Homeಮುಖಪುಟಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ”ಭಾರತವು ಹಿಂದೂ ರಾಷ್ಟ್ರ ಏಕೆಂದರೆ ದೇಶದ ಎಲ್ಲಾ ನಾಗರಿಕರು ಹಿಂದೂಗಳು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಅವರು ಟ್ವಿಟರ್‌ನಲ್ಲಿ ಸಂದರ್ಶನದ ಕ್ಲಿಪ್‌ನ್ನು ಸಹ ಹಂಚಿಕೊಂಡಿದ್ದಾರೆ.

ಹಿಂದೂಗಳೇ ಪರಮಾಧಿಕಾರ ಹೊಂದುವುದನ್ನು ಹಿಂದೂ ರಾಷ್ಟ್ರ ಬಯಸುತ್ತದೆ. ಅವರ ಪ್ರಕಾರ, ಭಾರತದ ಜಾತ್ಯತೀತ ಸಂವಿಧಾನವನ್ನು ಕಿತ್ತುಹಾಕುವ ಮೂಲಕ ಮತ್ತು ಅಸ್ತಿತ್ವದಲ್ಲಿರುವ ಸಂಸ್ಥೆಗಳನ್ನು ಕಂಟ್ರೋಲ್ ಮಾಡುವ ಅಧಿಕಾರವನ್ನು ಹಿಂದೂಗಳಿಗೆ ನೀಡುವ ಮೂಲಕ ಹಿಂದೂ ರಾಷ್ಟ್ರ ರಚಿಸುವುದಾಗಿದೆ.

ಆದಿತ್ಯನಾಥ್ ಅವರು, ಹಿಂದೂ ಎನ್ನುವುದು ಒಂದು ನಂಬಿಕೆ, ಧರ್ಮ ಅಥವಾ ಪಂಥಕ್ಕೆ ಸಂಬಂಧಿಸಿದ್ದಲ್ಲ, ಇದು ಸಾಂಸ್ಕೃತಿಕ ಪದವಾಗಿದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

”ಭಾರತದಿಂದ ಯಾರಾದರೂ ಹಜ್‌ಗೆ ಹೋದರೆ, ಅವರನ್ನು ಅಲ್ಲಿ ಹಿಂದೂ ಎಂದು ಸಂಬೋಧಿಸುತ್ತಾರೆ. ಅಲ್ಲಿ ಯಾರೂ ಅವರನ್ನು ಹಾಜಿ ಎಂದು ನೋಡುವುದಿಲ್ಲ, ಯಾರೂ ಅವರನ್ನು ಇಸ್ಲಾಂ ಎಂದು ಸ್ವೀಕರಿಸುವುದಿಲ್ಲ, ಅಲ್ಲಿ ಅವರನ್ನು ಹಿಂದೂ ಎಂಬ ಹೆಸರಿನಿಂದ ಸಂಬೋಧಿಸಲಾಗುತ್ತದೆ. ಆ ಸಂದರ್ಭವನ್ನು ನೋಡಿದರೆ, ಭಾರತವು ಹಿಂದೂ ರಾಷ್ಟ್ರವಾಗಿದೆ, ಏಕೆಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದೂವಾಗಿದ್ದಾನೆ” ಎಂದು ಮುಖ್ಯಮಂತ್ರಿ ಎಬಿಪಿಗೆ ತಿಳಿಸಿದರು.

ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರನ್ನು ಹಿಂದೂಗಳು ಎಂದು ಕರೆಯಲಾಗುತ್ತದೆ ಮತ್ತು ಪ್ರತಿಯೊಬ್ಬರು ತಮ್ಮನ್ನ ತಾವು ಅದೇ ದೃಷ್ಟಿಕೋನದಲ್ಲಿ ನೋಡಿದರೆ, ಅವರಿಗೆ ಅದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆದಿತ್ಯನಾಥ್ ಹೇಳಿದರು.

”ನಾವು ಹಿಂದೂವನ್ನು ಧರ್ಮ, ನಂಬಿಕೆ ಮತ್ತು ಪಂಥದೊಂದಿಗೆ ಜೋಡಿಸಿದರೆ, ನಾವು ಹಿಂದೂ ಪದವನ್ನು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ..” ಎಂದು ಆದಿತ್ಯನಾಥ್ ಹೇಳಿದರು. ಇದೇ ವೇಳೆ ಅವರು, “ಪ್ರತಿಯೊಬ್ಬ ಭಾರತಿಯನು ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿರಬೇಕು, ಅದು ನಮ್ಮ ಮಾರ್ಗದರ್ಶಿಯಾಗಿದೆ” ಎಂದು ಹೇಳುತ್ತಾರೆ.

”ಅಖಂಡ ಭಾರತ” ಕಲ್ಪನೆಯು ನಿಜವಾಗಲಿದ್ದು, ಪಾಕಿಸ್ತಾನವು ಅಂತಿಮವಾಗಿ ಭಾರತದೊಳಗೆ ಸೇರಿಕೊಳ್ಳುತ್ತದೆ ಎಂದು ಸಂದರ್ಶನದಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

”ಅಖಂಡ ಭಾರತ” ಎಂಬುದು ಹಿಂದುತ್ವವಾದಿಗಳು ಪ್ರತಿಪಾದಿಸುವ ಪರಿಕಲ್ಪನೆಯಾಗಿದೆ. ಇದು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳು ಭಾರತದ ಭಾಗವಾಗಲಿದೆ ಎಂದು ಹೇಳುತ್ತದೆ.

”ಆಧ್ಯಾತ್ಮಿಕ ಜಗತ್ತಿನಲ್ಲಿ ಪಾಕಿಸ್ತಾನವು ವಾಸ್ತವವಲ್ಲ, ಆ ದೇಶ ಇಷ್ಟು ದಿನ ಬದುಕಿರುವುದೇ ಅದೃಷ್ಟದಿಂದ.. ಅದು ಇರುವವರೆಗೂ ಭೂಮಿಗೆ ಹೊರೆಯಾಗಲಿದೆ. ಶೀಘ್ರದಲ್ಲೇ ಭಾರತಕ್ಕೆ ಸೇರುವುದು ಪಾಕಿಸ್ತಾನದ  ಆಸಕ್ತಿಯಾಗಿದೆ” ಎಂದು ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...