Homeಮುಖಪುಟಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಭಾನುವಾರ (ಜೂ.22) ಎನ್‌ಐಎ ಬಂಧಿಸಿದೆ.

ಬಂಧಿತರ ವಿಚಾರಣೆ ವೇಳೆ ದಾಳಿ ನಡೆಸಿ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಮತ್ತು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸಂಬಂಧಿಸಿದವರು ಎಂಬುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

“ಪಹಲ್ಗಾಮ್ ದಾಳಿಕೋರರ ಗುರುತುಗಳು ಹಿಂದೆ ನಂಬಲಾಗಿದ್ದಕ್ಕಿಂತ ಈ ಭಿನ್ನವಾಗಿದೆ. ದಾಳಿ ನಡೆದ ಎರಡು ದಿನಗಳ ಬಳಿಕ ಜಮ್ಮು ಕಾಶ್ಮೀರ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಎನ್ನಲಾದ ಹಾಶಿಮ್ ಮೂಸಾ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಹಾಗೂ ಕಾಶ್ಮೀರದ ಸ್ಥಳೀಯ ವ್ಯಕ್ತಿ ಎನ್ನಲಾದ ಆದಿಲ್ ಹುಸೇನ್ ಥೋಕರ್ ಎಂಬವರು ಶಂಕಿತ ಆರೋಪಿಗಳು ಎಂದು ರೇಖಾಚಿತ್ರ ಬಿಡುಗಡೆ ಮಾಡಿತ್ತು. ಆದರೆ, ಆ ರೇಖಾಚಿತ್ರಗಳಲ್ಲಿರುವ ಮೂವರು ಪಹಲ್ಗಾಮ್ ದಾಳಿಕೋರರಲ್ಲ ಎಂಬುವುದಾಗಿ ಎನ್‌ಐಎ ಮೂಲಗಳು ಹೇಳುತ್ತಿವೆ ಎಂದು indianexpress.com ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 20ರಂದು ಶ್ರೀನಗರ-ಸೋನಾಮಾರ್ಗ್ ಹೆದ್ದಾರಿಯಲ್ಲಿ ಝಡ್-ಮೋರ್ಹ್ ಸುರಂಗವನ್ನು ನಿರ್ಮಿಸುತ್ತಿದ್ದ ಕಂಪನಿಯ ಏಳು ಉದ್ಯೋಗಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಸುಲೇಮಾನ್ ಶಾ ದಾಳಿಕೋರರಲ್ಲಿ ಒಬ್ಬನೆಂದು ಮೂಲಗಳು ತಿಳಿಸಿವೆ. ದಾಳಿಯ ಸಹ ಆರೋಪಿ ಜುನೈದ್ ರಂಜಾನ್ ಭಟ್ ಡಿಸೆಂಬರ್ 4ರಂದು ಜಮ್ಮು ಕಾಶ್ಮೀರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿ ವಿವರಿಸಿದೆ.

ಪೊಲೀಸರು ಹತ್ಯೆಯಾದ ಜುನೈದ್ ಫೋನ್‌ನಿಂದ ಆತನ ಜೊತೆಗೆ ಇತರ ಮೂವರು ಉಗ್ರರ ಫೋಟೋವನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ನಂತರ ಈ ಫೋಟೋಗಳು ವೈರಲ್ ಆಗಿತ್ತು. ಮೂಲಗಳು ಹೇಳುವಂತೆ, ಇದನ್ನು ಜಮ್ಮು ಕಾಶ್ಮೀರ ಪೊಲೀಸರು ರೇಖಾಚಿತ್ರಗಳಿಗೆ ಆಧಾರವಾಗಿ ಬಳಸಿಕೊಂಡಿದ್ದಾರೆ.

ತನಿಖೆಯ ಸಮಯದಲ್ಲಿ, ಕೇಂದ್ರೀಯ ಸಂಸ್ಥೆಗಳು ಮತ್ತು ಎನ್‌ಐಎ ಜುನೈದ್ ಫೋನ್‌ನಿಂದ ವಶಪಡಿಸಿಕೊಂಡ ವಿಭಿನ್ನ ಫೋಟೋಗಳನ್ನು ಬಂಧಿತ ಇಬ್ಬರು ಸ್ಥಳೀಯರಿಗೆ ತೋರಿಸಿವೆ. ಅವರು ಪಹಲ್ಗಾಮ್ ದಾಳಿಯ ಎರಡು ದಿನಗಳ ಮೊದಲು ತಮ್ಮನ್ನು ಭೇಟಿ ಮಾಡಿದ್ದ ವ್ಯಕ್ತಿಗಳನ್ನು ಗುರುತಿಸಿದ್ದಾರೆ.

“ಹೊಸ ಫೋಟೋಗಳನ್ನು ಹಲವಾರು ಸಾಕ್ಷಿಗಳಿಗೂ ತೋರಿಸಲಾಗಿದೆ. ಅವರು ಕೂಡ ಫೋಟೋದಲ್ಲಿರುವ ವ್ಯಕ್ತಿಗಳು ಪಹಲ್ಗಾಮ್ ದಾಳಿ ಸ್ಥಳದಲ್ಲಿ ಇದ್ದಿದ್ದನ್ನು ದೃಢಪಡಿಸಿದ್ದಾರೆ. ಝಡ್-ಮೋರ್ಹ್ ದಾಳಿಯ ಆರೋಪಿ ಸುಲೇಮಾನ್ ಶಾ ಸೇರಿದಂತೆ ಮೂವರೂ ಪಾಕಿಸ್ತಾನಿ ಪ್ರಜೆಗಳು” ಎಂಬುವುದಾಗಿ ಮೂಲಗಳು ತಿಳಿಸಿವೆ ಎಂದು indianexpress.com ಹೇಳಿದೆ.

ಕೇಂದ್ರ ಸಂಸ್ಥೆಗಳು ಮತ್ತು ಎನ್‌ಐಎ ಹಿಂದಿನ ಪ್ರಕರಣಗಳನ್ನು ಮರುಪರಿಶೀಲಿಸುತ್ತಿವೆ ಮತ್ತು ಈ ದಾಳಿಕೋರರ ವಿರುದ್ಧ ಬಲವಾದ ಪ್ರಕರಣವನ್ನು ರೂಪಿಸುವುದಕ್ಕಾಗಿ ಬ್ಯಾಲಿಸ್ಟಿಕ್ ವರದಿಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿವೆ ಎಂದಿದೆ.

ಆಗಸ್ಟ್ 2023ರಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಸೇನಾ ಸಿಬ್ಬಂದಿಯ ಹತ್ಯೆಯಲ್ಲಿ ಮತ್ತು ಕಳೆದ ವರ್ಷ ಮೇ ತಿಂಗಳಲ್ಲಿ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿ ಇತರ ನಾಲ್ವರು ಗಾಯಗೊಂಡಿದ್ದ ಮತ್ತೊಂದು ದಾಳಿಯಲ್ಲಿ ಸುಲೇಮಾನ್ ಭಾಗಿಯಾಗಿದ್ದಾನೆಯೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎನ್‌ಐಎ ಇಬ್ಬರು ಸ್ಥಳೀಯರನ್ನು ಬಂಧಿಸುವ ಮೊದಲು ಸ್ಥಳೀಯ ಕುದುರೆ ಸೇವಾದಾರರು, ವ್ಯಾಪಾರಿಗಳು ಮತ್ತು ಫೋಟೋಗ್ರಾಫರ್‌ಗಳು ಸೇರಿದಂತೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದೆ.

ಬಂಧಿತ ಪರ್ವೈಜ್‌ಗೆ ಕುದುರೆ ಸೇವಾದಾರ ಸ್ನೇಹಿತರಿದ್ದಾರೆ. ಅವರ ಪತ್ನಿಯರು ತಮ್ಮ ಮನೆಗೆ ಭೇಟಿ ನೀಡಿದವರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಏಪ್ರಿಲ್ 20ರಂದು ಸಂಜೆ ಮೂವರು ದಾಳಿಕೋರರು ಪರ್ವೈಜ್ ಮತ್ತು ಇತರರ ಮನೆಗಳಿಗೆ ಭೇಟಿ ನೀಡಿ ಆಹಾರ ಪ್ಯಾಕ್ ಮಾಡಿ ಕೊಡಲು ಹೇಳಿದ್ದಾರೆ. ಅಲ್ಲಿಂದ ಹೊರಡುವ ಮೊದಲು, ಅವರು ಮನೆಯವರಿಗೆ ಸ್ವಲ್ಪ ಹಣ ನೀಡಿ ತಮ್ಮ ಭೇಟಿಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದಿದೆ.

ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಹಿಲ್ ಪಾರ್ಕ್‌ನಲ್ಲಿರುವ ಗುಡಿಸಲಿನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ತಿಳಿದೇ ಆಶ್ರಯ ನೀಡಿದ್ದಾರೆ. ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ಸಾಗಣೆ ಬೆಂಬಲವನ್ನು ಒದಗಿಸಿದ್ದಾರೆ. 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...