Homeಮುಖಪುಟಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಭಾನುವಾರ (ಜೂ.22) ಎನ್‌ಐಎ ಬಂಧಿಸಿದೆ.

ಬಂಧಿತರ ವಿಚಾರಣೆ ವೇಳೆ ದಾಳಿ ನಡೆಸಿ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಮತ್ತು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸಂಬಂಧಿಸಿದವರು ಎಂಬುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

“ಪಹಲ್ಗಾಮ್ ದಾಳಿಕೋರರ ಗುರುತುಗಳು ಹಿಂದೆ ನಂಬಲಾಗಿದ್ದಕ್ಕಿಂತ ಈ ಭಿನ್ನವಾಗಿದೆ. ದಾಳಿ ನಡೆದ ಎರಡು ದಿನಗಳ ಬಳಿಕ ಜಮ್ಮು ಕಾಶ್ಮೀರ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಎನ್ನಲಾದ ಹಾಶಿಮ್ ಮೂಸಾ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಹಾಗೂ ಕಾಶ್ಮೀರದ ಸ್ಥಳೀಯ ವ್ಯಕ್ತಿ ಎನ್ನಲಾದ ಆದಿಲ್ ಹುಸೇನ್ ಥೋಕರ್ ಎಂಬವರು ಶಂಕಿತ ಆರೋಪಿಗಳು ಎಂದು ರೇಖಾಚಿತ್ರ ಬಿಡುಗಡೆ ಮಾಡಿತ್ತು. ಆದರೆ, ಆ ರೇಖಾಚಿತ್ರಗಳಲ್ಲಿರುವ ಮೂವರು ಪಹಲ್ಗಾಮ್ ದಾಳಿಕೋರರಲ್ಲ ಎಂಬುವುದಾಗಿ ಎನ್‌ಐಎ ಮೂಲಗಳು ಹೇಳುತ್ತಿವೆ ಎಂದು indianexpress.com ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 20ರಂದು ಶ್ರೀನಗರ-ಸೋನಾಮಾರ್ಗ್ ಹೆದ್ದಾರಿಯಲ್ಲಿ ಝಡ್-ಮೋರ್ಹ್ ಸುರಂಗವನ್ನು ನಿರ್ಮಿಸುತ್ತಿದ್ದ ಕಂಪನಿಯ ಏಳು ಉದ್ಯೋಗಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಸುಲೇಮಾನ್ ಶಾ ದಾಳಿಕೋರರಲ್ಲಿ ಒಬ್ಬನೆಂದು ಮೂಲಗಳು ತಿಳಿಸಿವೆ. ದಾಳಿಯ ಸಹ ಆರೋಪಿ ಜುನೈದ್ ರಂಜಾನ್ ಭಟ್ ಡಿಸೆಂಬರ್ 4ರಂದು ಜಮ್ಮು ಕಾಶ್ಮೀರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿ ವಿವರಿಸಿದೆ.

ಪೊಲೀಸರು ಹತ್ಯೆಯಾದ ಜುನೈದ್ ಫೋನ್‌ನಿಂದ ಆತನ ಜೊತೆಗೆ ಇತರ ಮೂವರು ಉಗ್ರರ ಫೋಟೋವನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ನಂತರ ಈ ಫೋಟೋಗಳು ವೈರಲ್ ಆಗಿತ್ತು. ಮೂಲಗಳು ಹೇಳುವಂತೆ, ಇದನ್ನು ಜಮ್ಮು ಕಾಶ್ಮೀರ ಪೊಲೀಸರು ರೇಖಾಚಿತ್ರಗಳಿಗೆ ಆಧಾರವಾಗಿ ಬಳಸಿಕೊಂಡಿದ್ದಾರೆ.

ತನಿಖೆಯ ಸಮಯದಲ್ಲಿ, ಕೇಂದ್ರೀಯ ಸಂಸ್ಥೆಗಳು ಮತ್ತು ಎನ್‌ಐಎ ಜುನೈದ್ ಫೋನ್‌ನಿಂದ ವಶಪಡಿಸಿಕೊಂಡ ವಿಭಿನ್ನ ಫೋಟೋಗಳನ್ನು ಬಂಧಿತ ಇಬ್ಬರು ಸ್ಥಳೀಯರಿಗೆ ತೋರಿಸಿವೆ. ಅವರು ಪಹಲ್ಗಾಮ್ ದಾಳಿಯ ಎರಡು ದಿನಗಳ ಮೊದಲು ತಮ್ಮನ್ನು ಭೇಟಿ ಮಾಡಿದ್ದ ವ್ಯಕ್ತಿಗಳನ್ನು ಗುರುತಿಸಿದ್ದಾರೆ.

“ಹೊಸ ಫೋಟೋಗಳನ್ನು ಹಲವಾರು ಸಾಕ್ಷಿಗಳಿಗೂ ತೋರಿಸಲಾಗಿದೆ. ಅವರು ಕೂಡ ಫೋಟೋದಲ್ಲಿರುವ ವ್ಯಕ್ತಿಗಳು ಪಹಲ್ಗಾಮ್ ದಾಳಿ ಸ್ಥಳದಲ್ಲಿ ಇದ್ದಿದ್ದನ್ನು ದೃಢಪಡಿಸಿದ್ದಾರೆ. ಝಡ್-ಮೋರ್ಹ್ ದಾಳಿಯ ಆರೋಪಿ ಸುಲೇಮಾನ್ ಶಾ ಸೇರಿದಂತೆ ಮೂವರೂ ಪಾಕಿಸ್ತಾನಿ ಪ್ರಜೆಗಳು” ಎಂಬುವುದಾಗಿ ಮೂಲಗಳು ತಿಳಿಸಿವೆ ಎಂದು indianexpress.com ಹೇಳಿದೆ.

ಕೇಂದ್ರ ಸಂಸ್ಥೆಗಳು ಮತ್ತು ಎನ್‌ಐಎ ಹಿಂದಿನ ಪ್ರಕರಣಗಳನ್ನು ಮರುಪರಿಶೀಲಿಸುತ್ತಿವೆ ಮತ್ತು ಈ ದಾಳಿಕೋರರ ವಿರುದ್ಧ ಬಲವಾದ ಪ್ರಕರಣವನ್ನು ರೂಪಿಸುವುದಕ್ಕಾಗಿ ಬ್ಯಾಲಿಸ್ಟಿಕ್ ವರದಿಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿವೆ ಎಂದಿದೆ.

ಆಗಸ್ಟ್ 2023ರಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಸೇನಾ ಸಿಬ್ಬಂದಿಯ ಹತ್ಯೆಯಲ್ಲಿ ಮತ್ತು ಕಳೆದ ವರ್ಷ ಮೇ ತಿಂಗಳಲ್ಲಿ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿ ಇತರ ನಾಲ್ವರು ಗಾಯಗೊಂಡಿದ್ದ ಮತ್ತೊಂದು ದಾಳಿಯಲ್ಲಿ ಸುಲೇಮಾನ್ ಭಾಗಿಯಾಗಿದ್ದಾನೆಯೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎನ್‌ಐಎ ಇಬ್ಬರು ಸ್ಥಳೀಯರನ್ನು ಬಂಧಿಸುವ ಮೊದಲು ಸ್ಥಳೀಯ ಕುದುರೆ ಸೇವಾದಾರರು, ವ್ಯಾಪಾರಿಗಳು ಮತ್ತು ಫೋಟೋಗ್ರಾಫರ್‌ಗಳು ಸೇರಿದಂತೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದೆ.

ಬಂಧಿತ ಪರ್ವೈಜ್‌ಗೆ ಕುದುರೆ ಸೇವಾದಾರ ಸ್ನೇಹಿತರಿದ್ದಾರೆ. ಅವರ ಪತ್ನಿಯರು ತಮ್ಮ ಮನೆಗೆ ಭೇಟಿ ನೀಡಿದವರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಏಪ್ರಿಲ್ 20ರಂದು ಸಂಜೆ ಮೂವರು ದಾಳಿಕೋರರು ಪರ್ವೈಜ್ ಮತ್ತು ಇತರರ ಮನೆಗಳಿಗೆ ಭೇಟಿ ನೀಡಿ ಆಹಾರ ಪ್ಯಾಕ್ ಮಾಡಿ ಕೊಡಲು ಹೇಳಿದ್ದಾರೆ. ಅಲ್ಲಿಂದ ಹೊರಡುವ ಮೊದಲು, ಅವರು ಮನೆಯವರಿಗೆ ಸ್ವಲ್ಪ ಹಣ ನೀಡಿ ತಮ್ಮ ಭೇಟಿಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದಿದೆ.

ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಹಿಲ್ ಪಾರ್ಕ್‌ನಲ್ಲಿರುವ ಗುಡಿಸಲಿನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ತಿಳಿದೇ ಆಶ್ರಯ ನೀಡಿದ್ದಾರೆ. ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ಸಾಗಣೆ ಬೆಂಬಲವನ್ನು ಒದಗಿಸಿದ್ದಾರೆ. 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...