Homeಮುಖಪುಟಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸಿದೆ ಮತ್ತು ಉತ್ತಮ ಸಂಶೋಧನೆಗಳಿಂದ ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ.

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ವೈವಿಧ್ಯಮಯ ಭಾರತ ಮತ್ತು ಶಕ್ತಿಯುತ ಭಾರತವನ್ನು ಪ್ರತಿನಿಧಿಸುತ್ತದೆ. ಇಡೀ ವಿಶ್ವಕ್ಕೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿರುವ ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಗಣನೀಯ ಕೊಡುಗೆ ಈ ವಿವಿಯ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೊರೊನಾ ಸಮಯದಲ್ಲಿ ಈ ವಿವಿಯ ಸಾವಿರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಉಚಿತ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಡೀ ವಿವಿಯನ್ನು ಐಸೋಲೇಷನ್ ವಾರ್ಡ್‌ಗಳಾಗಿ ಬಳಸಿಕೊಳ್ಳಲಾಯಿತು. ಪ್ಲಾಸ್ಮಾ ದಾನ ಮಾಡುವ ಬ್ಯಾಂಕುಗಳಾಗಿ ಕೆಲಸ ಮಾಡಿದ ಈ ವಿವಿಯು ಪಿಎಂ ಕೇರ್ಸ್‌ ನಿಧಿಗೆ ಹೆಚ್ಚಿನ ಹಣ ನೀಡುವ ಮೂಲಕ ಸಮಾಜದ ಬಗ್ಗೆ ತನಗಿರುವ ಬದ್ಧತೆಯನ್ನು ತೋರಿಸಿದೆ” ಎಂದಿದ್ದಾರೆ.

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸುವಲ್ಲಿ ಅದು ಮಹತ್ತರ ಪಾತ್ರವಹಿಸಿದೆ. ಉರ್ದು, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳ ಬಗೆಗಿನ ಸಂಶೋಧನೆ ಮತ್ತು ಇಸ್ಲಾಮಿಕ್ ಸಾಹಿತ್ಯದ ಕುರಿತಾದ ಸಂಶೋಧನೆಗಳಿಂದ “ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ” ಎಂದು ಮೋದಿ ಹೇಳಿದರು.

ಜಾತಿ ಮತಗಳ ಬೇದವಿಲ್ಲದೆ ದೇಶದ ಎಲ್ಲರ ಒಳಿತಿಗಾಗಿ, ಎಲ್ಲರ ಸಾಂವಿಧಾನಿಕ ಹಕ್ಕುಗಳಿಗಾಗಿ ದೇಶ ಮುನ್ನಡೆಯುತ್ತಿದೆ. ಯಾವ ಸಮುದಾಯವನ್ನು ಹಿಂದೆ ಉಳಿಯಲು ನಾವು ಬಿಡುವುದಿಲ್ಲ ಎಂದು ಮೋದಿ ಘೋಷಿಸಿದ್ದಾರೆ. ಸರ್ಕಾರದ ಯೋಜನೆಗಳು ಯಾವುದೇ ಧಾರ್ಮಿಕ ಬೇಧವಿಲ್ಲದೆ ಎಲ್ಲಾ ವರ್ಗದ ಬಡವರಿಗೆ ದೊರಕುತ್ತಿವೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ದಿಯ ವಿಚಾರಕ್ಕೆ ಬಂದರೆ ನಾವು ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಯಾವು ಸಮುದಾಯದಲ್ಲಿ ಹುಟ್ಟಿದರೂ ಸರಿಯೆ, ನಮ್ಮ ಆಲೋಚನೆಗಳು ರಾಷ್ಟ್ರೀಯ ಗುರಿಗೆ ಪೂರಕವಾಗಿರಬೇಕು. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ ರಾಷ್ಟ್ರದ ಪ್ರಗತಿಯ ವಿಚಾರಕ್ಕೆ ಬಂದರೆ ಅವು ಎರಡನೇ ಸ್ಥಾನಕ್ಕೆ ಹೋಗುತ್ತವೆ. ರಾಷ್ಟ್ರದ ವಿಚಾರದಲ್ಲಿ ಯಾವುದೇ ಸೈದ್ದಾಂತಿಕ ಭಿನ್ನತೆಗೆ ಆಸ್ಪದವಿಲ್ಲ. ಏಕೆಂದರೆ ಎಎಂಯು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆಗಲೂ ಅವರಿಗೆ ಸೈದ್ದಾಂತಿಕ ಭಿನ್ನಾಭಿಪ್ರಾಯವಿದ್ದರೂ ಅವರ ಗುರಿ ಸ್ವಾತಂತ್ರ್ಯವಾಗಿತ್ತು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅವರು ಒಂದಾದಂತೆ ನಾವು ನವ ಭಾರತಕ್ಕಾಗಿ ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ 1887 ರಲ್ಲಿ ಸೈಯದ್ ಅಹ್ಮದ್ ಖಾನ್‌ ಮುಹಮ್ಮಡನ್ ಆಂಗ್ಲೋ ಓರಿಯೆಂಟಲ್ ಕಾಲೇಜ್ ಸ್ಥಾಪಿಸಿದ್ದರು. ನಂತರ 1920ರಲ್ಲಿ ಅದನ್ನು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಯಿತು. 1920ರ ಡಿಸೆಂಬರ್ 17 ರಂದು ಅದನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಮೋದಿಯವರು “ಎಎಂಯು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಭಾರತದ 75ನೇ ಸ್ವಾತಂತ್ರ್ಯ ದಿನದ ವೇಳೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಮುನ್ನೆಲೆಗೆ ತರಬೇಕೆಂದು” ಕರೆ ನಿಡಿದ್ದಾರೆ.

ಈ ಎಂಎಯು ವಿಶ್ವವಿದ್ಯಾಲಯವು ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಅಲ್ಲಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ನಂತರ ಇದೇ ವಿವಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಯುಪಿಯ ಖ್ಯಾತ ವೈದ್ಯ ಡಾ.ಕಫೀಲ್ ಖಾನ್‌ರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಆಧುನಿಕ ಶಿಕ್ಷಣದ ಪ್ರವಾದಿ ಸೈಯದ್ ಅಹ್ಮದ್ ಖಾನ್‌ರನ್ನು ಏಕೆ ನೆನೆಯಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...