HomeUncategorizedರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

ರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಟಾಪನಾ ಕಾರ್ಯಕ್ರಮವಿದ್ದು, ದೇಶದಾದ್ಯಂತ ಇರುವ ಎಲ್ಲಾ ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸಂಸ್ಥೆಗಳು ಮತ್ತು  ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಪ್ರತಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರಕಾರವು ಅಧಿಕಾರ ದುರುಪಯೋಗ ಪಡಿಸಿ ರಜೆಯನ್ನು ಘೋಷಣೆ ಮಾಡಿದೆ ಎಂದು ಆರೋಪಿಸಿದೆ.

ಅಪೂರ್ಣವಾಗದ ದೇವಾಲಯದ ಉದ್ಘಾಟನೆ ‘ಶಾಸ್ತ್ರಗಳಿಗೆ ವಿರುದ್ಧ’ ಎಂದು ಶಂಕಾರಾಚಾರ್ಯ ಮಠದ ಮಠಾಧೀಶರು ಸೇರಿ ಹಲವು ಹಿಂದೂ ಮಠಾಧೀಶರು ವಿರೋಧಿಸಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ರಾಮಮಂದಿರ ಉದ್ಘಾಟನೆಯನ್ನು ರಾಜಕೀಯಗೊಳಿಸಿದೆ ಎಂದು ಪ್ರತಿಪಕ್ಷಗಳು ಈ ಮೊದಲು ಟೀಕಿಸುತ್ತಾ ಬಂದಿದೆ. ಧರ್ಮದ ಜೊತೆ ರಾಜಕೀಯ ಮತ್ತು ಸಿಎಂ, ಪ್ರಧಾನಿಗಳು ಸೇರಿ ಆಡಳಿತ ಯಂತ್ರಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದು ಸಂವಿಧಾನ ಬಾಹಿರ ಮತ್ತು ಅಧಿಕಾರದ ದುರುಪಯೋಗವಾಗಿದೆ. ಇದೀಗ ಅಧಿಕಾರದ ದುರುಪಯೋಗ ಮಾಡಿಕೊಂಡು ಸಾರ್ವಜನಿಕ ರಜೆ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿದೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಬುಧವಾರ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಜನವರಿ 22ರಂದು ಮಧ್ಯಾಹ್ನ 2.30ರವರೆಗೆ  ಸರಕಾರಿ ಕಚೇರಿಗಳನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾಪನೆ ಸಮಾರಂಭವು ಜನವರಿ 22ರಂದು ಅಯೋಧ್ಯೆಯ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಧೀನದ ಹಣಕಾಸು ಸೇವೆಗಳ ಇಲಾಖೆಯು ಪ್ರತ್ಯೇಕ ಆದೇಶದಲ್ಲಿ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಸಾರ್ವಜನಿಕ ವಲಯದ ವಿಮಾ ಕಂಪನಿಗಳು, ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ಅರ್ಧ ದಿನದ ರಜೆಯನ್ನು ಪಡೆಯಲಿದೆ. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಂದರ್ಭ ಇದು ಉದ್ಯೋಗಿಗಳಿಗೆ ರಾಮ್ ಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ.

ಈ ಮೊದಲು ಮಾದ್ಯಮಗಳ ಜೊತೆ ಮಾತನಾಡಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನ ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ತಿಳಿಸಿದ್ದರು.

ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಲಾಗಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ವಿಪಕ್ಷಗಳಿಂದ ಟೀಕೆ:

ರಾಮಮಂದಿರ ಪ್ರಾಣಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ:ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....