Homeಮುಖಪುಟಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಭಾನುವಾರ (ಜೂ.22) ಎನ್‌ಐಎ ಬಂಧಿಸಿದೆ.

ಬಂಧಿತರ ವಿಚಾರಣೆ ವೇಳೆ ದಾಳಿ ನಡೆಸಿ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಮತ್ತು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸಂಬಂಧಿಸಿದವರು ಎಂಬುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

“ಪಹಲ್ಗಾಮ್ ದಾಳಿಕೋರರ ಗುರುತುಗಳು ಹಿಂದೆ ನಂಬಲಾಗಿದ್ದಕ್ಕಿಂತ ಈ ಭಿನ್ನವಾಗಿದೆ. ದಾಳಿ ನಡೆದ ಎರಡು ದಿನಗಳ ಬಳಿಕ ಜಮ್ಮು ಕಾಶ್ಮೀರ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಎನ್ನಲಾದ ಹಾಶಿಮ್ ಮೂಸಾ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಹಾಗೂ ಕಾಶ್ಮೀರದ ಸ್ಥಳೀಯ ವ್ಯಕ್ತಿ ಎನ್ನಲಾದ ಆದಿಲ್ ಹುಸೇನ್ ಥೋಕರ್ ಎಂಬವರು ಶಂಕಿತ ಆರೋಪಿಗಳು ಎಂದು ರೇಖಾಚಿತ್ರ ಬಿಡುಗಡೆ ಮಾಡಿತ್ತು. ಆದರೆ, ಆ ರೇಖಾಚಿತ್ರಗಳಲ್ಲಿರುವ ಮೂವರು ಪಹಲ್ಗಾಮ್ ದಾಳಿಕೋರರಲ್ಲ ಎಂಬುವುದಾಗಿ ಎನ್‌ಐಎ ಮೂಲಗಳು ಹೇಳುತ್ತಿವೆ ಎಂದು indianexpress.com ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 20ರಂದು ಶ್ರೀನಗರ-ಸೋನಾಮಾರ್ಗ್ ಹೆದ್ದಾರಿಯಲ್ಲಿ ಝಡ್-ಮೋರ್ಹ್ ಸುರಂಗವನ್ನು ನಿರ್ಮಿಸುತ್ತಿದ್ದ ಕಂಪನಿಯ ಏಳು ಉದ್ಯೋಗಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಸುಲೇಮಾನ್ ಶಾ ದಾಳಿಕೋರರಲ್ಲಿ ಒಬ್ಬನೆಂದು ಮೂಲಗಳು ತಿಳಿಸಿವೆ. ದಾಳಿಯ ಸಹ ಆರೋಪಿ ಜುನೈದ್ ರಂಜಾನ್ ಭಟ್ ಡಿಸೆಂಬರ್ 4ರಂದು ಜಮ್ಮು ಕಾಶ್ಮೀರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿ ವಿವರಿಸಿದೆ.

ಪೊಲೀಸರು ಹತ್ಯೆಯಾದ ಜುನೈದ್ ಫೋನ್‌ನಿಂದ ಆತನ ಜೊತೆಗೆ ಇತರ ಮೂವರು ಉಗ್ರರ ಫೋಟೋವನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ನಂತರ ಈ ಫೋಟೋಗಳು ವೈರಲ್ ಆಗಿತ್ತು. ಮೂಲಗಳು ಹೇಳುವಂತೆ, ಇದನ್ನು ಜಮ್ಮು ಕಾಶ್ಮೀರ ಪೊಲೀಸರು ರೇಖಾಚಿತ್ರಗಳಿಗೆ ಆಧಾರವಾಗಿ ಬಳಸಿಕೊಂಡಿದ್ದಾರೆ.

ತನಿಖೆಯ ಸಮಯದಲ್ಲಿ, ಕೇಂದ್ರೀಯ ಸಂಸ್ಥೆಗಳು ಮತ್ತು ಎನ್‌ಐಎ ಜುನೈದ್ ಫೋನ್‌ನಿಂದ ವಶಪಡಿಸಿಕೊಂಡ ವಿಭಿನ್ನ ಫೋಟೋಗಳನ್ನು ಬಂಧಿತ ಇಬ್ಬರು ಸ್ಥಳೀಯರಿಗೆ ತೋರಿಸಿವೆ. ಅವರು ಪಹಲ್ಗಾಮ್ ದಾಳಿಯ ಎರಡು ದಿನಗಳ ಮೊದಲು ತಮ್ಮನ್ನು ಭೇಟಿ ಮಾಡಿದ್ದ ವ್ಯಕ್ತಿಗಳನ್ನು ಗುರುತಿಸಿದ್ದಾರೆ.

“ಹೊಸ ಫೋಟೋಗಳನ್ನು ಹಲವಾರು ಸಾಕ್ಷಿಗಳಿಗೂ ತೋರಿಸಲಾಗಿದೆ. ಅವರು ಕೂಡ ಫೋಟೋದಲ್ಲಿರುವ ವ್ಯಕ್ತಿಗಳು ಪಹಲ್ಗಾಮ್ ದಾಳಿ ಸ್ಥಳದಲ್ಲಿ ಇದ್ದಿದ್ದನ್ನು ದೃಢಪಡಿಸಿದ್ದಾರೆ. ಝಡ್-ಮೋರ್ಹ್ ದಾಳಿಯ ಆರೋಪಿ ಸುಲೇಮಾನ್ ಶಾ ಸೇರಿದಂತೆ ಮೂವರೂ ಪಾಕಿಸ್ತಾನಿ ಪ್ರಜೆಗಳು” ಎಂಬುವುದಾಗಿ ಮೂಲಗಳು ತಿಳಿಸಿವೆ ಎಂದು indianexpress.com ಹೇಳಿದೆ.

ಕೇಂದ್ರ ಸಂಸ್ಥೆಗಳು ಮತ್ತು ಎನ್‌ಐಎ ಹಿಂದಿನ ಪ್ರಕರಣಗಳನ್ನು ಮರುಪರಿಶೀಲಿಸುತ್ತಿವೆ ಮತ್ತು ಈ ದಾಳಿಕೋರರ ವಿರುದ್ಧ ಬಲವಾದ ಪ್ರಕರಣವನ್ನು ರೂಪಿಸುವುದಕ್ಕಾಗಿ ಬ್ಯಾಲಿಸ್ಟಿಕ್ ವರದಿಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿವೆ ಎಂದಿದೆ.

ಆಗಸ್ಟ್ 2023ರಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಸೇನಾ ಸಿಬ್ಬಂದಿಯ ಹತ್ಯೆಯಲ್ಲಿ ಮತ್ತು ಕಳೆದ ವರ್ಷ ಮೇ ತಿಂಗಳಲ್ಲಿ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿ ಇತರ ನಾಲ್ವರು ಗಾಯಗೊಂಡಿದ್ದ ಮತ್ತೊಂದು ದಾಳಿಯಲ್ಲಿ ಸುಲೇಮಾನ್ ಭಾಗಿಯಾಗಿದ್ದಾನೆಯೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎನ್‌ಐಎ ಇಬ್ಬರು ಸ್ಥಳೀಯರನ್ನು ಬಂಧಿಸುವ ಮೊದಲು ಸ್ಥಳೀಯ ಕುದುರೆ ಸೇವಾದಾರರು, ವ್ಯಾಪಾರಿಗಳು ಮತ್ತು ಫೋಟೋಗ್ರಾಫರ್‌ಗಳು ಸೇರಿದಂತೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದೆ.

ಬಂಧಿತ ಪರ್ವೈಜ್‌ಗೆ ಕುದುರೆ ಸೇವಾದಾರ ಸ್ನೇಹಿತರಿದ್ದಾರೆ. ಅವರ ಪತ್ನಿಯರು ತಮ್ಮ ಮನೆಗೆ ಭೇಟಿ ನೀಡಿದವರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಏಪ್ರಿಲ್ 20ರಂದು ಸಂಜೆ ಮೂವರು ದಾಳಿಕೋರರು ಪರ್ವೈಜ್ ಮತ್ತು ಇತರರ ಮನೆಗಳಿಗೆ ಭೇಟಿ ನೀಡಿ ಆಹಾರ ಪ್ಯಾಕ್ ಮಾಡಿ ಕೊಡಲು ಹೇಳಿದ್ದಾರೆ. ಅಲ್ಲಿಂದ ಹೊರಡುವ ಮೊದಲು, ಅವರು ಮನೆಯವರಿಗೆ ಸ್ವಲ್ಪ ಹಣ ನೀಡಿ ತಮ್ಮ ಭೇಟಿಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದಿದೆ.

ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಹಿಲ್ ಪಾರ್ಕ್‌ನಲ್ಲಿರುವ ಗುಡಿಸಲಿನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ತಿಳಿದೇ ಆಶ್ರಯ ನೀಡಿದ್ದಾರೆ. ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ಸಾಗಣೆ ಬೆಂಬಲವನ್ನು ಒದಗಿಸಿದ್ದಾರೆ. 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...