Homeಮುಖಪುಟದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

- Advertisement -
- Advertisement -

ದೆಹಲಿಯಲ್ಲಿ ಕಳೆದ ತಿಂಗಳು 24.50 ಮಿಲಿಯನ್ (2.4 ಕೋಟಿ) ಲೀಟರ್ ಮದ್ಯ ಮಾರಾಟವಾಗಿದೆ. ಈ ಪ್ರಮಾಣವು 2019-20 ರಲ್ಲಿ ಸರಾಸರಿ ಮಾಸಿಕ ಮಾರಾಟವಾಗಿದ್ದ 13.2 ಮಿಲಿಯನ್ ಲೀಟರ್‌ಗಿಂತ ದ್ವಿಗುಣವಾಗಿದೆ ಎಂದು ದೆಹಲಿ ಸರ್ಕಾರ ಹೈಕೋರ್ಟ್‌‌ಗೆ ತಿಳಿಸಿದೆ.

ದೆಹಲಿಯಲ್ಲಿ ಮದ್ಯ ಮಾರಾಟ ಮತ್ತು ಕೊಳ್ಳುವಿಕೆಗೆ ನೀಡಲಾಗಿದ್ದ ರಿಯಾಯಿತಿ ದರವನ್ನು ದೆಹಲಿ ಸರ್ಕಾರ ಹಿಂಪಡೆದುಕೊಂಡಿದೆ. ಸರ್ಕಾರ ಈ ನಡೆಯನ್ನು ಪ್ರಶ್ನಿಸಿ ಮದ್ಯ ಮಾರಾಟಗಾರರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆಯ ವೇಳೆ ನ್ಯಾಯಮೂರ್ತಿ ಕಾಮೇಶ್ವರ ರಾವ್ ಅವರ ಮುಂದೆ ದೆಹಲಿ ಸರ್ಕಾರ ಅಫಿಡವಿಟ್ ಸಲ್ಲಿಸಿದ್ದು, “ಜನರು ತಮ್ಮ ಸಾಮಾನ್ಯ ಸಾಮರ್ಥ್ಯಕ್ಕಿಂತ ದುಪ್ಪಟ್ಟು ಹಣವನ್ನು ವ್ಯಯಿಸಿ ಮದ್ಯ ಸೇವನೆ ಮಾಡುವುದಿಲ್ಲ. ಹೀಗಾಗಿ, ಜನರ ಮದ್ಯ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ರಿಯಾಯಿತಿಯನ್ನು ಹಿಂಪಡೆಯಲಾಗಿದೆ. ಇದರಿಂದಾಗಿ ಮಾರಾಟವಾಗದೇ ಉಳಿಯುವ ಸಂಗ್ರಹಣೆಯ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ವಿವರಿಸಿದೆ.

ಕೆಲವು ಪರವಾನಿಗೆದಾರರು (ದೊಡ್ಡ ಆರ್ಥಿಕ ಆಸ್ತಿ ಹೊಂದಿರುವವರು) ಅಂದಾಜು ಚಿಲ್ಲರೆ ಮಾರ್ಜಿನ್ನಿಂದ 50% ಅಥವಾ ಹೆಚ್ಚಿನ ರಿಯಾಯಿತಿಯನ್ನು ಮದ್ಯದ ಮೇಲೆ ನೀಡಲು ಪ್ರಾರಂಭಿಸಿದರು. ಇದು ಜನರು ತಮ್ಮ ಅಗತ್ಯಕ್ಕಿಂತ ಹೆಚ್ಚು ಮದ್ಯವನ್ನು ಖರೀದಿಸಲು ಪ್ರೇರೇಪಿಸಿತು ಎಂದು ಸರ್ಕಾರ ಹೇಳಿದೆ.

“ಮದ್ಯಪಾನವನ್ನು ಉತ್ತೇಜಿಸುವುದನ್ನು ಮತ್ತು ಮದ್ಯದ ಅಕ್ರಮ ವ್ಯಾಪಾರವನ್ನು ತಡೆಗಟ್ಟುವುದು ದೆಹಲಿ ಸರ್ಕಾರದ ಪ್ರಾಥಮಿಕ ಉದ್ದೇಶವಾಗಿದೆ. ಅಲ್ಲದೆ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯೂ ಮುಖ್ಯವಾಗಿದೆ. ಮದ್ಯ ಮಾರಾಟಕ್ಕೆ ಅನುಮತಿಸುವ ಮಿತಿಯನ್ನು ಮೀರಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಸಂಗ್ರಹಣೆಯ ಮೂಲಕ ಗ್ರಾಹಕರಿಗೆ ಆಮಿಷ ಒಡ್ಡಲಾಗುತ್ತಿದೆ. ಅದನ್ನು ತಡೆಗಟ್ಟವುದು ಸರ್ಕಾರದ ಸಾಮಾಜಿಕ ಮತ್ತು ನೈತಿಕ ಜವಾಬ್ದಾರಿಯಾಗಿದೆ” ಎಂದು ಸರ್ಕಾರ ತನ್ನ ಅಫಿಡೇವಿಟ್ನಲ್ಲಿ ತಿಳಿಸಿದೆ.

ರಿಯಾಯಿತಿಯನ್ನು ತೆಗೆದುಹಾಕುವ ನಿರ್ಧಾರದಿಂದ ತಮ್ಮ ಮಾರಾಟವು ಕುಸಿದಿದೆ ಮತ್ತು ಜನರು ಅಗ್ಗದ ಮದ್ಯಕ್ಕಾಗಿ ನೆರೆಯ ನಗರಗಳಿಗೆ ಹೋಗುತ್ತಿದ್ದಾರೆ. ಇದರಿಂದ ತಮಗೆ ಕೋಟಿಗಟ್ಟಲೆ ನಷ್ಟ ಉಂಟಾಗಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

ಅರ್ಜಿದಾರರ ಅರ್ಜಿಗಳನ್ನು ವಿರೋಧಿಸಿದ ಸರ್ಕಾರ, ನಗರದಲ್ಲಿ ಅನುಮತಿಯ ಮಿತಿಯನ್ನು ಮೀರಿ ಮದ್ಯವನ್ನು ಮಾರಾಟ ಮಾಡುವುದು ಮತ್ತು ಗ್ರಾಹಕರಿಗೆ ಆಮಿಷವೊಡ್ಡುವುದು ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸೃಷ್ಟಿಸುತ್ತಿದೆ. ಹೀಗಾಗಿ, ಮದ್ಯದ ಮೇಲಿನ ರಿಯಾಯಿತಿಯನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ರೈಲಿನ ಎಂಜಿನ್‌ನಲ್ಲಿ ಆಕಸ್ಮಿಕ ಬೆಂಕಿ, ಅವಘಡ ತಪ್ಪಿಸಲು ರೈಲು ತಳ್ಳಿದ ಪ್ರಯಾಣಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...