Homeಮುಖಪುಟಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ”ಭಾರತವು ಹಿಂದೂ ರಾಷ್ಟ್ರ ಏಕೆಂದರೆ ದೇಶದ ಎಲ್ಲಾ ನಾಗರಿಕರು ಹಿಂದೂಗಳು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಅವರು ಟ್ವಿಟರ್‌ನಲ್ಲಿ ಸಂದರ್ಶನದ ಕ್ಲಿಪ್‌ನ್ನು ಸಹ ಹಂಚಿಕೊಂಡಿದ್ದಾರೆ.

ಹಿಂದೂಗಳೇ ಪರಮಾಧಿಕಾರ ಹೊಂದುವುದನ್ನು ಹಿಂದೂ ರಾಷ್ಟ್ರ ಬಯಸುತ್ತದೆ. ಅವರ ಪ್ರಕಾರ, ಭಾರತದ ಜಾತ್ಯತೀತ ಸಂವಿಧಾನವನ್ನು ಕಿತ್ತುಹಾಕುವ ಮೂಲಕ ಮತ್ತು ಅಸ್ತಿತ್ವದಲ್ಲಿರುವ ಸಂಸ್ಥೆಗಳನ್ನು ಕಂಟ್ರೋಲ್ ಮಾಡುವ ಅಧಿಕಾರವನ್ನು ಹಿಂದೂಗಳಿಗೆ ನೀಡುವ ಮೂಲಕ ಹಿಂದೂ ರಾಷ್ಟ್ರ ರಚಿಸುವುದಾಗಿದೆ.

ಆದಿತ್ಯನಾಥ್ ಅವರು, ಹಿಂದೂ ಎನ್ನುವುದು ಒಂದು ನಂಬಿಕೆ, ಧರ್ಮ ಅಥವಾ ಪಂಥಕ್ಕೆ ಸಂಬಂಧಿಸಿದ್ದಲ್ಲ, ಇದು ಸಾಂಸ್ಕೃತಿಕ ಪದವಾಗಿದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

”ಭಾರತದಿಂದ ಯಾರಾದರೂ ಹಜ್‌ಗೆ ಹೋದರೆ, ಅವರನ್ನು ಅಲ್ಲಿ ಹಿಂದೂ ಎಂದು ಸಂಬೋಧಿಸುತ್ತಾರೆ. ಅಲ್ಲಿ ಯಾರೂ ಅವರನ್ನು ಹಾಜಿ ಎಂದು ನೋಡುವುದಿಲ್ಲ, ಯಾರೂ ಅವರನ್ನು ಇಸ್ಲಾಂ ಎಂದು ಸ್ವೀಕರಿಸುವುದಿಲ್ಲ, ಅಲ್ಲಿ ಅವರನ್ನು ಹಿಂದೂ ಎಂಬ ಹೆಸರಿನಿಂದ ಸಂಬೋಧಿಸಲಾಗುತ್ತದೆ. ಆ ಸಂದರ್ಭವನ್ನು ನೋಡಿದರೆ, ಭಾರತವು ಹಿಂದೂ ರಾಷ್ಟ್ರವಾಗಿದೆ, ಏಕೆಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದೂವಾಗಿದ್ದಾನೆ” ಎಂದು ಮುಖ್ಯಮಂತ್ರಿ ಎಬಿಪಿಗೆ ತಿಳಿಸಿದರು.

ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರನ್ನು ಹಿಂದೂಗಳು ಎಂದು ಕರೆಯಲಾಗುತ್ತದೆ ಮತ್ತು ಪ್ರತಿಯೊಬ್ಬರು ತಮ್ಮನ್ನ ತಾವು ಅದೇ ದೃಷ್ಟಿಕೋನದಲ್ಲಿ ನೋಡಿದರೆ, ಅವರಿಗೆ ಅದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆದಿತ್ಯನಾಥ್ ಹೇಳಿದರು.

”ನಾವು ಹಿಂದೂವನ್ನು ಧರ್ಮ, ನಂಬಿಕೆ ಮತ್ತು ಪಂಥದೊಂದಿಗೆ ಜೋಡಿಸಿದರೆ, ನಾವು ಹಿಂದೂ ಪದವನ್ನು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ..” ಎಂದು ಆದಿತ್ಯನಾಥ್ ಹೇಳಿದರು. ಇದೇ ವೇಳೆ ಅವರು, “ಪ್ರತಿಯೊಬ್ಬ ಭಾರತಿಯನು ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿರಬೇಕು, ಅದು ನಮ್ಮ ಮಾರ್ಗದರ್ಶಿಯಾಗಿದೆ” ಎಂದು ಹೇಳುತ್ತಾರೆ.

”ಅಖಂಡ ಭಾರತ” ಕಲ್ಪನೆಯು ನಿಜವಾಗಲಿದ್ದು, ಪಾಕಿಸ್ತಾನವು ಅಂತಿಮವಾಗಿ ಭಾರತದೊಳಗೆ ಸೇರಿಕೊಳ್ಳುತ್ತದೆ ಎಂದು ಸಂದರ್ಶನದಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

”ಅಖಂಡ ಭಾರತ” ಎಂಬುದು ಹಿಂದುತ್ವವಾದಿಗಳು ಪ್ರತಿಪಾದಿಸುವ ಪರಿಕಲ್ಪನೆಯಾಗಿದೆ. ಇದು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳು ಭಾರತದ ಭಾಗವಾಗಲಿದೆ ಎಂದು ಹೇಳುತ್ತದೆ.

”ಆಧ್ಯಾತ್ಮಿಕ ಜಗತ್ತಿನಲ್ಲಿ ಪಾಕಿಸ್ತಾನವು ವಾಸ್ತವವಲ್ಲ, ಆ ದೇಶ ಇಷ್ಟು ದಿನ ಬದುಕಿರುವುದೇ ಅದೃಷ್ಟದಿಂದ.. ಅದು ಇರುವವರೆಗೂ ಭೂಮಿಗೆ ಹೊರೆಯಾಗಲಿದೆ. ಶೀಘ್ರದಲ್ಲೇ ಭಾರತಕ್ಕೆ ಸೇರುವುದು ಪಾಕಿಸ್ತಾನದ  ಆಸಕ್ತಿಯಾಗಿದೆ” ಎಂದು ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...