Homeಮುಖಪುಟಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸಿದೆ ಮತ್ತು ಉತ್ತಮ ಸಂಶೋಧನೆಗಳಿಂದ ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ.

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ವೈವಿಧ್ಯಮಯ ಭಾರತ ಮತ್ತು ಶಕ್ತಿಯುತ ಭಾರತವನ್ನು ಪ್ರತಿನಿಧಿಸುತ್ತದೆ. ಇಡೀ ವಿಶ್ವಕ್ಕೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿರುವ ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಗಣನೀಯ ಕೊಡುಗೆ ಈ ವಿವಿಯ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೊರೊನಾ ಸಮಯದಲ್ಲಿ ಈ ವಿವಿಯ ಸಾವಿರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಉಚಿತ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಡೀ ವಿವಿಯನ್ನು ಐಸೋಲೇಷನ್ ವಾರ್ಡ್‌ಗಳಾಗಿ ಬಳಸಿಕೊಳ್ಳಲಾಯಿತು. ಪ್ಲಾಸ್ಮಾ ದಾನ ಮಾಡುವ ಬ್ಯಾಂಕುಗಳಾಗಿ ಕೆಲಸ ಮಾಡಿದ ಈ ವಿವಿಯು ಪಿಎಂ ಕೇರ್ಸ್‌ ನಿಧಿಗೆ ಹೆಚ್ಚಿನ ಹಣ ನೀಡುವ ಮೂಲಕ ಸಮಾಜದ ಬಗ್ಗೆ ತನಗಿರುವ ಬದ್ಧತೆಯನ್ನು ತೋರಿಸಿದೆ” ಎಂದಿದ್ದಾರೆ.

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸುವಲ್ಲಿ ಅದು ಮಹತ್ತರ ಪಾತ್ರವಹಿಸಿದೆ. ಉರ್ದು, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳ ಬಗೆಗಿನ ಸಂಶೋಧನೆ ಮತ್ತು ಇಸ್ಲಾಮಿಕ್ ಸಾಹಿತ್ಯದ ಕುರಿತಾದ ಸಂಶೋಧನೆಗಳಿಂದ “ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ” ಎಂದು ಮೋದಿ ಹೇಳಿದರು.

ಜಾತಿ ಮತಗಳ ಬೇದವಿಲ್ಲದೆ ದೇಶದ ಎಲ್ಲರ ಒಳಿತಿಗಾಗಿ, ಎಲ್ಲರ ಸಾಂವಿಧಾನಿಕ ಹಕ್ಕುಗಳಿಗಾಗಿ ದೇಶ ಮುನ್ನಡೆಯುತ್ತಿದೆ. ಯಾವ ಸಮುದಾಯವನ್ನು ಹಿಂದೆ ಉಳಿಯಲು ನಾವು ಬಿಡುವುದಿಲ್ಲ ಎಂದು ಮೋದಿ ಘೋಷಿಸಿದ್ದಾರೆ. ಸರ್ಕಾರದ ಯೋಜನೆಗಳು ಯಾವುದೇ ಧಾರ್ಮಿಕ ಬೇಧವಿಲ್ಲದೆ ಎಲ್ಲಾ ವರ್ಗದ ಬಡವರಿಗೆ ದೊರಕುತ್ತಿವೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ದಿಯ ವಿಚಾರಕ್ಕೆ ಬಂದರೆ ನಾವು ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಯಾವು ಸಮುದಾಯದಲ್ಲಿ ಹುಟ್ಟಿದರೂ ಸರಿಯೆ, ನಮ್ಮ ಆಲೋಚನೆಗಳು ರಾಷ್ಟ್ರೀಯ ಗುರಿಗೆ ಪೂರಕವಾಗಿರಬೇಕು. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ ರಾಷ್ಟ್ರದ ಪ್ರಗತಿಯ ವಿಚಾರಕ್ಕೆ ಬಂದರೆ ಅವು ಎರಡನೇ ಸ್ಥಾನಕ್ಕೆ ಹೋಗುತ್ತವೆ. ರಾಷ್ಟ್ರದ ವಿಚಾರದಲ್ಲಿ ಯಾವುದೇ ಸೈದ್ದಾಂತಿಕ ಭಿನ್ನತೆಗೆ ಆಸ್ಪದವಿಲ್ಲ. ಏಕೆಂದರೆ ಎಎಂಯು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆಗಲೂ ಅವರಿಗೆ ಸೈದ್ದಾಂತಿಕ ಭಿನ್ನಾಭಿಪ್ರಾಯವಿದ್ದರೂ ಅವರ ಗುರಿ ಸ್ವಾತಂತ್ರ್ಯವಾಗಿತ್ತು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅವರು ಒಂದಾದಂತೆ ನಾವು ನವ ಭಾರತಕ್ಕಾಗಿ ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ 1887 ರಲ್ಲಿ ಸೈಯದ್ ಅಹ್ಮದ್ ಖಾನ್‌ ಮುಹಮ್ಮಡನ್ ಆಂಗ್ಲೋ ಓರಿಯೆಂಟಲ್ ಕಾಲೇಜ್ ಸ್ಥಾಪಿಸಿದ್ದರು. ನಂತರ 1920ರಲ್ಲಿ ಅದನ್ನು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಯಿತು. 1920ರ ಡಿಸೆಂಬರ್ 17 ರಂದು ಅದನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಮೋದಿಯವರು “ಎಎಂಯು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಭಾರತದ 75ನೇ ಸ್ವಾತಂತ್ರ್ಯ ದಿನದ ವೇಳೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಮುನ್ನೆಲೆಗೆ ತರಬೇಕೆಂದು” ಕರೆ ನಿಡಿದ್ದಾರೆ.

ಈ ಎಂಎಯು ವಿಶ್ವವಿದ್ಯಾಲಯವು ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಅಲ್ಲಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ನಂತರ ಇದೇ ವಿವಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಯುಪಿಯ ಖ್ಯಾತ ವೈದ್ಯ ಡಾ.ಕಫೀಲ್ ಖಾನ್‌ರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಆಧುನಿಕ ಶಿಕ್ಷಣದ ಪ್ರವಾದಿ ಸೈಯದ್ ಅಹ್ಮದ್ ಖಾನ್‌ರನ್ನು ಏಕೆ ನೆನೆಯಬೇಕು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...