Homeಕರ್ನಾಟಕ'ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..'; ಸುಧಾಕರ್ 'ಎಣ್ಣೆ ಪಾರ್ಟಿ'ಗೆ ಕಾಂಗ್ರೆಸ್ ಲೇವಡಿ

‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..’; ಸುಧಾಕರ್ ‘ಎಣ್ಣೆ ಪಾರ್ಟಿ’ಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ

ದೇಶದ ಖ್ಯಾತ ಫ್ಯಾಕ್ಟ್‌-ಚೆಕ್ಕರ್, ‘ಆಲ್ಟ್‌ ನ್ಯೂಸ್’ ಸಂಸ್ಥಾಪಕ ಮಹಮದ್ ಝುಬೇರ್ ಅವರು ಮದ್ಯ ಹಂಚುವ ವಿಡಿಯೊಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ಸುಧಾಕರ್ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅವರು, “ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ. ಯಾವುದೇ ಸಂಸ್ಕಾರಿ ನ್ಯೂಸ್ ಏಜೆನ್ಸಿ ಅಥವಾ ನ್ಯೂಸ್ ಚಾನೆಲ್ ಈ ಬಗ್ಗೆ ವರದಿ ಮಾಡುವುದಿಲ್ಲ. ಬೆಂಬಲಿಗರಿಗೆ ಮದ್ಯ ಹಂಚುತ್ತಿರುವ ಬಿಜೆಪಿ ಸಂಘಟಕರು. ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರದಿಂದ ಬಿಜೆಪಿ ಸಂಸದರಾಗಿ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ಮಾಜಿ ಆರೋಗ್ಯ ಸಚಿವರಿಂದ ನೆಲಮಂಗಲದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಜನರಿಗೆ ಹಂಚಲು ಬಿಜೆಪಿ ಕಾರ್ಯಕ್ರಮಕ್ಕೆ ತಂದಿದ್ದ ಟ್ರಕ್ ಮದ್ಯ, 650 ಬಿಯರ್ ಬಾಕ್ಸ್ ಹಾಗೂ 450 ಮದ್ಯದ ಬಾಕ್ಸ್ ಇತ್ತು” ಎಂದು ಹೇಳಿದ್ದಾರೆ.

“ಸಾಮಾನ್ಯ ವ್ಯಕ್ತಿ ಮತ್ತು ರಾಜಕಾರಣಿಗಳಿಗೆ ವಿಭಿನ್ನ ನಿಯಮಗಳು” ಎಂದು ಆಗ್ಲವಾಹಿನಿ ಪತ್ರಕರ್ತೆ ನಬಿಲಾ ಜಮಾಲ್ ಎಕ್ಸ್‌ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

“ಚಿಕ್ಕಬಳ್ಳಾಪುರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಕೆ.ಸುಧಾಕರ್ ಅವರ ಚುನಾವಣಾ ಗೆಲುವಿನ ನಂತರ ಕರ್ನಾಟಕದಲ್ಲಿ ಮೈದಾನದಲ್ಲಿ ಕುಡಿತದ ಪಾರ್ಟಿ ಆಯೋಜಿಸಲಾಗಿದೆ. ದೊಡ್ಡ ಟ್ರಕ್‌ಗಳಲ್ಲಿ ತಂದ ಬಾಟಲಿಗಳನ್ನು ಸಂಗ್ರಹಿಸಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪೊಲೀಸರ ಮುಂದೆಯೇ ಹಂಚುತ್ತಿದ್ದಾರೆ. ಬಿಜೆಪಿಯ ಅಧಿಕೃತ ಲೆಟರ್‌ಹೆಡ್ ಸಮಾರಂಭದಲ್ಲಿ ಮದ್ಯಪಾನಕ್ಕೆ ಅನುಮತಿ ಕೋರಿದೆ. ಮದ್ಯವನ್ನು ಪೂರೈಸಲು ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ಹೇಳುತ್ತಾರೆ ಮತ್ತು ಪರಿಣಾಮಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದರು. ಆದರೆ, ಅಬಕಾರಿ ಡಿಪಿಟಿಯು ಪೊಲೀಸರ ಒಪ್ಪಿಗೆಯಿಲ್ಲದೆ ಅವರಿಗೆ ಅನುಮೋದನೆ ನೀಡಿದೆ ಎಂದು ಆರೋಪಿಸಲಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಸಂಸದ ಸುಧಾಕರ್ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಕೆ.ಸುಧಾಕರ್, “20 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ; ಆ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ” ಎಂದು ​ ಸ್ಪಷ್ಟನೆ ನೀಡಿದ್ದಾರೆ.

“ತಾಲೂಕಿನ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು, ನನ್ನನ್ನೂ ಮತ್ತು ಪ್ರತಿಪಕ್ಷದ ನಾಯಕ ಆರ್​. ಅಶೋಕ್​ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ. ನಾನು ಬಂದ ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ಜೆಡಿಎಸ್ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪು” ಎಂದಿದ್ದಾರೆ.

ಇದನ್ನೂ ಓದಿ;  ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...