Homeಮುಖಪುಟಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸಿದೆ ಮತ್ತು ಉತ್ತಮ ಸಂಶೋಧನೆಗಳಿಂದ ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ.

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ವೈವಿಧ್ಯಮಯ ಭಾರತ ಮತ್ತು ಶಕ್ತಿಯುತ ಭಾರತವನ್ನು ಪ್ರತಿನಿಧಿಸುತ್ತದೆ. ಇಡೀ ವಿಶ್ವಕ್ಕೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿರುವ ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಗಣನೀಯ ಕೊಡುಗೆ ಈ ವಿವಿಯ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೊರೊನಾ ಸಮಯದಲ್ಲಿ ಈ ವಿವಿಯ ಸಾವಿರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಉಚಿತ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಡೀ ವಿವಿಯನ್ನು ಐಸೋಲೇಷನ್ ವಾರ್ಡ್‌ಗಳಾಗಿ ಬಳಸಿಕೊಳ್ಳಲಾಯಿತು. ಪ್ಲಾಸ್ಮಾ ದಾನ ಮಾಡುವ ಬ್ಯಾಂಕುಗಳಾಗಿ ಕೆಲಸ ಮಾಡಿದ ಈ ವಿವಿಯು ಪಿಎಂ ಕೇರ್ಸ್‌ ನಿಧಿಗೆ ಹೆಚ್ಚಿನ ಹಣ ನೀಡುವ ಮೂಲಕ ಸಮಾಜದ ಬಗ್ಗೆ ತನಗಿರುವ ಬದ್ಧತೆಯನ್ನು ತೋರಿಸಿದೆ” ಎಂದಿದ್ದಾರೆ.

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸುವಲ್ಲಿ ಅದು ಮಹತ್ತರ ಪಾತ್ರವಹಿಸಿದೆ. ಉರ್ದು, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳ ಬಗೆಗಿನ ಸಂಶೋಧನೆ ಮತ್ತು ಇಸ್ಲಾಮಿಕ್ ಸಾಹಿತ್ಯದ ಕುರಿತಾದ ಸಂಶೋಧನೆಗಳಿಂದ “ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ” ಎಂದು ಮೋದಿ ಹೇಳಿದರು.

ಜಾತಿ ಮತಗಳ ಬೇದವಿಲ್ಲದೆ ದೇಶದ ಎಲ್ಲರ ಒಳಿತಿಗಾಗಿ, ಎಲ್ಲರ ಸಾಂವಿಧಾನಿಕ ಹಕ್ಕುಗಳಿಗಾಗಿ ದೇಶ ಮುನ್ನಡೆಯುತ್ತಿದೆ. ಯಾವ ಸಮುದಾಯವನ್ನು ಹಿಂದೆ ಉಳಿಯಲು ನಾವು ಬಿಡುವುದಿಲ್ಲ ಎಂದು ಮೋದಿ ಘೋಷಿಸಿದ್ದಾರೆ. ಸರ್ಕಾರದ ಯೋಜನೆಗಳು ಯಾವುದೇ ಧಾರ್ಮಿಕ ಬೇಧವಿಲ್ಲದೆ ಎಲ್ಲಾ ವರ್ಗದ ಬಡವರಿಗೆ ದೊರಕುತ್ತಿವೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ದಿಯ ವಿಚಾರಕ್ಕೆ ಬಂದರೆ ನಾವು ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಯಾವು ಸಮುದಾಯದಲ್ಲಿ ಹುಟ್ಟಿದರೂ ಸರಿಯೆ, ನಮ್ಮ ಆಲೋಚನೆಗಳು ರಾಷ್ಟ್ರೀಯ ಗುರಿಗೆ ಪೂರಕವಾಗಿರಬೇಕು. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ ರಾಷ್ಟ್ರದ ಪ್ರಗತಿಯ ವಿಚಾರಕ್ಕೆ ಬಂದರೆ ಅವು ಎರಡನೇ ಸ್ಥಾನಕ್ಕೆ ಹೋಗುತ್ತವೆ. ರಾಷ್ಟ್ರದ ವಿಚಾರದಲ್ಲಿ ಯಾವುದೇ ಸೈದ್ದಾಂತಿಕ ಭಿನ್ನತೆಗೆ ಆಸ್ಪದವಿಲ್ಲ. ಏಕೆಂದರೆ ಎಎಂಯು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆಗಲೂ ಅವರಿಗೆ ಸೈದ್ದಾಂತಿಕ ಭಿನ್ನಾಭಿಪ್ರಾಯವಿದ್ದರೂ ಅವರ ಗುರಿ ಸ್ವಾತಂತ್ರ್ಯವಾಗಿತ್ತು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅವರು ಒಂದಾದಂತೆ ನಾವು ನವ ಭಾರತಕ್ಕಾಗಿ ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ 1887 ರಲ್ಲಿ ಸೈಯದ್ ಅಹ್ಮದ್ ಖಾನ್‌ ಮುಹಮ್ಮಡನ್ ಆಂಗ್ಲೋ ಓರಿಯೆಂಟಲ್ ಕಾಲೇಜ್ ಸ್ಥಾಪಿಸಿದ್ದರು. ನಂತರ 1920ರಲ್ಲಿ ಅದನ್ನು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಯಿತು. 1920ರ ಡಿಸೆಂಬರ್ 17 ರಂದು ಅದನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಮೋದಿಯವರು “ಎಎಂಯು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಭಾರತದ 75ನೇ ಸ್ವಾತಂತ್ರ್ಯ ದಿನದ ವೇಳೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಮುನ್ನೆಲೆಗೆ ತರಬೇಕೆಂದು” ಕರೆ ನಿಡಿದ್ದಾರೆ.

ಈ ಎಂಎಯು ವಿಶ್ವವಿದ್ಯಾಲಯವು ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಅಲ್ಲಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ನಂತರ ಇದೇ ವಿವಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಯುಪಿಯ ಖ್ಯಾತ ವೈದ್ಯ ಡಾ.ಕಫೀಲ್ ಖಾನ್‌ರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಆಧುನಿಕ ಶಿಕ್ಷಣದ ಪ್ರವಾದಿ ಸೈಯದ್ ಅಹ್ಮದ್ ಖಾನ್‌ರನ್ನು ಏಕೆ ನೆನೆಯಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...