Homeಮುಖಪುಟಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು 'ಲವ್ ಜಿಹಾದ್'ಗೆ ಹಣಕಾಸು ಒದಗಿಸುತ್ತದೆ -...

ಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ಗೆ ಹಣಕಾಸು ಒದಗಿಸುತ್ತದೆ – ಸಿಎಂ ಯೋಗಿ

- Advertisement -
- Advertisement -

ಅಲಿಗಢ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿದೇಶಿ ಉತ್ಪನ್ನಗಳನ್ನು ಖರೀದಿಸುವುದರಿಂದ ಬಂದ ಲಾಭವು ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ನಂತಹ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತದೆ ಎಂದು ಹೇಳಿಕೆ ನೀಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ.

ದೇಶೀಯ ಉತ್ಪನ್ನಗಳಿಗೆ ಒತ್ತು

ರಾಜ್ಯ ಸರ್ಕಾರದ ‘ಒಂದು ಜಿಲ್ಲೆ, ಒಂದು ಉತ್ಪನ್ನ’ (ODOP) ಕಾರ್ಯಕ್ರಮದಡಿ ಅಲಿಗಢದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯೋಗಿ, ಪ್ರಜೆಗಳು ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ‘ಸ್ವದೇಶಿ’ ಉತ್ಪನ್ನಗಳನ್ನು ಮಾತ್ರ ಖರೀದಿಸಬೇಕು ಎಂದು ಕರೆ ನೀಡಿದರು. “ನೀವು ವಿದೇಶಿ ವಸ್ತುಗಳನ್ನು ಖರೀದಿಸಿದಾಗ, ಅದರ ಲಾಭ ವಿದೇಶಗಳಿಗೆ ಹೋಗುತ್ತದೆ. ಆ ಹಣವು ದೇಶದ ಸ್ಥಿರತೆಗೆ ಧಕ್ಕೆ ತರುವ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಮತಾಂತರ ಚಟುವಟಿಕೆಗಳಿಗೆ ಬಳಕೆಯಾಗುತ್ತದೆ,” ಎಂದು ಅವರು ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಬಲಪಡಿಸಲು ಈ ಹೇಳಿಕೆ ನೀಡಿರುವುದಾಗಿ ಅವರು ತಿಳಿಸಿದರು. ಆರ್ಥಿಕ ಸ್ವಾವಲಂಬನೆಯನ್ನು ರಾಷ್ಟ್ರೀಯ ಭದ್ರತೆಗೆ ಜೋಡಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.

ಅಲಿಗಢದ ಸಾಂಪ್ರದಾಯಿಕ ಬೀಗಗಳ ಉದ್ಯಮವನ್ನು ಉದಾಹರಣೆಯಾಗಿ ನೀಡಿದ ಸಿಎಂ, 2017ರ ಮೊದಲು ಮಾರುಕಟ್ಟೆ ಚೀನಾ ಉತ್ಪನ್ನಗಳಿಂದ ತುಂಬಿ ಹೋಗಿತ್ತು. ಇದರಿಂದ ಸ್ಥಳೀಯ ಕುಶಲಕರ್ಮಿಗಳ ಜೀವನಕ್ಕೆ ಹೊಡೆತ ಬಿದ್ದಿತ್ತು ಎಂದು ಹೇಳಿದರು. ಆದರೆ, ODOP ಉಪಕ್ರಮವು ಪ್ರಾದೇಶಿಕ ಉತ್ಪಾದನೆಯನ್ನು ಪುನಶ್ಚೇತನಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ

ವಿದೇಶಿ ಸರಕುಗಳ ಖರೀದಿ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವುದರ ನಡುವೆ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂಬುದು ವಿಶ್ಲೇಷಕರ ಅಭಿಪ್ರಾಯವಾಗಿದೆ. ಸಿಎಂ ಯೋಗಿ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕೆಲವರು ಯೋಗಿ ಅವರ ಹೇಳಿಕೆಯನ್ನು ರಾಷ್ಟ್ರೀಯತೆ ಮತ್ತು ಆರ್ಥಿಕ ಜಾಗೃತಿಯ ಸಂಕೇತವೆಂದು ಬಣ್ಣಿಸಿದ್ದಾರೆ. “ಸ್ವದೇಶಿ ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಇದು ರಾಷ್ಟ್ರೀಯತೆಯ ವಿಷಯ. ವಿದೇಶಿ ವಸ್ತುಗಳ ಮೇಲೆ ಖರ್ಚು ಮಾಡುವ ಪ್ರತಿಯೊಂದು ರೂಪಾಯಿಯೂ ಭಾರತಕ್ಕೆ ಹಾನಿ ಮಾಡಬಹುದು,” ಎಂದು X (ಹಿಂದಿನ ಟ್ವಿಟರ್) ಬಳಕೆದಾರರೊಬ್ಬರು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಹೆಚ್ಚಿನ ಜನರು ಈ ಹೇಳಿಕೆಯನ್ನು “ಭಯ ಹುಟ್ಟಿಸುವ ತಂತ್ರ” ಎಂದು ಟೀಕಿಸಿದ್ದಾರೆ. “ಗ್ರಾಹಕರ ಆಯ್ಕೆಗಳನ್ನು ಭಯೋತ್ಪಾದನೆಯೊಂದಿಗೆ ಜೋಡಿಸುವುದು ರಾಜಕೀಯ ತಂತ್ರದ ಹೊರತಾಗಿ ಬೇರೇನೂ ಅಲ್ಲ. ಇದು ವಾಸ್ತವಿಕ ನೀತಿಯಲ್ಲ,” ಎಂದು ಮತ್ತೊಬ್ಬ X ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೆಡ್ಡಿಟ್ ಫೋರಮ್‌ಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ, ಈ ಹೇಳಿಕೆಯ ಕುರಿತು ವ್ಯಂಗ್ಯಭರಿತ ಪೋಸ್ಟ್‌ಗಳು ಮತ್ತು ಮೀಮ್‌ಗಳು ಹರಿದಾಡುತ್ತಿವೆ. ವಿದೇಶಿ ವ್ಯಾಪಾರವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳೊಂದಿಗೆ ಸಮೀಕರಿಸುತ್ತಿರುವ ಬಗ್ಗೆ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಒಬ್ಬ ರೆಡ್ಡಿಟ್ ಬಳಕೆದಾರರು, “ಬಸ್ ಅಬ್ PM ಬನಾ ಹಿ ದೊ” (ಇನ್ನು ಇವರನ್ನು ಪ್ರಧಾನಿ ಮಾಡಿಬಿಡಿ) ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿ, ಈ ಹೇಳಿಕೆಯು ಆರ್ಥಿಕ ತರ್ಕಕ್ಕಿಂತ ಹೆಚ್ಚಾಗಿ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿದೆ ಎಂದು ಸೂಚಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲೇಖಿಸಿ, ಮುಸ್ಲಿಮೇತರರ ಟ್ರಿಬ್ಯೂನಲ್ ಪ್ರಕರಣ ಕೈಬಿಡಲು ಅಸ್ಸಾಂ ಸರಕಾರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...