Homeಮುಖಪುಟಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ...

ಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ…

- Advertisement -
- Advertisement -

ಸಂಘವು ಭಾರತದ 130 ಕೋಟಿ ಜನರನ್ನು ಅವರ ಧರ್ಮ ಮತ್ತು ಸಂಸ್ಕೃತಿಯನ್ನು ಲೆಕ್ಕಿಸದೆ ಹಿಂದೂ ಸಮಾಜವೆಂದು ಪರಿಗಣಿಸುತ್ತದೆ ಎಂದಿರುವ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಬಿಜೆಪಿ ಮಿತ್ರಪಕ್ಷ ಆರ್‌ಪಿಐನ ರಾಮದಾಸ್‌ ಅಠಾವಳೆ ಖಂಡಿಸಿದ್ದಾರೆ.

“ಎಲ್ಲಾ ಭಾರತೀಯರು ಹಿಂದೂಗಳು ಎಂದು ಹೇಳುವುದು ಸರಿಯಲ್ಲ. ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದ ಕಾಲವೊಂದಿತ್ತು. ಮೋಹನ್ ಭಾಗವತ್‌ರವರು ಎಲ್ಲರೂ ಭಾರತೀಯರು ಎಂದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧ, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಲಿಂಗಾಯತ ಮುಂತಾದ ನಂಬಿಕೆಗಳುಳ್ಳ ವಿವಿಧ ಸಮುದಾಯಗಳು ಇಲ್ಲಿ ವಾಸಿಸುತ್ತಿವೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರರಾದ ರಾಮದಾಸ್ ಅಠಾವಳೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಯ ಬಣಕ್ಕೆ ರಾಮದಾಸ್ ಅಠಾವಳೆ ಮುಖ್ಯಸ್ಥರಾಗಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೈದರಾಬಾದ್‌ನಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಮಾತನಾಡುತ್ತಾ “ಭಾರತಾಂಬೆಯ ಮಗ, ಅವನು ಯಾವುದೇ ಭಾಷೆ ಮಾತನಾಡಲಿ, ಯಾವುದೇ ಪ್ರದೇಶದಿಂದ ಬಂದಿರಲಿ, ಯಾವುದೇ ರೀತಿಯ ಪೂಜೆಯನ್ನು ಅನುಸರಿಸಲಿ ಅಥವಾ ಯಾವುದೇ ಪೂಜೆಯನ್ನು ನಂಬದಿರಲಿ, ಆತ ಹಿಂದೂ ಆಗಿರುತ್ತಾನೆ… ಈ ನಿಟ್ಟಿನಲ್ಲಿ ಸಂಘದ ಪ್ರಕಾರ ಭಾರತದ ಎಲ್ಲಾ 130 ಕೋಟಿ ಜನರು ಹಿಂದೂ ಸಮಾಜದವರು” ಎಂದು ಅವರು ಹೇಳಿದ್ದರು.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ ಮುಖ್ಯಸ್ಥರ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಎಸ್‌ಪಿಯ ಮಾಯಾವತಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಕೂಡ ಖಂಡಿಸಿದ್ದಾರೆ. “ಭಾರತವು ಕೇವಲ ಒಂದು ಧರ್ಮವನ್ನು ಹೊಂದಿರಬೇಕು ಎಂದು ಆರ್‌ಎಸ್ಎಸ್ ಬಯಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವು ಅಸ್ತಿತ್ವದಲ್ಲಿರುವವರೆಗೂ ಅದು ಆಗುವುದಿಲ್ಲ. ಈ ಭರತ ಭೂಮಿ ಎಲ್ಲಾ ಧರ್ಮಗಳನ್ನು ನಂಬುತ್ತದೆ” ಎಂದು ಓವೈಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆರೆಸ್ಸೆಸ್ಸಿನ ಚೀಫ್ ಗೆಸ್ಟ್ ಮೋಹನ್ ಭಗವತ್ ರವರು ದೇಶವನ್ನು ಮುನ್ನಡೆಸುವ ಕಾರ್ಯತಂತ್ರ ನರೇಂದ್ರ ಮೋದಿಯವರ ಅಥವಾ ಮೋಹನ್ ಭಗವತ್ ರವರ ದ ಜನಸಾಮಾನ್ಯರು ಅರ್ಥಮಾಡಿಕೊಳ್ಳುವುದೇ ಕಷ್ಟಕರವಾಗಿದೆ

    ಮೋದಿ ಪ್ರಧಾನಮಂತ್ರಿಯಾಗಲು ಪ್ರಣಾಳಿಕೆಗಳು ಹೇಳಿದ್ದೇ ಬೇರೆ
    ಮೇಕ್ ಇನ್ ಇಂಡಿಯಾ ಸ್ವಚ್ಛ ಭಾರತ ಭ್ರಷ್ಟಾಚಾರ ಮುಕ್ತ ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡುವವರಿಗೆ ಕಠಿಣ ಕ್ರಮ ಉದ್ಯೋಗ ವ್ಯವಸ್ಥೆ ರೂಪಿಸುವುದಾಗಿ ಹೇಳಿ ಇದನ್ನೆಲ್ಲ ಸಂಪೂರ್ಣ ಮರೆತು

    ಮೋಹನ್ ಭಗವತರ ಕೈಗೊಂಬೆಯಾಗಿ ಹಿಂದುತ್ವವನ್ನು
    ಜನಸಾಮಾನ್ಯರ ಎಲ್ಲರ ಮೇಲೆ ನಿರಂತರವಾಗಿ ಹಿಂಸಾಚಾರ ಕೋಮುಗಲಭೆಗಳಿಗೆ ಕರೆ ಕೊಡುತ್ತಿರುವ ಕೆಲಸಗಳನ್ನು ಮಾಡುತ್ತಿದ್ದಾರೆ

    ವಲಸೆ ಬಂದಿರುವ ಆರ್ಯರ ಮಾತುಗಳ ಮುಂದೆ ಪ್ರಾಮಾಣಿಕ ನಿಂದಿಸಿರುವ ಮೋದಿಯನ್ನು ಜನಸಾಮಾನ್ಯರು ನಂಬಿ ಓಟು ಕೊಟ್ಟಿದ್ದ ತಪ್ಪಿಗೆ ಅನುಭವಿಸಲೇಬೇಕು ಆರೆಸಸ್ ಸನಾತನ ಸಂಸ್ಥೆಗೆ ಮಾರಾಟ ವಾಗಿದ್ದಾರೆ ಎಂದೆನಿಸುತ್ತದೆ
    ನರೇಂದ್ರ ಮೋದಿಯವರು

    ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಅಧಿಕಾರಿ ಮಾಡುತ್ತಿರುವವರು ಎಂದರೆ ತಪ್ಪಾಗಲಾರದು ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...