Homeಮುಖಪುಟಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

ಎಲ್ಲಾ ಪ್ರಕರಣಗಳು ತಕ್ಷಣವೇ ಅಮಾನತು: ರೈತರ ಮುಂದೆ ಮತ್ತೇ ಮಂಡಿಯೂರಿದ ಮೋದಿ ಸರ್ಕಾರ

- Advertisement -
- Advertisement -

ಬಿಜೆಪಿ ನೇತೃತ್ವದ ಮೋದಿ ಸರ್ಕಾರ ಮತ್ತೇ ರೈತರ ಮುಂದೆ ಮಂಡಿಯೂರಿದೆ. ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ರೈತರ ವಿರುದ್ಧ ಹಾಕಲಾಗಿರುವ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಅಮಾನತುಗೊಳಿಸಲಾವುದು ಎಂದು ಸರ್ಕಾರ ನಿರ್ಧರಿಸಿದ್ದು, ಹಾಗಾಗಿ ಕಳೆದ 15 ತಿಂಗಳುಗಳಿಂದ ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಒಕ್ಕೂಟ ಸರ್ಕಾರವು ಒತ್ತಾಯಿಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಎಂಎಸ್ಪಿ ಬೇಡಿಕೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವ ಭರವಸೆಯನ್ನು ಒಳಗೊಂಡಿರುವ ಒಂದು ಪ್ರಸ್ತಾವವನ್ನು ಸರ್ಕಾರವು ಮಂಗಳವಾರ ಸಂಜೆ ಕಳುಹಿಸಿದ್ದು, ಪೊಲೀಸ್ ಪ್ರಕರಣಗಳನ್ನು ಕೈಬಿಡುವ ಮೊದಲು ರೈತರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಆದರೆ ರೈತರು ಪ್ರತಿಭಟನೆ ವಾಪಸ್ ಪಡೆಯಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ರೈತ ಹೋರಾಟ ಗೆದ್ದದ್ದು – ಗೆಲ್ಲಬೇಕಾದ್ದು

ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಹಾಗೂ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು, ಇದೇ ರೀತಿಯಲ್ಲಿ ಒಕ್ಕೂಟ ಸರ್ಕಾರವು ರೈತರಿಗೆ ಆರ್ಥಿಕ ಪರಿಹಾರ ನೀಡಬೇಕಾದ ಅಗತ್ಯವನ್ನು ರೈತರು ಒತ್ತಿ ಹೇಳಿದ್ದಾರೆ.

ಎಂಎಸ್ಪಿಯನ್ನು ಕಾನೂನು ಬದ್ಧಗೊಳಿಸಲಾಗುವುದು ಎಂಬ ಬೇಡಿಕೆಯನ್ನ ಒಳಗೊಂಡಿರುವ ಸರ್ಕಾರದ ಹೊಸ ಪ್ರಸ್ತಾವದ ಬಗ್ಗೆ ಚರ್ಚಿಸಲು ಐದು ರೈತ ಮುಖಂಡರ ತಂಡವು ದೆಹಲಿಯಲ್ಲಿ ಚರ್ಚೆ ನಡೆಸಿದ್ದು, ಮುಂದಿನ ಹೋರಾಟದ ನಡೆ ನಿರ್ಧರಿಸಲಿದ್ದಾರೆ.

ಇಂದು ಮುಂಜಾನೆ, ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಿರಿಯ ಸಚಿವರನ್ನು ಭೇಟಿ ಮಾಡಿದ್ದು, ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ನಿನ್ನೆ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಬಹುತೇಕ ರೈತರ ಬೇಡಿಕೆಗಳಿಗೆ ಲಿಖಿತ ಭರವಸೆ ನೀಡಲು ಒಕ್ಕೂಟ ಸರ್ಕಾರ ಇಚ್ಛೆ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕೇಂದ್ರಕ್ಕೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 702 ರೈತರ ಪಟ್ಟಿ ಕಳುಹಿಸಿದ SKM

ಸರ್ಕಾರ ರೈತರೊಂದಿಗೆ ಇಂದು ನಡೆದ ಮಾತುಕತೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅನುಮೋದಿಸಿದ ಪರಿಷ್ಕೃತ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಟ್ರಾಕ್ಟರ್‌ ಟು ಟ್ವಿಟರ್‌ ಹೇಳಿದೆ. “ನಿನ್ನೆ ಸರ್ಕಾರದ ಪ್ರಸ್ತಾವನೆಗೆ ರೈತರು ವ್ಯಕ್ತಪಡಿಸಿದ ಆಕ್ಷೇಪಣೆಗಳನ್ನು ಸ್ವೀಕರಿಸಿದ ನಂತರ ಸರ್ಕಾರವು ಹೊಸ ಪರಿಷ್ಕೃತ ಪ್ರಸ್ತಾವನೆಯನ್ನು ಕಳುಹಿಸಿದೆ. ಈ ಪರಿಷ್ಕೃತ ಪ್ರಸ್ತಾವನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಒಪ್ಪಿಗೆ ನೀಡಿದೆ. ಅಧಿಕೃತ ಪತ್ರ ಬರುವವರೆಗೆ ಸಂಯುಕ್ತ ಕಿಸಾನ್ ಮೋರ್ಚಾ ನಾಳೆ ಮಧ್ಯಾಹ್ನದ ಸಭೆಯಲ್ಲಿ ಈ ಪ್ರಸ್ತಾವನೆಯ ಕುರಿತು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ” ಎಂದು ಅದು ಟ್ವೀಟ್ ಮಾಡಿದೆ.

ಇದನ್ನೂ ಓದಿ:ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರು ರೈತರ ಮುಂಧೆ ಅಲ್ಲಾ ಕಳ್ಳ ನಕ್ಲಿ ರೈತರ ಮುಂಧೆ ತಲೆ ಬಾಗಿಧಾರೆ ಕಾರಣ ನಿಜವಾದ ರೈತರಿಗೆ ತೊಂದರೆ ಆಗಬಾರದೆಂದು ಇದು ನಮ್ಮ ದೇಶಕ್ಕಾಗಿ ಮೋದಿ ಅವರು ತಮ್ಮ ಅಸ್ತಿತ್ವ ಬಿಟ್ಟು ರೈತ ಪರ ಕಾಳಜಿ ತೋರಿದ ಹಾಗಾಗಿಧೆ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...