Homeಮುಖಪುಟಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸಿದೆ ಮತ್ತು ಉತ್ತಮ ಸಂಶೋಧನೆಗಳಿಂದ ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ.

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ವೈವಿಧ್ಯಮಯ ಭಾರತ ಮತ್ತು ಶಕ್ತಿಯುತ ಭಾರತವನ್ನು ಪ್ರತಿನಿಧಿಸುತ್ತದೆ. ಇಡೀ ವಿಶ್ವಕ್ಕೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿರುವ ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಗಣನೀಯ ಕೊಡುಗೆ ಈ ವಿವಿಯ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೊರೊನಾ ಸಮಯದಲ್ಲಿ ಈ ವಿವಿಯ ಸಾವಿರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಉಚಿತ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಡೀ ವಿವಿಯನ್ನು ಐಸೋಲೇಷನ್ ವಾರ್ಡ್‌ಗಳಾಗಿ ಬಳಸಿಕೊಳ್ಳಲಾಯಿತು. ಪ್ಲಾಸ್ಮಾ ದಾನ ಮಾಡುವ ಬ್ಯಾಂಕುಗಳಾಗಿ ಕೆಲಸ ಮಾಡಿದ ಈ ವಿವಿಯು ಪಿಎಂ ಕೇರ್ಸ್‌ ನಿಧಿಗೆ ಹೆಚ್ಚಿನ ಹಣ ನೀಡುವ ಮೂಲಕ ಸಮಾಜದ ಬಗ್ಗೆ ತನಗಿರುವ ಬದ್ಧತೆಯನ್ನು ತೋರಿಸಿದೆ” ಎಂದಿದ್ದಾರೆ.

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸುವಲ್ಲಿ ಅದು ಮಹತ್ತರ ಪಾತ್ರವಹಿಸಿದೆ. ಉರ್ದು, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳ ಬಗೆಗಿನ ಸಂಶೋಧನೆ ಮತ್ತು ಇಸ್ಲಾಮಿಕ್ ಸಾಹಿತ್ಯದ ಕುರಿತಾದ ಸಂಶೋಧನೆಗಳಿಂದ “ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ” ಎಂದು ಮೋದಿ ಹೇಳಿದರು.

ಜಾತಿ ಮತಗಳ ಬೇದವಿಲ್ಲದೆ ದೇಶದ ಎಲ್ಲರ ಒಳಿತಿಗಾಗಿ, ಎಲ್ಲರ ಸಾಂವಿಧಾನಿಕ ಹಕ್ಕುಗಳಿಗಾಗಿ ದೇಶ ಮುನ್ನಡೆಯುತ್ತಿದೆ. ಯಾವ ಸಮುದಾಯವನ್ನು ಹಿಂದೆ ಉಳಿಯಲು ನಾವು ಬಿಡುವುದಿಲ್ಲ ಎಂದು ಮೋದಿ ಘೋಷಿಸಿದ್ದಾರೆ. ಸರ್ಕಾರದ ಯೋಜನೆಗಳು ಯಾವುದೇ ಧಾರ್ಮಿಕ ಬೇಧವಿಲ್ಲದೆ ಎಲ್ಲಾ ವರ್ಗದ ಬಡವರಿಗೆ ದೊರಕುತ್ತಿವೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ದಿಯ ವಿಚಾರಕ್ಕೆ ಬಂದರೆ ನಾವು ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಯಾವು ಸಮುದಾಯದಲ್ಲಿ ಹುಟ್ಟಿದರೂ ಸರಿಯೆ, ನಮ್ಮ ಆಲೋಚನೆಗಳು ರಾಷ್ಟ್ರೀಯ ಗುರಿಗೆ ಪೂರಕವಾಗಿರಬೇಕು. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ ರಾಷ್ಟ್ರದ ಪ್ರಗತಿಯ ವಿಚಾರಕ್ಕೆ ಬಂದರೆ ಅವು ಎರಡನೇ ಸ್ಥಾನಕ್ಕೆ ಹೋಗುತ್ತವೆ. ರಾಷ್ಟ್ರದ ವಿಚಾರದಲ್ಲಿ ಯಾವುದೇ ಸೈದ್ದಾಂತಿಕ ಭಿನ್ನತೆಗೆ ಆಸ್ಪದವಿಲ್ಲ. ಏಕೆಂದರೆ ಎಎಂಯು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆಗಲೂ ಅವರಿಗೆ ಸೈದ್ದಾಂತಿಕ ಭಿನ್ನಾಭಿಪ್ರಾಯವಿದ್ದರೂ ಅವರ ಗುರಿ ಸ್ವಾತಂತ್ರ್ಯವಾಗಿತ್ತು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅವರು ಒಂದಾದಂತೆ ನಾವು ನವ ಭಾರತಕ್ಕಾಗಿ ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ 1887 ರಲ್ಲಿ ಸೈಯದ್ ಅಹ್ಮದ್ ಖಾನ್‌ ಮುಹಮ್ಮಡನ್ ಆಂಗ್ಲೋ ಓರಿಯೆಂಟಲ್ ಕಾಲೇಜ್ ಸ್ಥಾಪಿಸಿದ್ದರು. ನಂತರ 1920ರಲ್ಲಿ ಅದನ್ನು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಯಿತು. 1920ರ ಡಿಸೆಂಬರ್ 17 ರಂದು ಅದನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಮೋದಿಯವರು “ಎಎಂಯು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಭಾರತದ 75ನೇ ಸ್ವಾತಂತ್ರ್ಯ ದಿನದ ವೇಳೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಮುನ್ನೆಲೆಗೆ ತರಬೇಕೆಂದು” ಕರೆ ನಿಡಿದ್ದಾರೆ.

ಈ ಎಂಎಯು ವಿಶ್ವವಿದ್ಯಾಲಯವು ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಅಲ್ಲಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ನಂತರ ಇದೇ ವಿವಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಯುಪಿಯ ಖ್ಯಾತ ವೈದ್ಯ ಡಾ.ಕಫೀಲ್ ಖಾನ್‌ರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಆಧುನಿಕ ಶಿಕ್ಷಣದ ಪ್ರವಾದಿ ಸೈಯದ್ ಅಹ್ಮದ್ ಖಾನ್‌ರನ್ನು ಏಕೆ ನೆನೆಯಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...