Homeಮುಖಪುಟಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸಿದೆ ಮತ್ತು ಉತ್ತಮ ಸಂಶೋಧನೆಗಳಿಂದ ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ.

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ವೈವಿಧ್ಯಮಯ ಭಾರತ ಮತ್ತು ಶಕ್ತಿಯುತ ಭಾರತವನ್ನು ಪ್ರತಿನಿಧಿಸುತ್ತದೆ. ಇಡೀ ವಿಶ್ವಕ್ಕೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿರುವ ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಗಣನೀಯ ಕೊಡುಗೆ ಈ ವಿವಿಯ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೊರೊನಾ ಸಮಯದಲ್ಲಿ ಈ ವಿವಿಯ ಸಾವಿರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಉಚಿತ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಡೀ ವಿವಿಯನ್ನು ಐಸೋಲೇಷನ್ ವಾರ್ಡ್‌ಗಳಾಗಿ ಬಳಸಿಕೊಳ್ಳಲಾಯಿತು. ಪ್ಲಾಸ್ಮಾ ದಾನ ಮಾಡುವ ಬ್ಯಾಂಕುಗಳಾಗಿ ಕೆಲಸ ಮಾಡಿದ ಈ ವಿವಿಯು ಪಿಎಂ ಕೇರ್ಸ್‌ ನಿಧಿಗೆ ಹೆಚ್ಚಿನ ಹಣ ನೀಡುವ ಮೂಲಕ ಸಮಾಜದ ಬಗ್ಗೆ ತನಗಿರುವ ಬದ್ಧತೆಯನ್ನು ತೋರಿಸಿದೆ” ಎಂದಿದ್ದಾರೆ.

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸುವಲ್ಲಿ ಅದು ಮಹತ್ತರ ಪಾತ್ರವಹಿಸಿದೆ. ಉರ್ದು, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳ ಬಗೆಗಿನ ಸಂಶೋಧನೆ ಮತ್ತು ಇಸ್ಲಾಮಿಕ್ ಸಾಹಿತ್ಯದ ಕುರಿತಾದ ಸಂಶೋಧನೆಗಳಿಂದ “ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ” ಎಂದು ಮೋದಿ ಹೇಳಿದರು.

ಜಾತಿ ಮತಗಳ ಬೇದವಿಲ್ಲದೆ ದೇಶದ ಎಲ್ಲರ ಒಳಿತಿಗಾಗಿ, ಎಲ್ಲರ ಸಾಂವಿಧಾನಿಕ ಹಕ್ಕುಗಳಿಗಾಗಿ ದೇಶ ಮುನ್ನಡೆಯುತ್ತಿದೆ. ಯಾವ ಸಮುದಾಯವನ್ನು ಹಿಂದೆ ಉಳಿಯಲು ನಾವು ಬಿಡುವುದಿಲ್ಲ ಎಂದು ಮೋದಿ ಘೋಷಿಸಿದ್ದಾರೆ. ಸರ್ಕಾರದ ಯೋಜನೆಗಳು ಯಾವುದೇ ಧಾರ್ಮಿಕ ಬೇಧವಿಲ್ಲದೆ ಎಲ್ಲಾ ವರ್ಗದ ಬಡವರಿಗೆ ದೊರಕುತ್ತಿವೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ದಿಯ ವಿಚಾರಕ್ಕೆ ಬಂದರೆ ನಾವು ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಯಾವು ಸಮುದಾಯದಲ್ಲಿ ಹುಟ್ಟಿದರೂ ಸರಿಯೆ, ನಮ್ಮ ಆಲೋಚನೆಗಳು ರಾಷ್ಟ್ರೀಯ ಗುರಿಗೆ ಪೂರಕವಾಗಿರಬೇಕು. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ ರಾಷ್ಟ್ರದ ಪ್ರಗತಿಯ ವಿಚಾರಕ್ಕೆ ಬಂದರೆ ಅವು ಎರಡನೇ ಸ್ಥಾನಕ್ಕೆ ಹೋಗುತ್ತವೆ. ರಾಷ್ಟ್ರದ ವಿಚಾರದಲ್ಲಿ ಯಾವುದೇ ಸೈದ್ದಾಂತಿಕ ಭಿನ್ನತೆಗೆ ಆಸ್ಪದವಿಲ್ಲ. ಏಕೆಂದರೆ ಎಎಂಯು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆಗಲೂ ಅವರಿಗೆ ಸೈದ್ದಾಂತಿಕ ಭಿನ್ನಾಭಿಪ್ರಾಯವಿದ್ದರೂ ಅವರ ಗುರಿ ಸ್ವಾತಂತ್ರ್ಯವಾಗಿತ್ತು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅವರು ಒಂದಾದಂತೆ ನಾವು ನವ ಭಾರತಕ್ಕಾಗಿ ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ 1887 ರಲ್ಲಿ ಸೈಯದ್ ಅಹ್ಮದ್ ಖಾನ್‌ ಮುಹಮ್ಮಡನ್ ಆಂಗ್ಲೋ ಓರಿಯೆಂಟಲ್ ಕಾಲೇಜ್ ಸ್ಥಾಪಿಸಿದ್ದರು. ನಂತರ 1920ರಲ್ಲಿ ಅದನ್ನು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಯಿತು. 1920ರ ಡಿಸೆಂಬರ್ 17 ರಂದು ಅದನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಮೋದಿಯವರು “ಎಎಂಯು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಭಾರತದ 75ನೇ ಸ್ವಾತಂತ್ರ್ಯ ದಿನದ ವೇಳೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಮುನ್ನೆಲೆಗೆ ತರಬೇಕೆಂದು” ಕರೆ ನಿಡಿದ್ದಾರೆ.

ಈ ಎಂಎಯು ವಿಶ್ವವಿದ್ಯಾಲಯವು ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಅಲ್ಲಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ನಂತರ ಇದೇ ವಿವಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಯುಪಿಯ ಖ್ಯಾತ ವೈದ್ಯ ಡಾ.ಕಫೀಲ್ ಖಾನ್‌ರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಆಧುನಿಕ ಶಿಕ್ಷಣದ ಪ್ರವಾದಿ ಸೈಯದ್ ಅಹ್ಮದ್ ಖಾನ್‌ರನ್ನು ಏಕೆ ನೆನೆಯಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...