Homeಮುಖಪುಟಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ...

ಭಾರತದ 130 ಕೋಟಿ ಜನರು ಹಿಂದೂಗಳು ಎಂದ ಮೋಹನ್‌ ಭಾಗವತ್‌, ಅಲ್ಲ ಎಂದು ರಾಮದಾಸ್‌ ಅಠಾವಳೆ…

- Advertisement -
- Advertisement -

ಸಂಘವು ಭಾರತದ 130 ಕೋಟಿ ಜನರನ್ನು ಅವರ ಧರ್ಮ ಮತ್ತು ಸಂಸ್ಕೃತಿಯನ್ನು ಲೆಕ್ಕಿಸದೆ ಹಿಂದೂ ಸಮಾಜವೆಂದು ಪರಿಗಣಿಸುತ್ತದೆ ಎಂದಿರುವ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಬಿಜೆಪಿ ಮಿತ್ರಪಕ್ಷ ಆರ್‌ಪಿಐನ ರಾಮದಾಸ್‌ ಅಠಾವಳೆ ಖಂಡಿಸಿದ್ದಾರೆ.

“ಎಲ್ಲಾ ಭಾರತೀಯರು ಹಿಂದೂಗಳು ಎಂದು ಹೇಳುವುದು ಸರಿಯಲ್ಲ. ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದ ಕಾಲವೊಂದಿತ್ತು. ಮೋಹನ್ ಭಾಗವತ್‌ರವರು ಎಲ್ಲರೂ ಭಾರತೀಯರು ಎಂದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧ, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಲಿಂಗಾಯತ ಮುಂತಾದ ನಂಬಿಕೆಗಳುಳ್ಳ ವಿವಿಧ ಸಮುದಾಯಗಳು ಇಲ್ಲಿ ವಾಸಿಸುತ್ತಿವೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರರಾದ ರಾಮದಾಸ್ ಅಠಾವಳೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಯ ಬಣಕ್ಕೆ ರಾಮದಾಸ್ ಅಠಾವಳೆ ಮುಖ್ಯಸ್ಥರಾಗಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೈದರಾಬಾದ್‌ನಲ್ಲಿ ನಡೆದ ಸಂಘಟನೆಯ ಸಭೆಯಲ್ಲಿ ಮಾತನಾಡುತ್ತಾ “ಭಾರತಾಂಬೆಯ ಮಗ, ಅವನು ಯಾವುದೇ ಭಾಷೆ ಮಾತನಾಡಲಿ, ಯಾವುದೇ ಪ್ರದೇಶದಿಂದ ಬಂದಿರಲಿ, ಯಾವುದೇ ರೀತಿಯ ಪೂಜೆಯನ್ನು ಅನುಸರಿಸಲಿ ಅಥವಾ ಯಾವುದೇ ಪೂಜೆಯನ್ನು ನಂಬದಿರಲಿ, ಆತ ಹಿಂದೂ ಆಗಿರುತ್ತಾನೆ… ಈ ನಿಟ್ಟಿನಲ್ಲಿ ಸಂಘದ ಪ್ರಕಾರ ಭಾರತದ ಎಲ್ಲಾ 130 ಕೋಟಿ ಜನರು ಹಿಂದೂ ಸಮಾಜದವರು” ಎಂದು ಅವರು ಹೇಳಿದ್ದರು.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ನ ಮುಖ್ಯಸ್ಥರ ಹೇಳಿಕೆಗಳನ್ನು ವಿರೋಧ ಪಕ್ಷಗಳಾದ ಬಿಎಸ್‌ಪಿಯ ಮಾಯಾವತಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸ್ಸಾದುದ್ದೀನ್ ಒವೈಸಿ ಕೂಡ ಖಂಡಿಸಿದ್ದಾರೆ. “ಭಾರತವು ಕೇವಲ ಒಂದು ಧರ್ಮವನ್ನು ಹೊಂದಿರಬೇಕು ಎಂದು ಆರ್‌ಎಸ್ಎಸ್ ಬಯಸಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವು ಅಸ್ತಿತ್ವದಲ್ಲಿರುವವರೆಗೂ ಅದು ಆಗುವುದಿಲ್ಲ. ಈ ಭರತ ಭೂಮಿ ಎಲ್ಲಾ ಧರ್ಮಗಳನ್ನು ನಂಬುತ್ತದೆ” ಎಂದು ಓವೈಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆರೆಸ್ಸೆಸ್ಸಿನ ಚೀಫ್ ಗೆಸ್ಟ್ ಮೋಹನ್ ಭಗವತ್ ರವರು ದೇಶವನ್ನು ಮುನ್ನಡೆಸುವ ಕಾರ್ಯತಂತ್ರ ನರೇಂದ್ರ ಮೋದಿಯವರ ಅಥವಾ ಮೋಹನ್ ಭಗವತ್ ರವರ ದ ಜನಸಾಮಾನ್ಯರು ಅರ್ಥಮಾಡಿಕೊಳ್ಳುವುದೇ ಕಷ್ಟಕರವಾಗಿದೆ

    ಮೋದಿ ಪ್ರಧಾನಮಂತ್ರಿಯಾಗಲು ಪ್ರಣಾಳಿಕೆಗಳು ಹೇಳಿದ್ದೇ ಬೇರೆ
    ಮೇಕ್ ಇನ್ ಇಂಡಿಯಾ ಸ್ವಚ್ಛ ಭಾರತ ಭ್ರಷ್ಟಾಚಾರ ಮುಕ್ತ ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡುವವರಿಗೆ ಕಠಿಣ ಕ್ರಮ ಉದ್ಯೋಗ ವ್ಯವಸ್ಥೆ ರೂಪಿಸುವುದಾಗಿ ಹೇಳಿ ಇದನ್ನೆಲ್ಲ ಸಂಪೂರ್ಣ ಮರೆತು

    ಮೋಹನ್ ಭಗವತರ ಕೈಗೊಂಬೆಯಾಗಿ ಹಿಂದುತ್ವವನ್ನು
    ಜನಸಾಮಾನ್ಯರ ಎಲ್ಲರ ಮೇಲೆ ನಿರಂತರವಾಗಿ ಹಿಂಸಾಚಾರ ಕೋಮುಗಲಭೆಗಳಿಗೆ ಕರೆ ಕೊಡುತ್ತಿರುವ ಕೆಲಸಗಳನ್ನು ಮಾಡುತ್ತಿದ್ದಾರೆ

    ವಲಸೆ ಬಂದಿರುವ ಆರ್ಯರ ಮಾತುಗಳ ಮುಂದೆ ಪ್ರಾಮಾಣಿಕ ನಿಂದಿಸಿರುವ ಮೋದಿಯನ್ನು ಜನಸಾಮಾನ್ಯರು ನಂಬಿ ಓಟು ಕೊಟ್ಟಿದ್ದ ತಪ್ಪಿಗೆ ಅನುಭವಿಸಲೇಬೇಕು ಆರೆಸಸ್ ಸನಾತನ ಸಂಸ್ಥೆಗೆ ಮಾರಾಟ ವಾಗಿದ್ದಾರೆ ಎಂದೆನಿಸುತ್ತದೆ
    ನರೇಂದ್ರ ಮೋದಿಯವರು

    ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಅಧಿಕಾರಿ ಮಾಡುತ್ತಿರುವವರು ಎಂದರೆ ತಪ್ಪಾಗಲಾರದು ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...