಿ, ರಕ್ಷಣಾ, ಆಂತರಿಕ, ಮೂಲಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಮತ್ತು ಸಂಸ್ಕೃತಿ ಸಚಿವಾಲಯಗಳಿಗೆ ಓಲ್ಟಾ ಕ್ಷಾಕಾ, ನಿಕೊ ಪೆಲೆಶಿ, ಬ್ಲೆಂಡಿ ಕುಸಿ ಬೆಲಿಂಡ ಬಲ್ಲುಕು, ಒಗೆರ್ಟಾ ಮನಸ್ತಿರ್ಲಿಯು, ಇವಿಸ್ ಕುಶಿ ಮತ್ತು ಎಲ್ವಾ ಮಾರ್ಗರಿಟಿಯನ್ನು ನೇಮಿಸಲಾಗಿದೆ.

ತೆರಿಗೆ ನಿರ್ದೇಶನಾಲಯದ ಮಾಜಿ ನಿರ್ದೇಶಕರಾದ ಡೆಲಿನಾ ಇಬ್ರಾಹಿಮಿಗೆ ಹಣಕಾಸು ಖಾತೆಯನ್ನು ನೀಡಲಾಗಿದ್ದು, ಕೃಷಿಗೆ ಸಹಾಯಧನ ನೀಡುವ ಮುಖ್ಯ ಸಂಸ್ಥೆಯಾದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಏಜೆನ್ಸಿಯ ಮಾಜಿ ಮುಖ್ಯಸ್ಥೆ ಫ್ರಿಡಾ ಕ್ರಿಫ್ಕಾ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ಕಾನೂನುಗಳ ಸಂಸದೀಯ ಆಯೋಗದ ಮಾಜಿ ಮುಖ್ಯಸ್ಥ ಉಲ್ಸಿ ಮಂಜ ಅವರನ್ನು ನ್ಯಾಯಾಂಗ ಸಚಿವರನ್ನಾಗಿ ನೇಮಿಸಲಾಯಿತು. ಕ್ಯಾಬಿನೇಟ್‌‌ ದರ್ಜೆ ಇಲ್ಲದ ನಾಲ್ವರು ಮಂತ್ರಿಗಳಲ್ಲಿ ಸಂಸತ್‌ ವ್ಯವಹಾರದ ಸಚಿವೆಯಾಗಿ ಎಲಿಸಾ ಸ್ಪಿರೊಪಾಲಿ, ಉದ್ಯಮಶೀಲತೆ ರಕ್ಷಣೆಯ ಮಂತ್ರಿಯಾಗಿ ಎಡೋನಾ ಬಿಲಾಲಿ, ಸೇವೆಗಳ ಸಚಿವರಾಗಿ ಮಿಲ್ವಾ ಎಕೊನೊಮಿ ಮತ್ತು ಯುವ ಮತ್ತು ಮಕ್ಕಳ ಸಚಿವರಾಗಿ ಬೋರಾ ಮುಝಾಕಿ ನೇಮಕವಾಗಿದ್ದಾರೆ.

ಪ್ರಧಾನಿ ಇಡಿ ರಾಮ ಅವರು ದೇಶದ ಎಡಪಂಥೀಯ ಪಕ್ಷವಾದ ಸೋಷಿಯಲಿಸ್ಟ್‌ ಪಾರ್ಟಿ ಆಫ್‌ ಅಲ್ಬೇನಿಯಾದ ಅಧ್ಯಕ್ಷರೂ ಆಗಿದ್ದಾರೆ. ಅವರು 2013 ರಿಂದ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಲ್ಬೇನಿಯಾ, ಆಗ್ನೇಯ ಯುರೋಪಿನ ಬಾಲ್ಕನ್ ಪರ್ಯಾಯ ದ್ವೀಪದಲ್ಲಿರುವ ದೇಶವಾಗಿದೆ. ‘ತಿರಾನಾ’ ದೇಶದ ರಾಜಧಾನಿಯಾಗಿದ್ದು, ದೇಶವು ಅನೇಕ ಕೋಟೆಗಳು ಮತ್ತು ಪುರಾತತ್ವ ಸ್ಥಳಗಳನ್ನು ಹೊಂದಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮಲ್ಲಿ ಇನ್ನೂ ಶೇಕಡಾ ೩೩ರಶ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡಲು ಸಾಧ್ಯವಾಗಿಲ್ಲ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...