Homeಮುಖಪುಟಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ”ಭಾರತವು ಹಿಂದೂ ರಾಷ್ಟ್ರ ಏಕೆಂದರೆ ದೇಶದ ಎಲ್ಲಾ ನಾಗರಿಕರು ಹಿಂದೂಗಳು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಅವರು ಟ್ವಿಟರ್‌ನಲ್ಲಿ ಸಂದರ್ಶನದ ಕ್ಲಿಪ್‌ನ್ನು ಸಹ ಹಂಚಿಕೊಂಡಿದ್ದಾರೆ.

ಹಿಂದೂಗಳೇ ಪರಮಾಧಿಕಾರ ಹೊಂದುವುದನ್ನು ಹಿಂದೂ ರಾಷ್ಟ್ರ ಬಯಸುತ್ತದೆ. ಅವರ ಪ್ರಕಾರ, ಭಾರತದ ಜಾತ್ಯತೀತ ಸಂವಿಧಾನವನ್ನು ಕಿತ್ತುಹಾಕುವ ಮೂಲಕ ಮತ್ತು ಅಸ್ತಿತ್ವದಲ್ಲಿರುವ ಸಂಸ್ಥೆಗಳನ್ನು ಕಂಟ್ರೋಲ್ ಮಾಡುವ ಅಧಿಕಾರವನ್ನು ಹಿಂದೂಗಳಿಗೆ ನೀಡುವ ಮೂಲಕ ಹಿಂದೂ ರಾಷ್ಟ್ರ ರಚಿಸುವುದಾಗಿದೆ.

ಆದಿತ್ಯನಾಥ್ ಅವರು, ಹಿಂದೂ ಎನ್ನುವುದು ಒಂದು ನಂಬಿಕೆ, ಧರ್ಮ ಅಥವಾ ಪಂಥಕ್ಕೆ ಸಂಬಂಧಿಸಿದ್ದಲ್ಲ, ಇದು ಸಾಂಸ್ಕೃತಿಕ ಪದವಾಗಿದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

”ಭಾರತದಿಂದ ಯಾರಾದರೂ ಹಜ್‌ಗೆ ಹೋದರೆ, ಅವರನ್ನು ಅಲ್ಲಿ ಹಿಂದೂ ಎಂದು ಸಂಬೋಧಿಸುತ್ತಾರೆ. ಅಲ್ಲಿ ಯಾರೂ ಅವರನ್ನು ಹಾಜಿ ಎಂದು ನೋಡುವುದಿಲ್ಲ, ಯಾರೂ ಅವರನ್ನು ಇಸ್ಲಾಂ ಎಂದು ಸ್ವೀಕರಿಸುವುದಿಲ್ಲ, ಅಲ್ಲಿ ಅವರನ್ನು ಹಿಂದೂ ಎಂಬ ಹೆಸರಿನಿಂದ ಸಂಬೋಧಿಸಲಾಗುತ್ತದೆ. ಆ ಸಂದರ್ಭವನ್ನು ನೋಡಿದರೆ, ಭಾರತವು ಹಿಂದೂ ರಾಷ್ಟ್ರವಾಗಿದೆ, ಏಕೆಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದೂವಾಗಿದ್ದಾನೆ” ಎಂದು ಮುಖ್ಯಮಂತ್ರಿ ಎಬಿಪಿಗೆ ತಿಳಿಸಿದರು.

ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರನ್ನು ಹಿಂದೂಗಳು ಎಂದು ಕರೆಯಲಾಗುತ್ತದೆ ಮತ್ತು ಪ್ರತಿಯೊಬ್ಬರು ತಮ್ಮನ್ನ ತಾವು ಅದೇ ದೃಷ್ಟಿಕೋನದಲ್ಲಿ ನೋಡಿದರೆ, ಅವರಿಗೆ ಅದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆದಿತ್ಯನಾಥ್ ಹೇಳಿದರು.

”ನಾವು ಹಿಂದೂವನ್ನು ಧರ್ಮ, ನಂಬಿಕೆ ಮತ್ತು ಪಂಥದೊಂದಿಗೆ ಜೋಡಿಸಿದರೆ, ನಾವು ಹಿಂದೂ ಪದವನ್ನು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ..” ಎಂದು ಆದಿತ್ಯನಾಥ್ ಹೇಳಿದರು. ಇದೇ ವೇಳೆ ಅವರು, “ಪ್ರತಿಯೊಬ್ಬ ಭಾರತಿಯನು ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿರಬೇಕು, ಅದು ನಮ್ಮ ಮಾರ್ಗದರ್ಶಿಯಾಗಿದೆ” ಎಂದು ಹೇಳುತ್ತಾರೆ.

”ಅಖಂಡ ಭಾರತ” ಕಲ್ಪನೆಯು ನಿಜವಾಗಲಿದ್ದು, ಪಾಕಿಸ್ತಾನವು ಅಂತಿಮವಾಗಿ ಭಾರತದೊಳಗೆ ಸೇರಿಕೊಳ್ಳುತ್ತದೆ ಎಂದು ಸಂದರ್ಶನದಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

”ಅಖಂಡ ಭಾರತ” ಎಂಬುದು ಹಿಂದುತ್ವವಾದಿಗಳು ಪ್ರತಿಪಾದಿಸುವ ಪರಿಕಲ್ಪನೆಯಾಗಿದೆ. ಇದು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳು ಭಾರತದ ಭಾಗವಾಗಲಿದೆ ಎಂದು ಹೇಳುತ್ತದೆ.

”ಆಧ್ಯಾತ್ಮಿಕ ಜಗತ್ತಿನಲ್ಲಿ ಪಾಕಿಸ್ತಾನವು ವಾಸ್ತವವಲ್ಲ, ಆ ದೇಶ ಇಷ್ಟು ದಿನ ಬದುಕಿರುವುದೇ ಅದೃಷ್ಟದಿಂದ.. ಅದು ಇರುವವರೆಗೂ ಭೂಮಿಗೆ ಹೊರೆಯಾಗಲಿದೆ. ಶೀಘ್ರದಲ್ಲೇ ಭಾರತಕ್ಕೆ ಸೇರುವುದು ಪಾಕಿಸ್ತಾನದ  ಆಸಕ್ತಿಯಾಗಿದೆ” ಎಂದು ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...