Homeಅಂತರಾಷ್ಟ್ರೀಯಅಲ್ಬೇನಿಯಾ ದಾಖಲೆ - ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

- Advertisement -
- Advertisement -

ಏಪ್ರಿಲ್ 25 ರಂದು ಯುರೋಪಿನ ದೇಶವಾದ ಅಲ್ಬೇನಿಯಾದಲ್ಲಿ ನಡೆದ ಚುನಾವಣೆಯ ನಂತರ, ಅಲ್ಲಿನ ಪ್ರಧಾನಿ ‘ಎಡಿ ರಾಮ’ ತನ್ನ ಹೊಸ ಸಚಿವ ಸಂಪುಟವನ್ನು ಘೋಷಿಸಿದ್ದಾರೆ. ತನ್ನ ಹೊಸ ತಂಡದ 16 ಹುದ್ದೆಗಳಲ್ಲಿ 12 ಸ್ಥಾನಗಳನ್ನು ಮಹಿಳೆಯರಿಗೆ ನೀಡುವ ಮೂಲಕ ದೇಶದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಹೀಗಾಗಿ ಅಲ್ಬೇನಿಯಾದ ಹೊಸ ಸರ್ಕಾರದ 12 ಸಚಿವಾಲಯಗಳಿಗೆ ಎಂಟು ಮಹಿಳಾ ಮತ್ತು ನಾಲ್ಕು ಪುರುಷರು ನೇತೃತ್ವ ವಹಿಸಲಿದ್ದಾರೆ. ಕ್ಯಾಬಿನೇಟ್‌‌ ದರ್ಜೆಯಿಲ್ಲದ ಇತರ ನಾಲ್ಕು ಮಂತ್ರಿ ಸ್ಥಾನಕ್ಕೆ ಮಹಿಳೆಯರೇ ಆಯ್ಕೆಯಾಗಿದ್ದಾರೆ. ಪ್ರಧಾನಿಯಿಂದ ಆಯ್ಕೆಯಾಗಿರುವ ಒಟ್ಟು 16 ಸಚಿವರಲ್ಲಿ ನಾಲ್ವರು ಮಂತ್ರಿಗಳು ರಾಜಕೀಯ ಅನನುಭವಿಗಳಾಗಿದ್ದು, ಉಳಿದ ಸಚಿವರು ರಾಜಕೀಯದಲ್ಲಿ ಸಕ್ರಿಯರಾಗಿರುವವರಾಗಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

ಮಾಜಿ ಹಣಕಾಸು ಸಚಿವರಾಗಿದ್ದ ಅರ್ಬೆನ್ ಅಹ್ಮೆತಾಜ್ ಅವರನ್ನು ದೇಶದ ಉಪ ಪ್ರಧಾನಿಯಾಗಿ ನೇಮಿಸಲಾಯಿತು. ವಿದೇಶಿ, ರಕ್ಷಣಾ, ಆಂತರಿಕ, ಮೂಲಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಮತ್ತು ಸಂಸ್ಕೃತಿ ಸಚಿವಾಲಯಗಳಿಗೆ ಓಲ್ಟಾ ಕ್ಷಾಕಾ, ನಿಕೊ ಪೆಲೆಶಿ, ಬ್ಲೆಂಡಿ ಕುಸಿ ಬೆಲಿಂಡ ಬಲ್ಲುಕು, ಒಗೆರ್ಟಾ ಮನಸ್ತಿರ್ಲಿಯು, ಇವಿಸ್ ಕುಶಿ ಮತ್ತು ಎಲ್ವಾ ಮಾರ್ಗರಿಟಿಯನ್ನು ನೇಮಿಸಲಾಗಿದೆ.

ತೆರಿಗೆ ನಿರ್ದೇಶನಾಲಯದ ಮಾಜಿ ನಿರ್ದೇಶಕರಾದ ಡೆಲಿನಾ ಇಬ್ರಾಹಿಮಿಗೆ ಹಣಕಾಸು ಖಾತೆಯನ್ನು ನೀಡಲಾಗಿದ್ದು, ಕೃಷಿಗೆ ಸಹಾಯಧನ ನೀಡುವ ಮುಖ್ಯ ಸಂಸ್ಥೆಯಾದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಏಜೆನ್ಸಿಯ ಮಾಜಿ ಮುಖ್ಯಸ್ಥೆ ಫ್ರಿಡಾ ಕ್ರಿಫ್ಕಾ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ಕಾನೂನುಗಳ ಸಂಸದೀಯ ಆಯೋಗದ ಮಾಜಿ ಮುಖ್ಯಸ್ಥ ಉಲ್ಸಿ ಮಂಜ ಅವರನ್ನು ನ್ಯಾಯಾಂಗ ಸಚಿವರನ್ನಾಗಿ ನೇಮಿಸಲಾಯಿತು. ಕ್ಯಾಬಿನೇಟ್‌‌ ದರ್ಜೆ ಇಲ್ಲದ ನಾಲ್ವರು ಮಂತ್ರಿಗಳಲ್ಲಿ ಸಂಸತ್‌ ವ್ಯವಹಾರದ ಸಚಿವೆಯಾಗಿ ಎಲಿಸಾ ಸ್ಪಿರೊಪಾಲಿ, ಉದ್ಯಮಶೀಲತೆ ರಕ್ಷಣೆಯ ಮಂತ್ರಿಯಾಗಿ ಎಡೋನಾ ಬಿಲಾಲಿ, ಸೇವೆಗಳ ಸಚಿವರಾಗಿ ಮಿಲ್ವಾ ಎಕೊನೊಮಿ ಮತ್ತು ಯುವ ಮತ್ತು ಮಕ್ಕಳ ಸಚಿವರಾಗಿ ಬೋರಾ ಮುಝಾಕಿ ನೇಮಕವಾಗಿದ್ದಾರೆ.

ಪ್ರಧಾನಿ ಇಡಿ ರಾಮ ಅವರು ದೇಶದ ಎಡಪಂಥೀಯ ಪಕ್ಷವಾದ ಸೋಷಿಯಲಿಸ್ಟ್‌ ಪಾರ್ಟಿ ಆಫ್‌ ಅಲ್ಬೇನಿಯಾದ ಅಧ್ಯಕ್ಷರೂ ಆಗಿದ್ದಾರೆ. ಅವರು 2013 ರಿಂದ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಲ್ಬೇನಿಯಾ, ಆಗ್ನೇಯ ಯುರೋಪಿನ ಬಾಲ್ಕನ್ ಪರ್ಯಾಯ ದ್ವೀಪದಲ್ಲಿರುವ ದೇಶವಾಗಿದೆ. ‘ತಿರಾನಾ’ ದೇಶದ ರಾಜಧಾನಿಯಾಗಿದ್ದು, ದೇಶವು ಅನೇಕ ಕೋಟೆಗಳು ಮತ್ತು ಪುರಾತತ್ವ ಸ್ಥಳಗಳನ್ನು ಹೊಂದಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮಲ್ಲಿ ಇನ್ನೂ ಶೇಕಡಾ ೩೩ರಶ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡಲು ಸಾಧ್ಯವಾಗಿಲ್ಲ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...