Homeಕರ್ನಾಟಕ'ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..'; ಸುಧಾಕರ್ 'ಎಣ್ಣೆ ಪಾರ್ಟಿ'ಗೆ ಕಾಂಗ್ರೆಸ್ ಲೇವಡಿ

‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..’; ಸುಧಾಕರ್ ‘ಎಣ್ಣೆ ಪಾರ್ಟಿ’ಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ

ದೇಶದ ಖ್ಯಾತ ಫ್ಯಾಕ್ಟ್‌-ಚೆಕ್ಕರ್, ‘ಆಲ್ಟ್‌ ನ್ಯೂಸ್’ ಸಂಸ್ಥಾಪಕ ಮಹಮದ್ ಝುಬೇರ್ ಅವರು ಮದ್ಯ ಹಂಚುವ ವಿಡಿಯೊಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ಸುಧಾಕರ್ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅವರು, “ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ. ಯಾವುದೇ ಸಂಸ್ಕಾರಿ ನ್ಯೂಸ್ ಏಜೆನ್ಸಿ ಅಥವಾ ನ್ಯೂಸ್ ಚಾನೆಲ್ ಈ ಬಗ್ಗೆ ವರದಿ ಮಾಡುವುದಿಲ್ಲ. ಬೆಂಬಲಿಗರಿಗೆ ಮದ್ಯ ಹಂಚುತ್ತಿರುವ ಬಿಜೆಪಿ ಸಂಘಟಕರು. ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರದಿಂದ ಬಿಜೆಪಿ ಸಂಸದರಾಗಿ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ಮಾಜಿ ಆರೋಗ್ಯ ಸಚಿವರಿಂದ ನೆಲಮಂಗಲದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಜನರಿಗೆ ಹಂಚಲು ಬಿಜೆಪಿ ಕಾರ್ಯಕ್ರಮಕ್ಕೆ ತಂದಿದ್ದ ಟ್ರಕ್ ಮದ್ಯ, 650 ಬಿಯರ್ ಬಾಕ್ಸ್ ಹಾಗೂ 450 ಮದ್ಯದ ಬಾಕ್ಸ್ ಇತ್ತು” ಎಂದು ಹೇಳಿದ್ದಾರೆ.

“ಸಾಮಾನ್ಯ ವ್ಯಕ್ತಿ ಮತ್ತು ರಾಜಕಾರಣಿಗಳಿಗೆ ವಿಭಿನ್ನ ನಿಯಮಗಳು” ಎಂದು ಆಗ್ಲವಾಹಿನಿ ಪತ್ರಕರ್ತೆ ನಬಿಲಾ ಜಮಾಲ್ ಎಕ್ಸ್‌ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

“ಚಿಕ್ಕಬಳ್ಳಾಪುರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಕೆ.ಸುಧಾಕರ್ ಅವರ ಚುನಾವಣಾ ಗೆಲುವಿನ ನಂತರ ಕರ್ನಾಟಕದಲ್ಲಿ ಮೈದಾನದಲ್ಲಿ ಕುಡಿತದ ಪಾರ್ಟಿ ಆಯೋಜಿಸಲಾಗಿದೆ. ದೊಡ್ಡ ಟ್ರಕ್‌ಗಳಲ್ಲಿ ತಂದ ಬಾಟಲಿಗಳನ್ನು ಸಂಗ್ರಹಿಸಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪೊಲೀಸರ ಮುಂದೆಯೇ ಹಂಚುತ್ತಿದ್ದಾರೆ. ಬಿಜೆಪಿಯ ಅಧಿಕೃತ ಲೆಟರ್‌ಹೆಡ್ ಸಮಾರಂಭದಲ್ಲಿ ಮದ್ಯಪಾನಕ್ಕೆ ಅನುಮತಿ ಕೋರಿದೆ. ಮದ್ಯವನ್ನು ಪೂರೈಸಲು ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ಹೇಳುತ್ತಾರೆ ಮತ್ತು ಪರಿಣಾಮಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದರು. ಆದರೆ, ಅಬಕಾರಿ ಡಿಪಿಟಿಯು ಪೊಲೀಸರ ಒಪ್ಪಿಗೆಯಿಲ್ಲದೆ ಅವರಿಗೆ ಅನುಮೋದನೆ ನೀಡಿದೆ ಎಂದು ಆರೋಪಿಸಲಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಸಂಸದ ಸುಧಾಕರ್ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಕೆ.ಸುಧಾಕರ್, “20 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ; ಆ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ” ಎಂದು ​ ಸ್ಪಷ್ಟನೆ ನೀಡಿದ್ದಾರೆ.

“ತಾಲೂಕಿನ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು, ನನ್ನನ್ನೂ ಮತ್ತು ಪ್ರತಿಪಕ್ಷದ ನಾಯಕ ಆರ್​. ಅಶೋಕ್​ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ. ನಾನು ಬಂದ ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ಜೆಡಿಎಸ್ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪು” ಎಂದಿದ್ದಾರೆ.

ಇದನ್ನೂ ಓದಿ;  ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...