Homeಮುಖಪುಟಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

ಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

- Advertisement -
- Advertisement -

ಬಿಜೆಪಿ ನೇತೃತ್ವದ ಮೋದಿ ಸರ್ಕಾರ ಮತ್ತೇ ರೈತರ ಮುಂದೆ ಮಂಡಿಯೂರಿದೆ. ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ರೈತರ ವಿರುದ್ಧ ಹಾಕಲಾಗಿರುವ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಅಮಾನತುಗೊಳಿಸಲಾವುದು ಎಂದು ಸರ್ಕಾರ ನಿರ್ಧರಿಸಿದ್ದು, ಹಾಗಾಗಿ ಕಳೆದ 15 ತಿಂಗಳುಗಳಿಂದ ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಒಕ್ಕೂಟ ಸರ್ಕಾರವು ಒತ್ತಾಯಿಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಎಂಎಸ್ಪಿ ಬೇಡಿಕೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವ ಭರವಸೆಯನ್ನು ಒಳಗೊಂಡಿರುವ ಒಂದು ಪ್ರಸ್ತಾವವನ್ನು ಸರ್ಕಾರವು ಮಂಗಳವಾರ ಸಂಜೆ ಕಳುಹಿಸಿದ್ದು, ಪೊಲೀಸ್ ಪ್ರಕರಣಗಳನ್ನು ಕೈಬಿಡುವ ಮೊದಲು ರೈತರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಆದರೆ ರೈತರು ಪ್ರತಿಭಟನೆ ವಾಪಸ್ ಪಡೆಯಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ರೈತ ಹೋರಾಟ ಗೆದ್ದದ್ದು – ಗೆಲ್ಲಬೇಕಾದ್ದು

ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಹಾಗೂ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು, ಇದೇ ರೀತಿಯಲ್ಲಿ ಒಕ್ಕೂಟ ಸರ್ಕಾರವು ರೈತರಿಗೆ ಆರ್ಥಿಕ ಪರಿಹಾರ ನೀಡಬೇಕಾದ ಅಗತ್ಯವನ್ನು ರೈತರು ಒತ್ತಿ ಹೇಳಿದ್ದಾರೆ.

ಎಂಎಸ್ಪಿಯನ್ನು ಕಾನೂನು ಬದ್ಧಗೊಳಿಸಲಾಗುವುದು ಎಂಬ ಬೇಡಿಕೆಯನ್ನ ಒಳಗೊಂಡಿರುವ ಸರ್ಕಾರದ ಹೊಸ ಪ್ರಸ್ತಾವದ ಬಗ್ಗೆ ಚರ್ಚಿಸಲು ಐದು ರೈತ ಮುಖಂಡರ ತಂಡವು ದೆಹಲಿಯಲ್ಲಿ ಚರ್ಚೆ ನಡೆಸಿದ್ದು, ಮುಂದಿನ ಹೋರಾಟದ ನಡೆ ನಿರ್ಧರಿಸಲಿದ್ದಾರೆ.

ಇಂದು ಮುಂಜಾನೆ, ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಿರಿಯ ಸಚಿವರನ್ನು ಭೇಟಿ ಮಾಡಿದ್ದು, ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ನಿನ್ನೆ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಬಹುತೇಕ ರೈತರ ಬೇಡಿಕೆಗಳಿಗೆ ಲಿಖಿತ ಭರವಸೆ ನೀಡಲು ಒಕ್ಕೂಟ ಸರ್ಕಾರ ಇಚ್ಛೆ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕೇಂದ್ರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದ SKM

ಸರ್ಕಾರ ರೈತರೊಂದಿಗೆ ಇಂದು ನಡೆದ ಮಾತುಕತೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅನುಮೋದಿಸಿದ ಪರಿಷ್ಕೃತ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಟ್ರಾಕ್ಟರ್‌ ಟು ಟ್ವಿಟರ್‌ ಹೇಳಿದೆ. “ನಿನ್ನೆ ಸರ್ಕಾರದ ಪ್ರಸ್ತಾವನೆಗೆ ರೈತರು ವ್ಯಕ್ತಪಡಿಸಿದ ಆಕ್ಷೇಪಣೆಗಳನ್ನು ಸ್ವೀಕರಿಸಿದ ನಂತರ ಸರ್ಕಾರವು ಹೊಸ ಪರಿಷ್ಕೃತ ಪ್ರಸ್ತಾವನೆಯನ್ನು ಕಳುಹಿಸಿದೆ. ಈ ಪರಿಷ್ಕೃತ ಪ್ರಸ್ತಾವನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಒಪ್ಪಿಗೆ ನೀಡಿದೆ. ಅಧಿಕೃತ ಪತ್ರ ಬರುವವರೆಗೆ ಸಂಯುಕ್ತ ಕಿಸಾನ್ ಮೋರ್ಚಾ ನಾಳೆ ಮಧ್ಯಾಹ್ನದ ಸಭೆಯಲ್ಲಿ ಈ ಪ್ರಸ್ತಾವನೆಯ ಕುರಿತು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ” ಎಂದು ಅದು ಟ್ವೀಟ್ ಮಾಡಿದೆ.

ಇದನ್ನೂ ಓದಿ:ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರು ರೈತರ ಮುಂಧೆ ಅಲ್ಲಾ ಕಳ್ಳ ನಕ್ಲಿ ರೈತರ ಮುಂಧೆ ತಲೆ ಬಾಗಿಧಾರೆ ಕಾರಣ ನಿಜವಾದ ರೈತರಿಗೆ ತೊಂದರೆ ಆಗಬಾರದೆಂದು ಇದು ನಮ್ಮ ದೇಶಕ್ಕಾಗಿ ಮೋದಿ ಅವರು ತಮ್ಮ ಅಸ್ತಿತ್ವ ಬಿಟ್ಟು ರೈತ ಪರ ಕಾಳಜಿ ತೋರಿದ ಹಾಗಾಗಿಧೆ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...