Homeಮುಖಪುಟಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ...

ಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ…

- Advertisement -
- Advertisement -

ಸಂಘವು ಭಾರತದ 130 ಕೋಟಿ ಜನರನ್ನು ಅವರ ಧರ್ಮ ಮತ್ತು ಸಂಸ್ಕೃತಿಯನ್ನು ಲೆಕ್ಕಿಸದೆ ಹಿಂದೂ ಸಮಾಜವೆಂದು ಪರಿಗಣಿಸುತ್ತದೆ ಎಂದಿರುವ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಬಿಜೆಪಿ ಮಿತ್ರಪಕ್ಷ ಆರ್‌ಪಿಐನ ರಾಮದಾಸ್‌ ಅಠಾವಳೆ ಖಂಡಿಸಿದ್ದಾರೆ.

“ಎಲ್ಲಾ ಭಾರತೀಯರು ಹಿಂದೂಗಳು ಎಂದು ಹೇಳುವುದು ಸರಿಯಲ್ಲ. ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದ ಕಾಲವೊಂದಿತ್ತು. ಮೋಹನ್ ಭಾಗವತ್‌ರವರು ಎಲ್ಲರೂ ಭಾರತೀಯರು ಎಂದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧ, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಲಿಂಗಾಯತ ಮುಂತಾದ ನಂಬಿಕೆಗಳುಳ್ಳ ವಿವಿಧ ಸಮುದಾಯಗಳು ಇಲ್ಲಿ ವಾಸಿಸುತ್ತಿವೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರರಾದ ರಾಮದಾಸ್ ಅಠಾವಳೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಯ ಬಣಕ್ಕೆ ರಾಮದಾಸ್ ಅಠಾವಳೆ ಮುಖ್ಯಸ್ಥರಾಗಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೈದರಾಬಾದ್‌ನಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಮಾತನಾಡುತ್ತಾ “ಭಾರತಾಂಬೆಯ ಮಗ, ಅವನು ಯಾವುದೇ ಭಾಷೆ ಮಾತನಾಡಲಿ, ಯಾವುದೇ ಪ್ರದೇಶದಿಂದ ಬಂದಿರಲಿ, ಯಾವುದೇ ರೀತಿಯ ಪೂಜೆಯನ್ನು ಅನುಸರಿಸಲಿ ಅಥವಾ ಯಾವುದೇ ಪೂಜೆಯನ್ನು ನಂಬದಿರಲಿ, ಆತ ಹಿಂದೂ ಆಗಿರುತ್ತಾನೆ… ಈ ನಿಟ್ಟಿನಲ್ಲಿ ಸಂಘದ ಪ್ರಕಾರ ಭಾರತದ ಎಲ್ಲಾ 130 ಕೋಟಿ ಜನರು ಹಿಂದೂ ಸಮಾಜದವರು” ಎಂದು ಅವರು ಹೇಳಿದ್ದರು.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ ಮುಖ್ಯಸ್ಥರ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಎಸ್‌ಪಿಯ ಮಾಯಾವತಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಕೂಡ ಖಂಡಿಸಿದ್ದಾರೆ. “ಭಾರತವು ಕೇವಲ ಒಂದು ಧರ್ಮವನ್ನು ಹೊಂದಿರಬೇಕು ಎಂದು ಆರ್‌ಎಸ್ಎಸ್ ಬಯಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವು ಅಸ್ತಿತ್ವದಲ್ಲಿರುವವರೆಗೂ ಅದು ಆಗುವುದಿಲ್ಲ. ಈ ಭರತ ಭೂಮಿ ಎಲ್ಲಾ ಧರ್ಮಗಳನ್ನು ನಂಬುತ್ತದೆ” ಎಂದು ಓವೈಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆರೆಸ್ಸೆಸ್ಸಿನ ಚೀಫ್ ಗೆಸ್ಟ್ ಮೋಹನ್ ಭಗವತ್ ರವರು ದೇಶವನ್ನು ಮುನ್ನಡೆಸುವ ಕಾರ್ಯತಂತ್ರ ನರೇಂದ್ರ ಮೋದಿಯವರ ಅಥವಾ ಮೋಹನ್ ಭಗವತ್ ರವರ ದ ಜನಸಾಮಾನ್ಯರು ಅರ್ಥಮಾಡಿಕೊಳ್ಳುವುದೇ ಕಷ್ಟಕರವಾಗಿದೆ

    ಮೋದಿ ಪ್ರಧಾನಮಂತ್ರಿಯಾಗಲು ಪ್ರಣಾಳಿಕೆಗಳು ಹೇಳಿದ್ದೇ ಬೇರೆ
    ಮೇಕ್ ಇನ್ ಇಂಡಿಯಾ ಸ್ವಚ್ಛ ಭಾರತ ಭ್ರಷ್ಟಾಚಾರ ಮುಕ್ತ ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡುವವರಿಗೆ ಕಠಿಣ ಕ್ರಮ ಉದ್ಯೋಗ ವ್ಯವಸ್ಥೆ ರೂಪಿಸುವುದಾಗಿ ಹೇಳಿ ಇದನ್ನೆಲ್ಲ ಸಂಪೂರ್ಣ ಮರೆತು

    ಮೋಹನ್ ಭಗವತರ ಕೈಗೊಂಬೆಯಾಗಿ ಹಿಂದುತ್ವವನ್ನು
    ಜನಸಾಮಾನ್ಯರ ಎಲ್ಲರ ಮೇಲೆ ನಿರಂತರವಾಗಿ ಹಿಂಸಾಚಾರ ಕೋಮುಗಲಭೆಗಳಿಗೆ ಕರೆ ಕೊಡುತ್ತಿರುವ ಕೆಲಸಗಳನ್ನು ಮಾಡುತ್ತಿದ್ದಾರೆ

    ವಲಸೆ ಬಂದಿರುವ ಆರ್ಯರ ಮಾತುಗಳ ಮುಂದೆ ಪ್ರಾಮಾಣಿಕ ನಿಂದಿಸಿರುವ ಮೋದಿಯನ್ನು ಜನಸಾಮಾನ್ಯರು ನಂಬಿ ಓಟು ಕೊಟ್ಟಿದ್ದ ತಪ್ಪಿಗೆ ಅನುಭವಿಸಲೇಬೇಕು ಆರೆಸಸ್ ಸನಾತನ ಸಂಸ್ಥೆಗೆ ಮಾರಾಟ ವಾಗಿದ್ದಾರೆ ಎಂದೆನಿಸುತ್ತದೆ
    ನರೇಂದ್ರ ಮೋದಿಯವರು

    ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಅಧಿಕಾರಿ ಮಾಡುತ್ತಿರುವವರು ಎಂದರೆ ತಪ್ಪಾಗಲಾರದು ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...