Homeಮುಖಪುಟದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

- Advertisement -
- Advertisement -

ದೆಹಲಿಯಲ್ಲಿ ಕಳೆದ ತಿಂಗಳು 24.50 ಮಿಲಿಯನ್ (2.4 ಕೋಟಿ) ಲೀಟರ್ ಮದ್ಯ ಮಾರಾಟವಾಗಿದೆ. ಈ ಪ್ರಮಾಣವು 2019-20 ರಲ್ಲಿ ಸರಾಸರಿ ಮಾಸಿಕ ಮಾರಾಟವಾಗಿದ್ದ 13.2 ಮಿಲಿಯನ್ ಲೀಟರ್‌ಗಿಂತ ದ್ವಿಗುಣವಾಗಿದೆ ಎಂದು ದೆಹಲಿ ಸರ್ಕಾರ ಹೈಕೋರ್ಟ್‌‌ಗೆ ತಿಳಿಸಿದೆ.

ದೆಹಲಿಯಲ್ಲಿ ಮದ್ಯ ಮಾರಾಟ ಮತ್ತು ಕೊಳ್ಳುವಿಕೆಗೆ ನೀಡಲಾಗಿದ್ದ ರಿಯಾಯಿತಿ ದರವನ್ನು ದೆಹಲಿ ಸರ್ಕಾರ ಹಿಂಪಡೆದುಕೊಂಡಿದೆ. ಸರ್ಕಾರ ಈ ನಡೆಯನ್ನು ಪ್ರಶ್ನಿಸಿ ಮದ್ಯ ಮಾರಾಟಗಾರರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆಯ ವೇಳೆ ನ್ಯಾಯಮೂರ್ತಿ ಕಾಮೇಶ್ವರ ರಾವ್ ಅವರ ಮುಂದೆ ದೆಹಲಿ ಸರ್ಕಾರ ಅಫಿಡವಿಟ್ ಸಲ್ಲಿಸಿದ್ದು, “ಜನರು ತಮ್ಮ ಸಾಮಾನ್ಯ ಸಾಮರ್ಥ್ಯಕ್ಕಿಂತ ದುಪ್ಪಟ್ಟು ಹಣವನ್ನು ವ್ಯಯಿಸಿ ಮದ್ಯ ಸೇವನೆ ಮಾಡುವುದಿಲ್ಲ. ಹೀಗಾಗಿ, ಜನರ ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಿಯಾಯಿತಿಯನ್ನು ಹಿಂಪಡೆಯಲಾಗಿದೆ. ಇದರಿಂದಾಗಿ ಮಾರಾಟವಾಗದೇ ಉಳಿಯುವ ಸಂಗ್ರಹಣೆಯ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ವಿವರಿಸಿದೆ.

ಕೆಲವು ಪರವಾನಿಗೆದಾರರು (ದೊಡ್ಡ ಆರ್ಥಿಕ ಆಸ್ತಿ ಹೊಂದಿರುವವರು) ಅಂದಾಜು ಚಿಲ್ಲರೆ ಮಾರ್ಜಿನ್ನಿಂದ 50% ಅಥವಾ ಹೆಚ್ಚಿನ ರಿಯಾಯಿತಿಯನ್ನು ಮದ್ಯದ ಮೇಲೆ ನೀಡಲು ಪ್ರಾರಂಭಿಸಿದರು. ಇದು ಜನರು ತಮ್ಮ ಅಗತ್ಯಕ್ಕಿಂತ ಹೆಚ್ಚು ಮದ್ಯವನ್ನು ಖರೀದಿಸಲು ಪ್ರೇರೇಪಿಸಿತು ಎಂದು ಸರ್ಕಾರ ಹೇಳಿದೆ.

“ಮದ್ಯಪಾನವನ್ನು ಉತ್ತೇಜಿಸುವುದನ್ನು ಮತ್ತು ಮದ್ಯದ ಅಕ್ರಮ ವ್ಯಾಪಾರವನ್ನು ತಡೆಗಟ್ಟುವುದು ದೆಹಲಿ ಸರ್ಕಾರದ ಪ್ರಾಥಮಿಕ ಉದ್ದೇಶವಾಗಿದೆ. ಅಲ್ಲದೆ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯೂ ಮುಖ್ಯವಾಗಿದೆ. ಮದ್ಯ ಮಾರಾಟಕ್ಕೆ ಅನುಮತಿಸುವ ಮಿತಿಯನ್ನು ಮೀರಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಸಂಗ್ರಹಣೆಯ ಮೂಲಕ ಗ್ರಾಹಕರಿಗೆ ಆಮಿಷ ಒಡ್ಡಲಾಗುತ್ತಿದೆ. ಅದನ್ನು ತಡೆಗಟ್ಟವುದು ಸರ್ಕಾರದ ಸಾಮಾಜಿಕ ಮತ್ತು ನೈತಿಕ ಜವಾಬ್ದಾರಿಯಾಗಿದೆ” ಎಂದು ಸರ್ಕಾರ ತನ್ನ ಅಫಿಡೇವಿಟ್ನಲ್ಲಿ ತಿಳಿಸಿದೆ.

ರಿಯಾಯಿತಿಯನ್ನು ತೆಗೆದುಹಾಕುವ ನಿರ್ಧಾರದಿಂದ ತಮ್ಮ ಮಾರಾಟವು ಕುಸಿದಿದೆ ಮತ್ತು ಜನರು ಅಗ್ಗದ ಮದ್ಯಕ್ಕಾಗಿ ನೆರೆಯ ನಗರಗಳಿಗೆ ಹೋಗುತ್ತಿದ್ದಾರೆ. ಇದರಿಂದ ತಮಗೆ ಕೋಟಿಗಟ್ಟಲೆ ನಷ್ಟ ಉಂಟಾಗಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಅರ್ಜಿದಾರರ ಅರ್ಜಿಗಳನ್ನು ವಿರೋಧಿಸಿದ ಸರ್ಕಾರ, ನಗರದಲ್ಲಿ ಅನುಮತಿಯ ಮಿತಿಯನ್ನು ಮೀರಿ ಮದ್ಯವನ್ನು ಮಾರಾಟ ಮಾಡುವುದು ಮತ್ತು ಗ್ರಾಹಕರಿಗೆ ಆಮಿಷವೊಡ್ಡುವುದು ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸೃಷ್ಟಿಸುತ್ತಿದೆ. ಹೀಗಾಗಿ, ಮದ್ಯದ ಮೇಲಿನ ರಿಯಾಯಿತಿಯನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ರೈಲಿನ ಎಂಜಿನ್‌ನಲ್ಲಿ ಆಕಸ್ಮಿಕ ಬೆಂಕಿ, ಅವಘಡ ತಪ್ಪಿಸಲು ರೈಲು ತಳ್ಳಿದ ಪ್ರಯಾಣಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...