HomeUncategorizedರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

ರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಟಾಪನಾ ಕಾರ್ಯಕ್ರಮವಿದ್ದು, ದೇಶದಾದ್ಯಂತ ಇರುವ ಎಲ್ಲಾ ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸಂಸ್ಥೆಗಳು ಮತ್ತು  ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಪ್ರತಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರಕಾರವು ಅಧಿಕಾರ ದುರುಪಯೋಗ ಪಡಿಸಿ ರಜೆಯನ್ನು ಘೋಷಣೆ ಮಾಡಿದೆ ಎಂದು ಆರೋಪಿಸಿದೆ.

ಅಪೂರ್ಣವಾಗದ ದೇವಾಲಯದ ಉದ್ಘಾಟನೆ ‘ಶಾಸ್ತ್ರಗಳಿಗೆ ವಿರುದ್ಧ’ ಎಂದು ಶಂಕಾರಾಚಾರ್ಯ ಮಠದ ಮಠಾಧೀಶರು ಸೇರಿ ಹಲವು ಹಿಂದೂ ಮಠಾಧೀಶರು ವಿರೋಧಿಸಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ರಾಮಮಂದಿರ ಉದ್ಘಾಟನೆಯನ್ನು ರಾಜಕೀಯಗೊಳಿಸಿದೆ ಎಂದು ಪ್ರತಿಪಕ್ಷಗಳು ಈ ಮೊದಲು ಟೀಕಿಸುತ್ತಾ ಬಂದಿದೆ. ಧರ್ಮದ ಜೊತೆ ರಾಜಕೀಯ ಮತ್ತು ಸಿಎಂ, ಪ್ರಧಾನಿಗಳು ಸೇರಿ ಆಡಳಿತ ಯಂತ್ರಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದು ಸಂವಿಧಾನ ಬಾಹಿರ ಮತ್ತು ಅಧಿಕಾರದ ದುರುಪಯೋಗವಾಗಿದೆ. ಇದೀಗ ಅಧಿಕಾರದ ದುರುಪಯೋಗ ಮಾಡಿಕೊಂಡು ಸಾರ್ವಜನಿಕ ರಜೆ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿದೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಬುಧವಾರ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಜನವರಿ 22ರಂದು ಮಧ್ಯಾಹ್ನ 2.30ರವರೆಗೆ  ಸರಕಾರಿ ಕಚೇರಿಗಳನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾಪನೆ ಸಮಾರಂಭವು ಜನವರಿ 22ರಂದು ಅಯೋಧ್ಯೆಯ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಧೀನದ ಹಣಕಾಸು ಸೇವೆಗಳ ಇಲಾಖೆಯು ಪ್ರತ್ಯೇಕ ಆದೇಶದಲ್ಲಿ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಸಾರ್ವಜನಿಕ ವಲಯದ ವಿಮಾ ಕಂಪನಿಗಳು, ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ಅರ್ಧ ದಿನದ ರಜೆಯನ್ನು ಪಡೆಯಲಿದೆ. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಂದರ್ಭ ಇದು ಉದ್ಯೋಗಿಗಳಿಗೆ ರಾಮ್ ಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ.

ಈ ಮೊದಲು ಮಾದ್ಯಮಗಳ ಜೊತೆ ಮಾತನಾಡಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನ ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ತಿಳಿಸಿದ್ದರು.

ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಲಾಗಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ವಿಪಕ್ಷಗಳಿಂದ ಟೀಕೆ:

ರಾಮಮಂದಿರ ಪ್ರಾಣಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ:ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...