Homeಮುಖಪುಟಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು 'ಲವ್ ಜಿಹಾದ್'ಗೆ ಹಣಕಾಸು ಒದಗಿಸುತ್ತದೆ -...

ಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ಗೆ ಹಣಕಾಸು ಒದಗಿಸುತ್ತದೆ – ಸಿಎಂ ಯೋಗಿ

- Advertisement -
- Advertisement -

ಅಲಿಗಢ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿದೇಶಿ ಉತ್ಪನ್ನಗಳನ್ನು ಖರೀದಿಸುವುದರಿಂದ ಬಂದ ಲಾಭವು ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ನಂತಹ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತದೆ ಎಂದು ಹೇಳಿಕೆ ನೀಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ.

ದೇಶೀಯ ಉತ್ಪನ್ನಗಳಿಗೆ ಒತ್ತು

ರಾಜ್ಯ ಸರ್ಕಾರದ ‘ಒಂದು ಜಿಲ್ಲೆ, ಒಂದು ಉತ್ಪನ್ನ’ (ODOP) ಕಾರ್ಯಕ್ರಮದಡಿ ಅಲಿಗಢದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯೋಗಿ, ಪ್ರಜೆಗಳು ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ‘ಸ್ವದೇಶಿ’ ಉತ್ಪನ್ನಗಳನ್ನು ಮಾತ್ರ ಖರೀದಿಸಬೇಕು ಎಂದು ಕರೆ ನೀಡಿದರು. “ನೀವು ವಿದೇಶಿ ವಸ್ತುಗಳನ್ನು ಖರೀದಿಸಿದಾಗ, ಅದರ ಲಾಭ ವಿದೇಶಗಳಿಗೆ ಹೋಗುತ್ತದೆ. ಆ ಹಣವು ದೇಶದ ಸ್ಥಿರತೆಗೆ ಧಕ್ಕೆ ತರುವ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಮತಾಂತರ ಚಟುವಟಿಕೆಗಳಿಗೆ ಬಳಕೆಯಾಗುತ್ತದೆ,” ಎಂದು ಅವರು ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಬಲಪಡಿಸಲು ಈ ಹೇಳಿಕೆ ನೀಡಿರುವುದಾಗಿ ಅವರು ತಿಳಿಸಿದರು. ಆರ್ಥಿಕ ಸ್ವಾವಲಂಬನೆಯನ್ನು ರಾಷ್ಟ್ರೀಯ ಭದ್ರತೆಗೆ ಜೋಡಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.

ಅಲಿಗಢದ ಸಾಂಪ್ರದಾಯಿಕ ಬೀಗಗಳ ಉದ್ಯಮವನ್ನು ಉದಾಹರಣೆಯಾಗಿ ನೀಡಿದ ಸಿಎಂ, 2017ರ ಮೊದಲು ಮಾರುಕಟ್ಟೆ ಚೀನಾ ಉತ್ಪನ್ನಗಳಿಂದ ತುಂಬಿ ಹೋಗಿತ್ತು. ಇದರಿಂದ ಸ್ಥಳೀಯ ಕುಶಲಕರ್ಮಿಗಳ ಜೀವನಕ್ಕೆ ಹೊಡೆತ ಬಿದ್ದಿತ್ತು ಎಂದು ಹೇಳಿದರು. ಆದರೆ, ODOP ಉಪಕ್ರಮವು ಪ್ರಾದೇಶಿಕ ಉತ್ಪಾದನೆಯನ್ನು ಪುನಶ್ಚೇತನಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ

ವಿದೇಶಿ ಸರಕುಗಳ ಖರೀದಿ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವುದರ ನಡುವೆ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂಬುದು ವಿಶ್ಲೇಷಕರ ಅಭಿಪ್ರಾಯವಾಗಿದೆ. ಸಿಎಂ ಯೋಗಿ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕೆಲವರು ಯೋಗಿ ಅವರ ಹೇಳಿಕೆಯನ್ನು ರಾಷ್ಟ್ರೀಯತೆ ಮತ್ತು ಆರ್ಥಿಕ ಜಾಗೃತಿಯ ಸಂಕೇತವೆಂದು ಬಣ್ಣಿಸಿದ್ದಾರೆ. “ಸ್ವದೇಶಿ ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಇದು ರಾಷ್ಟ್ರೀಯತೆಯ ವಿಷಯ. ವಿದೇಶಿ ವಸ್ತುಗಳ ಮೇಲೆ ಖರ್ಚು ಮಾಡುವ ಪ್ರತಿಯೊಂದು ರೂಪಾಯಿಯೂ ಭಾರತಕ್ಕೆ ಹಾನಿ ಮಾಡಬಹುದು,” ಎಂದು X (ಹಿಂದಿನ ಟ್ವಿಟರ್) ಬಳಕೆದಾರರೊಬ್ಬರು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಹೆಚ್ಚಿನ ಜನರು ಈ ಹೇಳಿಕೆಯನ್ನು “ಭಯ ಹುಟ್ಟಿಸುವ ತಂತ್ರ” ಎಂದು ಟೀಕಿಸಿದ್ದಾರೆ. “ಗ್ರಾಹಕರ ಆಯ್ಕೆಗಳನ್ನು ಭಯೋತ್ಪಾದನೆಯೊಂದಿಗೆ ಜೋಡಿಸುವುದು ರಾಜಕೀಯ ತಂತ್ರದ ಹೊರತಾಗಿ ಬೇರೇನೂ ಅಲ್ಲ. ಇದು ವಾಸ್ತವಿಕ ನೀತಿಯಲ್ಲ,” ಎಂದು ಮತ್ತೊಬ್ಬ X ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೆಡ್ಡಿಟ್ ಫೋರಮ್‌ಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ, ಈ ಹೇಳಿಕೆಯ ಕುರಿತು ವ್ಯಂಗ್ಯಭರಿತ ಪೋಸ್ಟ್‌ಗಳು ಮತ್ತು ಮೀಮ್‌ಗಳು ಹರಿದಾಡುತ್ತಿವೆ. ವಿದೇಶಿ ವ್ಯಾಪಾರವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳೊಂದಿಗೆ ಸಮೀಕರಿಸುತ್ತಿರುವ ಬಗ್ಗೆ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಒಬ್ಬ ರೆಡ್ಡಿಟ್ ಬಳಕೆದಾರರು, “ಬಸ್ ಅಬ್ PM ಬನಾ ಹಿ ದೊ” (ಇನ್ನು ಇವರನ್ನು ಪ್ರಧಾನಿ ಮಾಡಿಬಿಡಿ) ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿ, ಈ ಹೇಳಿಕೆಯು ಆರ್ಥಿಕ ತರ್ಕಕ್ಕಿಂತ ಹೆಚ್ಚಾಗಿ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿದೆ ಎಂದು ಸೂಚಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲೇಖಿಸಿ, ಮುಸ್ಲಿಮೇತರರ ಟ್ರಿಬ್ಯೂನಲ್ ಪ್ರಕರಣ ಕೈಬಿಡಲು ಅಸ್ಸಾಂ ಸರಕಾರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...