Homeಮುಖಪುಟಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ”ಭಾರತವು ಹಿಂದೂ ರಾಷ್ಟ್ರ ಏಕೆಂದರೆ ದೇಶದ ಎಲ್ಲಾ ನಾಗರಿಕರು ಹಿಂದೂಗಳು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಅವರು ಟ್ವಿಟರ್‌ನಲ್ಲಿ ಸಂದರ್ಶನದ ಕ್ಲಿಪ್‌ನ್ನು ಸಹ ಹಂಚಿಕೊಂಡಿದ್ದಾರೆ.

ಹಿಂದೂಗಳೇ ಪರಮಾಧಿಕಾರ ಹೊಂದುವುದನ್ನು ಹಿಂದೂ ರಾಷ್ಟ್ರ ಬಯಸುತ್ತದೆ. ಅವರ ಪ್ರಕಾರ, ಭಾರತದ ಜಾತ್ಯತೀತ ಸಂವಿಧಾನವನ್ನು ಕಿತ್ತುಹಾಕುವ ಮೂಲಕ ಮತ್ತು ಅಸ್ತಿತ್ವದಲ್ಲಿರುವ ಸಂಸ್ಥೆಗಳನ್ನು ಕಂಟ್ರೋಲ್ ಮಾಡುವ ಅಧಿಕಾರವನ್ನು ಹಿಂದೂಗಳಿಗೆ ನೀಡುವ ಮೂಲಕ ಹಿಂದೂ ರಾಷ್ಟ್ರ ರಚಿಸುವುದಾಗಿದೆ.

ಆದಿತ್ಯನಾಥ್ ಅವರು, ಹಿಂದೂ ಎನ್ನುವುದು ಒಂದು ನಂಬಿಕೆ, ಧರ್ಮ ಅಥವಾ ಪಂಥಕ್ಕೆ ಸಂಬಂಧಿಸಿದ್ದಲ್ಲ, ಇದು ಸಾಂಸ್ಕೃತಿಕ ಪದವಾಗಿದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

”ಭಾರತದಿಂದ ಯಾರಾದರೂ ಹಜ್‌ಗೆ ಹೋದರೆ, ಅವರನ್ನು ಅಲ್ಲಿ ಹಿಂದೂ ಎಂದು ಸಂಬೋಧಿಸುತ್ತಾರೆ. ಅಲ್ಲಿ ಯಾರೂ ಅವರನ್ನು ಹಾಜಿ ಎಂದು ನೋಡುವುದಿಲ್ಲ, ಯಾರೂ ಅವರನ್ನು ಇಸ್ಲಾಂ ಎಂದು ಸ್ವೀಕರಿಸುವುದಿಲ್ಲ, ಅಲ್ಲಿ ಅವರನ್ನು ಹಿಂದೂ ಎಂಬ ಹೆಸರಿನಿಂದ ಸಂಬೋಧಿಸಲಾಗುತ್ತದೆ. ಆ ಸಂದರ್ಭವನ್ನು ನೋಡಿದರೆ, ಭಾರತವು ಹಿಂದೂ ರಾಷ್ಟ್ರವಾಗಿದೆ, ಏಕೆಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದೂವಾಗಿದ್ದಾನೆ” ಎಂದು ಮುಖ್ಯಮಂತ್ರಿ ಎಬಿಪಿಗೆ ತಿಳಿಸಿದರು.

ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರನ್ನು ಹಿಂದೂಗಳು ಎಂದು ಕರೆಯಲಾಗುತ್ತದೆ ಮತ್ತು ಪ್ರತಿಯೊಬ್ಬರು ತಮ್ಮನ್ನ ತಾವು ಅದೇ ದೃಷ್ಟಿಕೋನದಲ್ಲಿ ನೋಡಿದರೆ, ಅವರಿಗೆ ಅದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆದಿತ್ಯನಾಥ್ ಹೇಳಿದರು.

”ನಾವು ಹಿಂದೂವನ್ನು ಧರ್ಮ, ನಂಬಿಕೆ ಮತ್ತು ಪಂಥದೊಂದಿಗೆ ಜೋಡಿಸಿದರೆ, ನಾವು ಹಿಂದೂ ಪದವನ್ನು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ..” ಎಂದು ಆದಿತ್ಯನಾಥ್ ಹೇಳಿದರು. ಇದೇ ವೇಳೆ ಅವರು, “ಪ್ರತಿಯೊಬ್ಬ ಭಾರತಿಯನು ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿರಬೇಕು, ಅದು ನಮ್ಮ ಮಾರ್ಗದರ್ಶಿಯಾಗಿದೆ” ಎಂದು ಹೇಳುತ್ತಾರೆ.

”ಅಖಂಡ ಭಾರತ” ಕಲ್ಪನೆಯು ನಿಜವಾಗಲಿದ್ದು, ಪಾಕಿಸ್ತಾನವು ಅಂತಿಮವಾಗಿ ಭಾರತದೊಳಗೆ ಸೇರಿಕೊಳ್ಳುತ್ತದೆ ಎಂದು ಸಂದರ್ಶನದಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

”ಅಖಂಡ ಭಾರತ” ಎಂಬುದು ಹಿಂದುತ್ವವಾದಿಗಳು ಪ್ರತಿಪಾದಿಸುವ ಪರಿಕಲ್ಪನೆಯಾಗಿದೆ. ಇದು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳು ಭಾರತದ ಭಾಗವಾಗಲಿದೆ ಎಂದು ಹೇಳುತ್ತದೆ.

”ಆಧ್ಯಾತ್ಮಿಕ ಜಗತ್ತಿನಲ್ಲಿ ಪಾಕಿಸ್ತಾನವು ವಾಸ್ತವವಲ್ಲ, ಆ ದೇಶ ಇಷ್ಟು ದಿನ ಬದುಕಿರುವುದೇ ಅದೃಷ್ಟದಿಂದ.. ಅದು ಇರುವವರೆಗೂ ಭೂಮಿಗೆ ಹೊರೆಯಾಗಲಿದೆ. ಶೀಘ್ರದಲ್ಲೇ ಭಾರತಕ್ಕೆ ಸೇರುವುದು ಪಾಕಿಸ್ತಾನದ  ಆಸಕ್ತಿಯಾಗಿದೆ” ಎಂದು ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...