Homeಮುಖಪುಟಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ...

ಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ…

- Advertisement -
- Advertisement -

ಸಂಘವು ಭಾರತದ 130 ಕೋಟಿ ಜನರನ್ನು ಅವರ ಧರ್ಮ ಮತ್ತು ಸಂಸ್ಕೃತಿಯನ್ನು ಲೆಕ್ಕಿಸದೆ ಹಿಂದೂ ಸಮಾಜವೆಂದು ಪರಿಗಣಿಸುತ್ತದೆ ಎಂದಿರುವ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಬಿಜೆಪಿ ಮಿತ್ರಪಕ್ಷ ಆರ್‌ಪಿಐನ ರಾಮದಾಸ್‌ ಅಠಾವಳೆ ಖಂಡಿಸಿದ್ದಾರೆ.

“ಎಲ್ಲಾ ಭಾರತೀಯರು ಹಿಂದೂಗಳು ಎಂದು ಹೇಳುವುದು ಸರಿಯಲ್ಲ. ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದ ಕಾಲವೊಂದಿತ್ತು. ಮೋಹನ್ ಭಾಗವತ್‌ರವರು ಎಲ್ಲರೂ ಭಾರತೀಯರು ಎಂದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧ, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಲಿಂಗಾಯತ ಮುಂತಾದ ನಂಬಿಕೆಗಳುಳ್ಳ ವಿವಿಧ ಸಮುದಾಯಗಳು ಇಲ್ಲಿ ವಾಸಿಸುತ್ತಿವೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರರಾದ ರಾಮದಾಸ್ ಅಠಾವಳೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಯ ಬಣಕ್ಕೆ ರಾಮದಾಸ್ ಅಠಾವಳೆ ಮುಖ್ಯಸ್ಥರಾಗಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೈದರಾಬಾದ್‌ನಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಮಾತನಾಡುತ್ತಾ “ಭಾರತಾಂಬೆಯ ಮಗ, ಅವನು ಯಾವುದೇ ಭಾಷೆ ಮಾತನಾಡಲಿ, ಯಾವುದೇ ಪ್ರದೇಶದಿಂದ ಬಂದಿರಲಿ, ಯಾವುದೇ ರೀತಿಯ ಪೂಜೆಯನ್ನು ಅನುಸರಿಸಲಿ ಅಥವಾ ಯಾವುದೇ ಪೂಜೆಯನ್ನು ನಂಬದಿರಲಿ, ಆತ ಹಿಂದೂ ಆಗಿರುತ್ತಾನೆ… ಈ ನಿಟ್ಟಿನಲ್ಲಿ ಸಂಘದ ಪ್ರಕಾರ ಭಾರತದ ಎಲ್ಲಾ 130 ಕೋಟಿ ಜನರು ಹಿಂದೂ ಸಮಾಜದವರು” ಎಂದು ಅವರು ಹೇಳಿದ್ದರು.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ ಮುಖ್ಯಸ್ಥರ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಎಸ್‌ಪಿಯ ಮಾಯಾವತಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಕೂಡ ಖಂಡಿಸಿದ್ದಾರೆ. “ಭಾರತವು ಕೇವಲ ಒಂದು ಧರ್ಮವನ್ನು ಹೊಂದಿರಬೇಕು ಎಂದು ಆರ್‌ಎಸ್ಎಸ್ ಬಯಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವು ಅಸ್ತಿತ್ವದಲ್ಲಿರುವವರೆಗೂ ಅದು ಆಗುವುದಿಲ್ಲ. ಈ ಭರತ ಭೂಮಿ ಎಲ್ಲಾ ಧರ್ಮಗಳನ್ನು ನಂಬುತ್ತದೆ” ಎಂದು ಓವೈಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆರೆಸ್ಸೆಸ್ಸಿನ ಚೀಫ್ ಗೆಸ್ಟ್ ಮೋಹನ್ ಭಗವತ್ ರವರು ದೇಶವನ್ನು ಮುನ್ನಡೆಸುವ ಕಾರ್ಯತಂತ್ರ ನರೇಂದ್ರ ಮೋದಿಯವರ ಅಥವಾ ಮೋಹನ್ ಭಗವತ್ ರವರ ದ ಜನಸಾಮಾನ್ಯರು ಅರ್ಥಮಾಡಿಕೊಳ್ಳುವುದೇ ಕಷ್ಟಕರವಾಗಿದೆ

    ಮೋದಿ ಪ್ರಧಾನಮಂತ್ರಿಯಾಗಲು ಪ್ರಣಾಳಿಕೆಗಳು ಹೇಳಿದ್ದೇ ಬೇರೆ
    ಮೇಕ್ ಇನ್ ಇಂಡಿಯಾ ಸ್ವಚ್ಛ ಭಾರತ ಭ್ರಷ್ಟಾಚಾರ ಮುಕ್ತ ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡುವವರಿಗೆ ಕಠಿಣ ಕ್ರಮ ಉದ್ಯೋಗ ವ್ಯವಸ್ಥೆ ರೂಪಿಸುವುದಾಗಿ ಹೇಳಿ ಇದನ್ನೆಲ್ಲ ಸಂಪೂರ್ಣ ಮರೆತು

    ಮೋಹನ್ ಭಗವತರ ಕೈಗೊಂಬೆಯಾಗಿ ಹಿಂದುತ್ವವನ್ನು
    ಜನಸಾಮಾನ್ಯರ ಎಲ್ಲರ ಮೇಲೆ ನಿರಂತರವಾಗಿ ಹಿಂಸಾಚಾರ ಕೋಮುಗಲಭೆಗಳಿಗೆ ಕರೆ ಕೊಡುತ್ತಿರುವ ಕೆಲಸಗಳನ್ನು ಮಾಡುತ್ತಿದ್ದಾರೆ

    ವಲಸೆ ಬಂದಿರುವ ಆರ್ಯರ ಮಾತುಗಳ ಮುಂದೆ ಪ್ರಾಮಾಣಿಕ ನಿಂದಿಸಿರುವ ಮೋದಿಯನ್ನು ಜನಸಾಮಾನ್ಯರು ನಂಬಿ ಓಟು ಕೊಟ್ಟಿದ್ದ ತಪ್ಪಿಗೆ ಅನುಭವಿಸಲೇಬೇಕು ಆರೆಸಸ್ ಸನಾತನ ಸಂಸ್ಥೆಗೆ ಮಾರಾಟ ವಾಗಿದ್ದಾರೆ ಎಂದೆನಿಸುತ್ತದೆ
    ನರೇಂದ್ರ ಮೋದಿಯವರು

    ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಅಧಿಕಾರಿ ಮಾಡುತ್ತಿರುವವರು ಎಂದರೆ ತಪ್ಪಾಗಲಾರದು ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...