Homeಮುಖಪುಟಆಲ್ಗಾರಿದಂ ಪಕ್ಷಪಾತ, ಎಐನಲ್ಲೂ ಜಾತಿವಾದ-ತಾರತಮ್ಯ : ಹೊಸ ಚರ್ಚೆ ಹುಟ್ಟು ಹಾಕಿದ ಡಾ. ವಿಜೇಂದರ್ ಹೇಳಿಕೆ

ಆಲ್ಗಾರಿದಂ ಪಕ್ಷಪಾತ, ಎಐನಲ್ಲೂ ಜಾತಿವಾದ-ತಾರತಮ್ಯ : ಹೊಸ ಚರ್ಚೆ ಹುಟ್ಟು ಹಾಕಿದ ಡಾ. ವಿಜೇಂದರ್ ಹೇಳಿಕೆ

- Advertisement -
- Advertisement -

ಆಲ್ಗಾರಿದಂ ಪಕ್ಷಪಾತ (Algorithm bias) ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಪ್ರಮುಖ ಸಾಮಾಜಿಕ ನ್ಯಾಯ ಹೋರಾಟಗಾರ ಮತ್ತು ವಿದ್ವಾಂಸ ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು, ಚಾಟ್‌ಜಿಪಿಟಿ (ChatGPT)ಯಂತಹ ಎಐ (ಕೃತಕ ಬುದ್ದಿಮತ್ತೆ) ಉಪಕರಣಗಳಲ್ಲಿ ದತ್ತಾಂಶ ಪಕ್ಷಪಾತ (data bias) ಇರುವ ಬಗ್ಗೆ ಪ್ರಶ್ನೆ ಎತ್ತಿದ್ದು, ಅದನ್ನು ಅವರು “ಸವರ್ಣ” (ಪ್ರಬಲ ಜಾತಿ) ಎಂದು ಕರೆದಿದ್ದಾರೆ. ಆ ಬಳಿಕ 21ನೇ ಶತಮಾನದ ಅತ್ಯುನ್ನತ ಅನ್ವೇಷಣೆ ಎಂದು ಕರೆಯಲ್ಪಡುವ ಎಐನಲ್ಲೂ ಜಾತಿ ತಾರತಮ್ಯ ಇರುವ ಬಗ್ಗೆ ಚರ್ಚೆ ಶುರುವಾಗಿದೆ.

“ಪ್ರೊಫೆಸರ್ಸ್ ಡೈರಿ”ಯ ಲೇಖಕ ಪ್ರೊ. ಲಕ್ಷ್ಮಣ್ ಯಾದವ್ ಅವರ ಹೊಸ ಪುಸ್ತಕ “ಜಾತಿ ಜನಗಣತಿ” ಬಿಡುಗಡೆ ಸಮಾರಂಭದಲ್ಲಿ ನಡೆದ ಚರ್ಚೆಯಲ್ಲಿ ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು ಎಐ ತಂತ್ರಜ್ಞಾನದಲ್ಲಿ ಜಾತಿ-ಆಧಾರಿತ ಪಕ್ಷಪಾತವಿದೆ ಎಂದು ಆರೋಪಿಸಿದ್ದಾರೆ. ಇದು ಪುಸ್ತಕ ಬಿಡುಗಡೆಯಲ್ಲಿ ನಡೆದ ಚರ್ಚೆಯ ಭಾಗವಾದರೂ, ಬಿಜೆಪಿ-ಆರ್‌ಎಸ್‌ಎಸ್‌ ಬೆಂಬಲಿಗ ಟ್ರೋಲ್‌ಗಳು ಇದನ್ನು ಹೆಚ್ಚು ವೈರಲ್ ಆಗುವಂತೆ ಮಾಡಿದ್ದು, ಆ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಚೌಹಾಣ್ ಅವರ ಹೇಳಿಕೆಯ ಒಂದು ಸಣ್ಣ ಕ್ಲಿಪ್ ಜಾತಿ, ತಂತ್ರಜ್ಞಾನ, ರಾಜಕಾರಣದ ಕುರಿತ ದೊಡ್ಡ ಚರ್ಚೆಗೆ ನಾಂದಿ ಹಾಡಿದೆ. ಅವರ ಬೆಂಬಲಿಗರು ಇದನ್ನು ‘ವ್ಯವಸ್ಥಿತ ದಮನದ ವಿರುದ್ಧದ ಹೋರಾಟ’ವಾಗಿ ನೋಡುತ್ತಿದ್ದಾರೆ. ಸಂಘಪರಿವಾರದ ಬೆಂಬಲಿಗ ಟ್ರೋಲ್ ಪಡೆಗಳು ಇದನ್ನು “ಅತಿಯಾದ ಜಾತಿವಾದ” ಎಂದು ಹೇಳುತ್ತಿವೆ.

ವರದಿಗಳ ಪ್ರಕಾರ, ಜನವರಿ 17ರಂದು ದೆಹಲಿಯಲ್ಲಿ ನಡೆದ ಸಾಹಿತ್ಯ ಸಮಾರಂಭದಲ್ಲಿ (ವರ್ಲ್ಡ್ ಬುಕ್ ಫೇರ್) ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ಡಾ. ಲಕ್ಷ್ಮಣ್ ಯಾದವ್ ಅವರ ಹೊಸ ಪುಸ್ತಕ “ಜಾತಿ ಜನಗಣತಿ” ಬಿಡುಗಡೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಡಾ. ವಿಜೇಂದರ್ ಸಿಂಗ್ ಚೌಹಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ್ದರು. ಜಾತಿ ಜನಗಣತಿ ಪುಸ್ತಕವು ಭಾರತದಲ್ಲಿ ಜಾತಿ ಆಧಾರಿತ ಜನಗಣತಿ, ಮೀಸಲಾತಿ ನೀತಿಗಳು ಮತ್ತು ಸಾಮಾಜಿಕ ನ್ಯಾಯದ ಅಗತ್ಯತೆಯ ಮೇಲೆ ಕೇಂದ್ರೀಕರಿಸುತ್ತದೆ. ಇದು ಪ್ರಸ್ತುತ ರಾಜಕೀಯ ವಾತಾವರಣದಲ್ಲಿ ಅತ್ಯಂತ ಸೂಕ್ಷ್ಮ ವಿಷಯವಾಗಿದೆ.

ಡಾ. ವಿಜೇಂದರ್ ಸಿಂಗ್ ಚೌಹಾಣ್ ಅವರು ಸ್ವತಃ ಸವರ್ಣ (ಪ್ರಬಲ ಜಾತಿ) ಹಿನ್ನೆಲೆಯಿಂದ ಬಂದವರಾಗಿದ್ದರೂ, ಅವರ 14 ನಿಮಿಷಗಳ ಭಾಷಣದಲ್ಲಿ ಎಐ ತಂತ್ರಜ್ಞಾನವನ್ನು ಜಾತಿ ವ್ಯವಸ್ಥೆಗೆ ಸಂಯೋಜಿಸಿ ಮಾತನಾಡಿದ್ದಾರೆ. ಚಾಟ್‌ಜಿಪಿಟಿಯಂತಹ ಟೂಲ್‌ಗಳು ‘ಪಕ್ಷಪಾತಿ’ ಎಂದು ಹೇಳಿದ್ದಾರೆ. ಅದರ ಸೃಷ್ಟಿಕರ್ತರು ಮತ್ತು ತರಬೇತುದಾರರು ಹೆಚ್ಚಾಗಿ ಸವರ್ಣ (ಪ್ರಬಲ ಜಾತಿ) ಜನರೇ ಆಗಿರುವುದರಿಂದ, ದತ್ತಾಂಶ ಸವರ್ಣ ದೃಷ್ಟಿಕೋನದಿಂದ ತುಂಬಿರುತ್ತದೆ ಎಂದಿದ್ದಾರೆ.

ಅಂತರ್ಜಾಲದಲ್ಲಿ ಲಭ್ಯವಿರುವ ದತ್ತಾಂಶ ಅಥವಾ ಮಾಹಿತಿಗಳು (ಇತಿಹಾಸ, ಸಾಹಿತ್ಯ, ಸಾಮಾಜಿಕ ವಿಜ್ಞಾನಗಳು) ಹೆಚ್ಚಾಗಿ ಸವರ್ಣ ಗುಂಪುಗಳಿಂದ ಬಂದಿರುವುದರಿಂದ, ಎಐ ಉತ್ತರಗಳು ಅದೇ ರೀತಿ ಪಕ್ಷಪಾತ ತೋರುತ್ತವೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಒಂದುವೇಳೆ ಜಾತಿ ಜನಗಣತಿ ನಡೆದರೆ, ತಟಸ್ಥ ತಂತ್ರಜ್ಞಾನ ಎಂಬ ಮಿಥ್ಯೆ ಒಡೆದುಬೀಳುತ್ತದೆ ಎಂದು ಹೇಳಿದ್ದಾರೆ.

ಇತಿಹಾಸ, ಸಾಹಿತ್ಯ ಮತ್ತು ಸಮಾಜ ವಿಜ್ಞಾನಗಳ ಹೆಚ್ಚಿನ ವಿಷಯವು ಪ್ರಬಲ ಜಾತಿಗಳ ಪ್ರಾಬಲ್ಯ ಹೊಂದಿರುವ ಇಂಟರ್ನೆಟ್ ದತ್ತಾಂಶದ ಮೇಲೆ ಎಐ ಮಾದರಿಗಳನ್ನು ಹೇಗೆ ತರಬೇತಿ ನೀಡಲಾಗುತ್ತದೆ ಎಂಬುವುದರ ಉದಾಹರಣೆಗಳನ್ನು ಚೌಹಾಣ್ ಅವರು ನೀಡಿದ್ದು, ಉದಾಹರಣೆಗೆ : ಮನುಸ್ಮೃತಿಯನ್ನು ‘ಪ್ರಾಚೀನ ಕಾನೂನು’ ಎಂದು ವೈಭವೀಕರಿಸುವುದು ಎಂದಿದ್ದಾರೆ. ಜಾತಿವಾದಿ ಚಿಂತನೆಯ ವಿರುದ್ಧದ ಹೋರಾಟವು ಉಪಕುಲಪತಿಗಳು, ಅಧಿಕಾರಿಗಳು, ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳ ವಿರುದ್ಧ ಮಾತ್ರವಲ್ಲ, ನಾವು ಅಲ್ಗಾರಿದಂ ಪಕ್ಷಪಾತದ ವಿರುದ್ಧವೂ ಯುದ್ಧ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಚೌಹಾಣ್ ಅವರ ಹೇಳಿಕೆಯು ಮೂಲತಃ ಹೊಸ ಪುಸ್ತಕವನ್ನು ಉದ್ದೇಶಿಯಾಗಿತ್ತು, ಏಕೆಂದರೆ, ಅಲ್ಲಿ ಲೇಖಕರು ಜಾತಿ ಜನಗಣತಿಯು ಸಾಮಾಜಿಕ ನ್ಯಾಯಕ್ಕೆ ಅತ್ಯಗತ್ಯ ಮಾತ್ರವಲ್ಲದೆ ಡಿಜಿಟಲ್ ಜಗತ್ತಿನಲ್ಲಿ ‘ಜಾತಿ ಪಕ್ಷಪಾತ’ವನ್ನು ಬಹಿರಂಗಪಡಿಸಲು ಒಂದು ಅಸ್ತ್ರವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ವಾದಿಸಿದ್ದಾರೆ. ಆದರೆ, ಟ್ರೋಲ್‌ ಪಡೆಗಳು ಅವರ ಹೇಳಿಕೆಯ ಕೇವಲ 5-6 ಸೆಕೆಂಡ್‌ನ ಕ್ಲಿಪ್ ಅನ್ನು ಮಾತ್ರ ವೈರಲ್ ಮಾಡಿವೆ. “ಚಾಟ್‌ಜಿಪಿಟಿ ಸವರ್ಣ” ಎಂಬ ಹೇಳಿಕೆಯನ್ನು ಎತ್ತಿ ತೋರಿಸಿವೆ. ಅದನ್ನು ‘ಅಸಂಬದ್ಧ’ ಅಥವಾ ‘ನರ್ಸರಿ ಮಟ್ಟದ ತರ್ಕ’ ಎಂದು ಲೇಬಲ್ ಮಾಡುವ ಮೂಲಕ ವೈರಲ್ ಮಾಡಿವೆ ಎಂದು en.themooknayak.com ವರದಿ ಮಾಡಿದೆ.

ಟ್ರೋಲ್ ಪೇಜ್‌ಗಳ ಹಿಂದೆ ಜಾತಿ ಜನಗಣತಿ ಮತ್ತು ಮೀಸಲಾತಿಯ ವಿರೋಧಿಗಳು ಎಂದು ಹೇಳಲಾಗುವ ಬಿಜೆಪಿ-ಆರ್‌ಎಸ್‌ಎಸ್‌ನ ಬೆಂಬಲಿಗರಿದ್ದಾರೆ. ಇವರು ಚೌಹಾಣ್ ಅವರ ಭಾಷಣದ ಸಣ್ಣ ಕ್ಲಿಪ್ ವೈರಲ್ ಮಾಡಿ ವ್ಯಾಪಕವಾಗಿ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಡಾ. ಲಕ್ಷ್ಮಣ್ ಯಾದವ್ ಅವರು ಈ ವಿಷಯದ ಬಗ್ಗೆ ವಿವರವಾದ ಪೋಸ್ಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಇದನ್ನು ರಾಜಕೀಯ ದುರುದ್ದೇಶ ಅಥವಾ ದುಷ್ಟ ರಾಜಕೀಯ ಉದ್ದೇಶ ಎಂದು ಕರೆದಿದ್ದಾರೆ. ಕ್ಲಿಪ್ ಕತ್ತರಿಸಿ ವೈರಲ್ ಮಾಡುವುದು ಕೇವಲ ಟ್ರೋಲ್ ಅಲ್ಲ, ಇದು ಒಂದು ರೀತಿಯ ದಮನಕಾರಿ ರಾಜಕೀಯದ ಆಯುಧವಾಗಿದೆ. ಇದರ ಮೂಲಕ ಭಯ ಹುಟ್ಟಿಸುವುದು, ಧಮ್ಕಿ ಹಾಕುವುದು ಮತ್ತು ಮೊಕದ್ದಮೆಗಳನ್ನು ದಾಖಲಿಸುವುದು ನಡೆಯುತ್ತದೆ ಎಂದಿದ್ದಾರೆ. ಅಲ್ಲದೆ, ಚೌಹಾಣ್ ಅವರೊಂದಿಗೆ 14 ವರ್ಷಗಳಿಂದ ಕೆಲಸ ಮಾಡಿದ್ದೇನೆ. ದೇಶಕ್ಕೆ ಇಂತಹ ಸವರ್ಣರು ಬೇಕು, ಅವರು ದೇಶವನ್ನು ವಿಶ್ವಗುರು ಮಾಡಬಹುದು” ಎಂದು ಹೇಳಿದ್ದಾರೆ.

ಡಾ. ಚೌಹಾಣ್ ಅವರನ್ನು ‘ಸವರ್ಣರಾಗಿದ್ದರೂ ಧೈರ್ಯಶಾಲಿ’ ಎಂದು ಬಣ್ಣಿಸಿದ ಯಾದವ್, ಇಂತಹ ವ್ಯಕ್ತಿಗಳು ಸಮಸ್ಯೆ ‘ಜಾತಿ’ಯಲ್ಲ, ಬದಲಿಗೆ ‘ಜಾತಿವಾದಿ ಶಕ್ತಿ’ ಎಂದು ಸಾಬೀತುಪಡಿಸುತ್ತಾರೆ ಎಂದಿದ್ದಾರೆ.

ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಎ.ಕೆ. ಸ್ಟಾಲಿನ್, ಇದನ್ನು ‘ಡಿಜಿಟಲ್ ಲಿಂಚಿಂಗ್’ ಎಂದು ಕರೆದಿದ್ದಾರೆ. “ಎಐನಲ್ಲಿ ಜಾತಿ ಪಕ್ಷಪಾತದ ಬಗ್ಗೆ ಡಜನ್‌ಗಟ್ಟಲೆ ವಿಮರ್ಶೆಗೆ ಒಳಪಟ್ಟ ಸಂಶೋಧನಾ ಪ್ರಬಂಧಗಳಿವೆ. ಅವುಗಳನ್ನು ಓದದೆ ವಿದ್ವಾಂಸರ ವಿರುದ್ಧ ಗುಂಪು ರಚಿಸುವುದು ಬೌದ್ಧಿಕ ದಿವಾಳಿತನ ಎಂದು ಅವರು ಹೇಳಿದ್ದಾರೆ. ಎಐ ಸಾಮಾಜಿಕ ಶ್ರೇಣಿಗಳನ್ನು ಪುನರಾವರ್ತಿಸುತ್ತದೆ ಎಂದು ಸಾಬೀತುಪಡಿಸಿದ ನೇಚರ್ ಜರ್ನಲ್‌ನಲ್ಲಿನ ಪ್ರಬಂಧ ಸೇರಿದಂತೆ ಅಂತಾರಾಷ್ಟ್ರೀಯ ಅಧ್ಯಯನಗಳನ್ನು ಸ್ಟಾಲಿನ್ ಉಲ್ಲೇಖಿಸಿದ್ದಾರೆ. ಅದೇ ರೀತಿ, ಲಖನ್ ಮೀನಾ ಅವರಂತಹ ಕಾರ್ಯಕರ್ತರು “ಡಾ. ಚೌಹಾಣ್ ಹೇಳಿರುವುದು ಶೇಕಡ 100ರಷ್ಟು ಸರಿ ಇದೆ. ಎಐ ದತ್ತಾಂಶ ಮನುವಾದಿಯಾಗಿದೆ, ಆದ್ದರಿಂದ ಅದರ ಪ್ರತಿಕ್ರಿಯೆಗಳು ಸಹ ಹಾಗೆಯೇ ಇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...