Homeಕರ್ನಾಟಕ🛑 Alert| ರಾಜ್ಯದಲ್ಲಿ ಅಂಬುಲೆನ್ಸ್‌ ಸೇವೆ ಅಸ್ತವ್ಯಸ್ತ; ಆತಂಕದಲ್ಲಿ ಜನತೆ

🛑 Alert| ರಾಜ್ಯದಲ್ಲಿ ಅಂಬುಲೆನ್ಸ್‌ ಸೇವೆ ಅಸ್ತವ್ಯಸ್ತ; ಆತಂಕದಲ್ಲಿ ಜನತೆ

- Advertisement -
- Advertisement -

ಶನಿವಾರ ಸಂಜೆಯಿಂದ ರಾಜ್ಯದಲ್ಲಿ ಅಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದ್ದು, ರಾಜ್ಯದ ಜನರು ಆತಂಕಪಡುವಂತಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್ ಮಾಡಿದ್ದು, “ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಅಪಘಾತ ಪ್ರಕರಣಗಳು, ವಿಷಕುಡಿದ ಪ್ರಕರಣಗಳು, ಹಾವು ಕಚ್ಚಿದ ಪ್ರಕರಗಳು, ಹೆರಿಗೆ ಪ್ರಕರಣಗಳು ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ಸೇವೆ ಅಗತ್ಯವಿದೆ. 108 ಅಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆ ನಡೆಸುತ್ತಾ ಇದ್ದು, ಶನಿವಾರ ಸಂಜೆಯಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಶನಿವಾರ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಲಭ್ಯವಾಗುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್‌, “ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

“ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್ ನಲ್ಲಿ 108 ಆಂಬ್ಯುಲೆನ್ಸ್ ಸೇವೆಗೆ ಓವರ್ ಫ್ಲೋ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

“108 ಹಾಗೂ 112 ಕಾಲ್ ಸೆಂಟರ್ ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬ್ಯುಲೆನ್ಸ್ ಡ್ರೈವರ್‌‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ” ಎಂದಿದ್ದಾರೆ.

ಅಂಬುಲೆನ್ಸ್ ಬಾರದೆ ಮಹಿಳೆ ನಿಧನ

ತಾಂತ್ರಿಕ ಸಮಸ್ಯೆಯಿಂದ ‘108 ಅಂಬುಲೆನ್ಸ್’ ಸೇವೆ ಸ್ಥಗಿತಗೊಂಡಿದೆ. ಸಕಾಲಕ್ಕೆ ಅಂಬುಲೆನ್ಸ್​ ಸಿಗದೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿಯ ಜಯಮ್ಮ(65) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಲವು ಬಾರಿ ಅಂಬುಲೆನ್ಸ್ ಕರೆ ಮಾಡಲಾಗಿದೆ. ಆದ್ರೆ ಅಂಬುಲೆನ್ಸ್ ಬರದ ಕಾರಣ ಜಯಮ್ಮ ಮನೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.

“108ಕ್ಕೆ ಕರೆ ಮಾಡಿ 1 ಗಂಟೆ ಕಳೆದರೂ ಅಂಬುಲೆನ್ಸ್‌ ಮನೆ ಬಳಿ ಬಂದಿಲ್ಲ. ಜಯಮ್ಮ ಕುಟುಂಬಸ್ಥರು ಮಧುಗಿರಿ ಟಿಹೆಚ್​ಒಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಟಿಹೆಚ್​ಒಗೆ ಕರೆ ಮಾಡಿದ ನಂತರ ಐಡಿಹಳ್ಳಿಗೆ ಅಂಬುಲೆನ್ಸ್​ ಬಂದಿದೆ. ಆದ್ರೆ 108 ಅಂಬುಲೆನ್ಸ್​ ಬರುವಷ್ಟರಲ್ಲಿ ಜಯಮ್ಮ ಮೃತಪಟ್ಟಿದ್ದರು. ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್​ ಬಂದಿದ್ದರೆ ಪ್ರಾಣ ಉಳಿಯುತ್ತಿತ್ತು” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...