Homeಮುಖಪುಟಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ...

ಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ…

- Advertisement -
- Advertisement -

ಸಂಘವು ಭಾರತದ 130 ಕೋಟಿ ಜನರನ್ನು ಅವರ ಧರ್ಮ ಮತ್ತು ಸಂಸ್ಕೃತಿಯನ್ನು ಲೆಕ್ಕಿಸದೆ ಹಿಂದೂ ಸಮಾಜವೆಂದು ಪರಿಗಣಿಸುತ್ತದೆ ಎಂದಿರುವ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಬಿಜೆಪಿ ಮಿತ್ರಪಕ್ಷ ಆರ್‌ಪಿಐನ ರಾಮದಾಸ್‌ ಅಠಾವಳೆ ಖಂಡಿಸಿದ್ದಾರೆ.

“ಎಲ್ಲಾ ಭಾರತೀಯರು ಹಿಂದೂಗಳು ಎಂದು ಹೇಳುವುದು ಸರಿಯಲ್ಲ. ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದ ಕಾಲವೊಂದಿತ್ತು. ಮೋಹನ್ ಭಾಗವತ್‌ರವರು ಎಲ್ಲರೂ ಭಾರತೀಯರು ಎಂದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧ, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಲಿಂಗಾಯತ ಮುಂತಾದ ನಂಬಿಕೆಗಳುಳ್ಳ ವಿವಿಧ ಸಮುದಾಯಗಳು ಇಲ್ಲಿ ವಾಸಿಸುತ್ತಿವೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರರಾದ ರಾಮದಾಸ್ ಅಠಾವಳೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಯ ಬಣಕ್ಕೆ ರಾಮದಾಸ್ ಅಠಾವಳೆ ಮುಖ್ಯಸ್ಥರಾಗಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೈದರಾಬಾದ್‌ನಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಮಾತನಾಡುತ್ತಾ “ಭಾರತಾಂಬೆಯ ಮಗ, ಅವನು ಯಾವುದೇ ಭಾಷೆ ಮಾತನಾಡಲಿ, ಯಾವುದೇ ಪ್ರದೇಶದಿಂದ ಬಂದಿರಲಿ, ಯಾವುದೇ ರೀತಿಯ ಪೂಜೆಯನ್ನು ಅನುಸರಿಸಲಿ ಅಥವಾ ಯಾವುದೇ ಪೂಜೆಯನ್ನು ನಂಬದಿರಲಿ, ಆತ ಹಿಂದೂ ಆಗಿರುತ್ತಾನೆ… ಈ ನಿಟ್ಟಿನಲ್ಲಿ ಸಂಘದ ಪ್ರಕಾರ ಭಾರತದ ಎಲ್ಲಾ 130 ಕೋಟಿ ಜನರು ಹಿಂದೂ ಸಮಾಜದವರು” ಎಂದು ಅವರು ಹೇಳಿದ್ದರು.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ ಮುಖ್ಯಸ್ಥರ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಎಸ್‌ಪಿಯ ಮಾಯಾವತಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಕೂಡ ಖಂಡಿಸಿದ್ದಾರೆ. “ಭಾರತವು ಕೇವಲ ಒಂದು ಧರ್ಮವನ್ನು ಹೊಂದಿರಬೇಕು ಎಂದು ಆರ್‌ಎಸ್ಎಸ್ ಬಯಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವು ಅಸ್ತಿತ್ವದಲ್ಲಿರುವವರೆಗೂ ಅದು ಆಗುವುದಿಲ್ಲ. ಈ ಭರತ ಭೂಮಿ ಎಲ್ಲಾ ಧರ್ಮಗಳನ್ನು ನಂಬುತ್ತದೆ” ಎಂದು ಓವೈಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆರೆಸ್ಸೆಸ್ಸಿನ ಚೀಫ್ ಗೆಸ್ಟ್ ಮೋಹನ್ ಭಗವತ್ ರವರು ದೇಶವನ್ನು ಮುನ್ನಡೆಸುವ ಕಾರ್ಯತಂತ್ರ ನರೇಂದ್ರ ಮೋದಿಯವರ ಅಥವಾ ಮೋಹನ್ ಭಗವತ್ ರವರ ದ ಜನಸಾಮಾನ್ಯರು ಅರ್ಥಮಾಡಿಕೊಳ್ಳುವುದೇ ಕಷ್ಟಕರವಾಗಿದೆ

    ಮೋದಿ ಪ್ರಧಾನಮಂತ್ರಿಯಾಗಲು ಪ್ರಣಾಳಿಕೆಗಳು ಹೇಳಿದ್ದೇ ಬೇರೆ
    ಮೇಕ್ ಇನ್ ಇಂಡಿಯಾ ಸ್ವಚ್ಛ ಭಾರತ ಭ್ರಷ್ಟಾಚಾರ ಮುಕ್ತ ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡುವವರಿಗೆ ಕಠಿಣ ಕ್ರಮ ಉದ್ಯೋಗ ವ್ಯವಸ್ಥೆ ರೂಪಿಸುವುದಾಗಿ ಹೇಳಿ ಇದನ್ನೆಲ್ಲ ಸಂಪೂರ್ಣ ಮರೆತು

    ಮೋಹನ್ ಭಗವತರ ಕೈಗೊಂಬೆಯಾಗಿ ಹಿಂದುತ್ವವನ್ನು
    ಜನಸಾಮಾನ್ಯರ ಎಲ್ಲರ ಮೇಲೆ ನಿರಂತರವಾಗಿ ಹಿಂಸಾಚಾರ ಕೋಮುಗಲಭೆಗಳಿಗೆ ಕರೆ ಕೊಡುತ್ತಿರುವ ಕೆಲಸಗಳನ್ನು ಮಾಡುತ್ತಿದ್ದಾರೆ

    ವಲಸೆ ಬಂದಿರುವ ಆರ್ಯರ ಮಾತುಗಳ ಮುಂದೆ ಪ್ರಾಮಾಣಿಕ ನಿಂದಿಸಿರುವ ಮೋದಿಯನ್ನು ಜನಸಾಮಾನ್ಯರು ನಂಬಿ ಓಟು ಕೊಟ್ಟಿದ್ದ ತಪ್ಪಿಗೆ ಅನುಭವಿಸಲೇಬೇಕು ಆರೆಸಸ್ ಸನಾತನ ಸಂಸ್ಥೆಗೆ ಮಾರಾಟ ವಾಗಿದ್ದಾರೆ ಎಂದೆನಿಸುತ್ತದೆ
    ನರೇಂದ್ರ ಮೋದಿಯವರು

    ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಅಧಿಕಾರಿ ಮಾಡುತ್ತಿರುವವರು ಎಂದರೆ ತಪ್ಪಾಗಲಾರದು ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...