HomeUncategorizedರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

ರಾಮಮಂದಿರ ಉದ್ಘಾಟನೆ; ಅಧಿಕಾರ ದುರುಪಯೋಗ ಪಡಿಸಿ ಸರಕಾರಿ ರಜೆ ಘೋಷಣೆ; ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಟಾಪನಾ ಕಾರ್ಯಕ್ರಮವಿದ್ದು, ದೇಶದಾದ್ಯಂತ ಇರುವ ಎಲ್ಲಾ ಕೇಂದ್ರ ಸರ್ಕಾರದ ಅಧೀನದ ಕಚೇರಿಗಳು, ಸಂಸ್ಥೆಗಳು ಮತ್ತು  ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಪ್ರತಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರಕಾರವು ಅಧಿಕಾರ ದುರುಪಯೋಗ ಪಡಿಸಿ ರಜೆಯನ್ನು ಘೋಷಣೆ ಮಾಡಿದೆ ಎಂದು ಆರೋಪಿಸಿದೆ.

ಅಪೂರ್ಣವಾಗದ ದೇವಾಲಯದ ಉದ್ಘಾಟನೆ ‘ಶಾಸ್ತ್ರಗಳಿಗೆ ವಿರುದ್ಧ’ ಎಂದು ಶಂಕಾರಾಚಾರ್ಯ ಮಠದ ಮಠಾಧೀಶರು ಸೇರಿ ಹಲವು ಹಿಂದೂ ಮಠಾಧೀಶರು ವಿರೋಧಿಸಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ರಾಮಮಂದಿರ ಉದ್ಘಾಟನೆಯನ್ನು ರಾಜಕೀಯಗೊಳಿಸಿದೆ ಎಂದು ಪ್ರತಿಪಕ್ಷಗಳು ಈ ಮೊದಲು ಟೀಕಿಸುತ್ತಾ ಬಂದಿದೆ. ಧರ್ಮದ ಜೊತೆ ರಾಜಕೀಯ ಮತ್ತು ಸಿಎಂ, ಪ್ರಧಾನಿಗಳು ಸೇರಿ ಆಡಳಿತ ಯಂತ್ರಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದು ಸಂವಿಧಾನ ಬಾಹಿರ ಮತ್ತು ಅಧಿಕಾರದ ದುರುಪಯೋಗವಾಗಿದೆ. ಇದೀಗ ಅಧಿಕಾರದ ದುರುಪಯೋಗ ಮಾಡಿಕೊಂಡು ಸಾರ್ವಜನಿಕ ರಜೆ ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿದೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಬುಧವಾರ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಜನವರಿ 22ರಂದು ಮಧ್ಯಾಹ್ನ 2.30ರವರೆಗೆ  ಸರಕಾರಿ ಕಚೇರಿಗಳನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾಪನೆ ಸಮಾರಂಭವು ಜನವರಿ 22ರಂದು ಅಯೋಧ್ಯೆಯ ಮಧ್ಯಾಹ್ನ 12.20ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಧೀನದ ಹಣಕಾಸು ಸೇವೆಗಳ ಇಲಾಖೆಯು ಪ್ರತ್ಯೇಕ ಆದೇಶದಲ್ಲಿ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಸಾರ್ವಜನಿಕ ವಲಯದ ವಿಮಾ ಕಂಪನಿಗಳು, ಸಾರ್ವಜನಿಕ ವಲಯದ ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ಅರ್ಧ ದಿನದ ರಜೆಯನ್ನು ಪಡೆಯಲಿದೆ. ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಸಂದರ್ಭ ಇದು ಉದ್ಯೋಗಿಗಳಿಗೆ ರಾಮ್ ಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ.

ಈ ಮೊದಲು ಮಾದ್ಯಮಗಳ ಜೊತೆ ಮಾತನಾಡಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನ ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ತಿಳಿಸಿದ್ದರು.

ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಲಾಗಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ವಿಪಕ್ಷಗಳಿಂದ ಟೀಕೆ:

ರಾಮಮಂದಿರ ಪ್ರಾಣಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ:ಭಾರತದಲ್ಲಿ ಕಠಿಣ ಕಾಯ್ದೆಯಡಿಯಲ್ಲಿ ಜೈಲಿನಲ್ಲಿರುವ ಪತ್ರಕರ್ತರೆಷ್ಟು?: ಸಿಪಿಜೆ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...